ರಾಜ್ಯದಲ್ಲಿ ಮತ್ತೆ ಯಡಿಯೂರಪ್ಪ ಸಿಎಂ ಆಗೋದು ಶತಸಿದ್ಧ : ಆರ್.ಅಶೋಕ್ -Vishwanews24
ಬೆಂಗಳೂರು,:ರಾಜ್ಯದಲ್ಲಿ ಮತ್ತೆ ಯಡಿಯೂರಪ್ಪ ಸಿಎಂ ಆಗೋದು ಶತಸಿದ್ಧ ಎಂದು ಮಾಜಿ ಡಿಸಿಎಂ ಆರ್.ಅಶೋಕ್ ಅವರು ಭವಿಷ್ಯ ನುಡಿದಿದ್ದಾರೆ.
ಈ ಕುರಿತು ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು ದೇಶದ ಜನ ಮತ್ತೊಮ್ಮೆ ನರೇಂದ್ರ ಮೋದಿಯನ್ನ ಆಯ್ಕೆ ಮಾಡಿರೋದು ಸ್ಪಷ್ಟವಾಗಿದೆ. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ ಬಿಜೆಪಿ ಅಲೆ ಪಸರಿಸಿದೆ. ಈ ಮೂಲಕ ಕಾಂಗ್ರೆಸ್ ಮುಕ್ತ ಭಾರತ ಆಗುತ್ತಿದೆ. ರಾಜ್ಯ ಮೈತ್ರಿ ಸರ್ಕಾರದ ಆಡಳಿತ ವೈಖರಿ ಏನು ಅನ್ನೋದು ಈಗ ಗೊತ್ತಾಗುತ್ತಿದೆ ಎಂದರು.
ಕಳೆದ ಬಾರಿಗಿಂತ ಬಿಜೆಪಿ ಈ ಬಾರಿ ಹೆಚ್ಚು ಸ್ಥಾನ ಗೆಲ್ಲಲಿದೆ. ರಾಜ್ಯದಲ್ಲಿ ಮೈತ್ರಿ ಪಕ್ಷ ಧೂಳಿಪಟವಾಗಿದ್ದು, ಯಡಿಯೂರಪ್ಪ ಸಿಎಂ ಆಗೋದು ಶತಸಿದ್ಧ. ಯಾರು ಸಿಎಂ ಆಗೊದನ್ನ ತಪ್ಪಿಸಲು ಆಗಲ್ಲ. ರಾಜ್ಯದ ಜನ ನಮ್ಮ ಜತೆ ಇದ್ದಾರೆ. ಕರ್ನಾಟಕದ ಅಭಿವೃದ್ಧಿ ಯಡಿಯೂರಪ್ಪ ಅವರಿಂದ ಆಗಲಿದೆ. ಈ ಫಲಿತಾಂಶ ಜನರು ಯಡಿಯೂರಪ್ಪ ಸಿಎಂ ಆಗಲಿ ಎಂದು ಸಂದೇಶ ಸಹ ನೀಡಿದ್ದಾರೆ. ರಾಜ್ಯದ ಜನರಿಗೆ ಅಭಿನಂದನೆಗಳು ಎಂದರು.
