ರಸ್ತೆ ಅಭಿವೃದ್ದಿಯ ನೆಪದಲ್ಲಿ ಮರಗಳನ್ನು ಕಡಿಯಬಾರದು : ಕಸ್ತೂರಿ ಕರ್ನಾಟಕ ಜನಪರ ವೇದಿಕೆ -Vishwanews24

Featured, ರಾಜ್ಯ ನ್ಯೂಸ್

ಮದ್ದೂರು: ಸಾಲುಮರದ ತಿಮ್ಮಕ್ಕ ಕೋಲಾರ ಜಿಲ್ಲೆಯ ಬಾಗೇಪಲ್ಲಿ ಹಾಗೂ ಹಲಗೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳೆಸಿರುವ ಮರಗಳನ್ನು ಯಾವುದೇ ಕಾರಣಕ್ಕೂ ರಸ್ತೆ ಅಭಿವೃದ್ದಿಯ ನೆಪದಲ್ಲಿ ಮರಗಳನ್ನು ಕಡಿಯಬಾರದು ಎಂದು ಒತ್ತಾಯಿಸಿ ಪಟ್ಟಣದಲ್ಲಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ವತಿಯಿಂದ ಮರವನ್ನು ಅಪ್ಪಿಕೊಂಡು ವಿನೂತನ ಚಳವಳಿ ಮಾಡಿದರು.

ಸಾಲು ಮರದ ತಿಮ್ಮಕ್ಕನವರು ತಮ್ಮ ಮಕ್ಕಳಂತೆ ಹೆದ್ದಾರಿಯಲ್ಲಿ 274 ಮರಗಳನ್ನು ಕಷ್ಟಪಟ್ಟು ಬೆಳೆಸಿದ್ದಾರೆ. ರಸ್ತೆಗಳ ಅಭಿವೃದ್ಧಿಯ ನೆಪದಲ್ಲಿ ಮರಗಳನ್ನು ಕಡಿಯಬಾರದು ಎಂದು ಒತ್ತಾಯ ಮಾಡಿದರು.

ಈ ಕೂಡಲೇ ಸಿಎಂ ಕುಮಾರಸ್ವಾಮಿ ಅವರ ಆದೇಶದಂತೆ ಮರ ಕಡಿಯುವ ಉದ್ದೇಶ ಕೈ ಬಿಟ್ಟು ಪರ್ಯಾಯ ವ್ಯವಸ್ಥೆ ಮಾಡಲಿ. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಉಗ್ರ ಹೋರಾಟ ರೂಪಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪಟ್ಟಣದ ಪುರಸಭೆಯ ಅಧಿಕಾರಿಗಳು ಒಳಚರಂಡಿ ನೀರನ್ನು ಶಿಂಷಾನದಿಗೆ ಹಾಗೂ ಕೆಮ್ಮಣ್ಣುನಾಲೆಗೆ ಹರಿಸುತ್ತಿದ್ದಾರೆ. ಇದರಿಂದ ನೀರು ಕಲುಷಿತಗೊಳ್ಳುತ್ತಿದ್ದು. ಈ ನೀರನ್ನು ಕುಡಿಯಲು ಬಳಕೆ ಮಾಡುವ ಪ್ರಾಣಿ, ಪಕ್ಷಿಗಳಿಗೆ ಹಾಗೂ ದೈನಂದಿನ ಕಾರ್ಯಕ್ಕೆ ಬಳಸುವ ಜನರಿಗೆ ರೋಗ ರುಜಿನಗಳು ಬರುತ್ತಿದೆ. ಈ ಬಗ್ಗೆ ಪುರಸಭಾ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಎಂದು ಒತ್ತಾಯ ಮಾಡಿದರು.

ವೇದಿಕೆಯ ಜಿಲ್ಲಾಧ್ಯಕ್ಷ ವಿ.ಸಿ.ಉಮಾಶಂಕರ್, ಉಪಾಧ್ಯಕ್ಷ ಯರಗನಹಳ್ಳಿ ಮಹಲಿಂಗು, ತಾಲೂಕು ಅಧ್ಯಕ್ಷ ತಿಪ್ಪೂರು ರಾಜೇಶ್, ಮುಖಂಡರಾದ ಉಮೇಶ್, ವೀರಪ್ಪ, ಶೀನಪ್ಪ, ಮಿಲ್ಷ್ಟಿಕುಮಾರ್, ಜಗದೀಶ್, ಸಾಗರ್, ಕುದರಗುಂಡಿ ನಾಗರಾಜು, ಜವನೇಗೌಡ ಇನ್ನಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.