ರಾಜ್ಯದಲ್ಲಿ ಇವತ್ತಿನವರೆಗೂ ನಿಜೆಪಿ ಸ್ವಂತ ಬಲದಿಂದ ಅಧಿಕಾರಕ್ಕೆ ಬಂದೇ ಇಲ್ಲ : ಸಿದ್ದರಾಮಯ್ಯ – vishwanews24

Featured, ರಾಜ್ಯ ನ್ಯೂಸ್

ಬಿಜೆಪಿ ಎಂದರೆ ಸುಳ್ಳು. ಸುಳ್ಳಿನ ಉತ್ಪಾದನೆಯಲ್ಲಿ ಬಿಜೆಪಿ ನಿಸ್ಸೀಮರು..

ಬಿಜೆಪಿಯನ್ನು ರಾಜ್ಯದ ಜನತೆ ತಿರಸ್ಕರಿಸಿದ್ದಾರೆ.. 

ಆಪರೇಷನ್ ಕಮಲ ಮತ್ತು ಹಿಂಬಾಗಿಲ ಮೂಲಕ ಆಮಿಷವೊಡ್ಡಿ ನಮ್ಮ ಶಾಸಕರನ್ನು ಸೆಳೆದು ಅಧಿಕಾರಕ್ಕೇರಿದವರು.. 

ಜನರ ತೀರ್ಮಾನವನ್ನು ಒಪ್ಪಿ ವಿರೋಧ ಪಕ್ಷವಾಗಿ ಕೆಲಸ ಮಾಡಿ ಮತ್ತೆ ನಾವು ಅಧಿಕಾರಕ್ಕೆ ಬಂದಿದ್ದೇವೆ.. 

ಬೆಂಗಳೂರು : ರಾಜ್ಯದಲ್ಲಿ ಇವತ್ತಿನವರೆಗೂ ನಿಜೆಪಿ ಸ್ವಂತ ಬಲದಿಂದ ಅಧಿಕಾರಕ್ಕೆ ಬಂದೇ ಇಲ್ಲ. ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದಿದೆ ಅಷ್ಟೇ. ಬಿಜೆಪಿ ಎಂದರೆ ಸುಳ್ಳು. ಸುಳ್ಳಿನ ಉತ್ಪಾದನೆಯಲ್ಲಿ ಬಿಜೆಪಿ ನಿಸ್ಸೀಮರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣ ಮೇಲೆ ನಡೆದ ಚರ್ಚೆಗೆ ಉತ್ತರಿಸಿದ ಅವರು, ಅಭಿವೃದ್ಧಿ ಮರೆತು ಸುಳ್ಳುಗಳ ಆಸರೆ ಹೋಗಿದ್ದ ಬಿಜೆಪಿಯನ್ನು ರಾಜ್ಯದ ಜನತೆ ತಿರಸ್ಕರಿಸಿದ್ದಾರೆ. ಇದು ರಾಜ್ಯದ ಜನತೆ ಕೊಟ್ಟಿರುವ ಸರ್ಟಿಫಿಕೇಟ್. ಬಿಜೆಪಿಯಿಂದ ಬಿಎಸ್‌ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಜಗದೀಶ್‌ ಶೆಟ್ಟರ್, ಡಿವಿ ಸದಾನಂದ ಗೌಡ ಮುಖ್ಯಮಂತ್ರಿ ಆದರು. ಇವರ್ಯಾರೂ ಸ್ಪಷ್ಟ ಬಹುಮತ ಪಡೆದು ಮುಖ್ಯಮಂತ್ರಿ ಆದವರಲ್ಲ. ಆಪರೇಷನ್ ಕಮಲ ಮತ್ತು ಹಿಂಬಾಗಿಲ ಮೂಲಕ ಆಮಿಷವೊಡ್ಡಿ ನಮ್ಮ ಶಾಸಕರನ್ನು ಸೆಳೆದು ಅಧಿಕಾರಕ್ಕೇರಿದರು ಎಂದರು.

ಜನಪ್ರಿಯ ಕಿರುತೆರೆ ನಟ ರಿತುರಾಜ್ ಸಿಂಗ್ ಹೃದಯಾಘಾತದಿಂದ ನಿಧನ – vishwanews24

ಬಿಜೆಪಿಯವರು ಕರ್ನಾಟಕದಲ್ಲಿ ಇವತ್ತಿನವರೆಗೆ ಸ್ಪಷ್ಟ ಬಹುಮತ ಪಡೆದು ಅಧಿಕಾರ ನಡೆಸಿದ ಉದಾಹರಣೆ ಇದೆಯೇ, ಇದ್ದರೆ ತೋರಿಸಿ ಎಂದು ಸವಾಲು ಹಾಕಿದ ಸಿದ್ದರಾಮಯ್ಯ, ನಾವು 2013ರಲ್ಲಿ ಹಾಗೂ 2023ರಲ್ಲಿ ಸ್ಪಷ್ಟ ಬಹುಮತದ ಮೂಲಕ ಅಧಿಕಾರಕ್ಕೆ ಬಂದಿದ್ದೇವೆ. ಜನ ನಮ್ಮನ್ನು ತಿರಸ್ಕರಿಸಿ ವಿರೋಧ ಪಕ್ಷದಲ್ಲಿ ಕೂರಿಸಿದಾಗಲೂ ತಲೆಬಾಗಿ ಜನರ ತೀರ್ಮಾನವನ್ನು ಒಪ್ಪಿಕೊಂಡು ರಚನಾತ್ಮಕ ವಿರೋಧ ಪಕ್ಷವಾಗಿ ಕೆಲಸ ಮಾಡಿ ಮತ್ತೆ ಅಧಿಕಾರಕ್ಕೆ ಬಂದಿದ್ದೇವೆ. ನಾವು ಸುಳ್ಳುಗಳ ಆಸರೆಗೆ ಹೋಗಲಿಲ್ಲ ಎಂದು ಬಿಜೆಪಿಗೆ ಟಾಂಗ್‌ ನೀಡಿದರು.

ರಾಜ್ಯದಲ್ಲಿರುವ ಅನಧಿಕೃತ ಚರ್ಚ್‌ಗಳನ್ನು ಬುಲ್ಡೋಜರ್‌ನಿಂದ ಒಡೆಯಬೇಕು : ಸರ್ಕಾರಕ್ಕೆ ಪ್ರಮೋದ್ ಮುತಾಲಿಕ್ ಆಗ್ರಹ – vishwanews24

Leave a Reply