ರಾಜ್ಯದಲ್ಲಿ ಮತ್ತೊಂದು ಭ್ರೂಣಲಿಂಗ ಪ್ರಕರಣ : ಸರ್ಕಾರಿ ಆಸ್ಪತ್ರೆ ಕ್ವಾರ್ಟಸ್ ನಲ್ಲೇ ನಡೆಯುತ್ತಿದ್ದ ಅಕ್ರಮ ದಂಧೆ – Vishwanews24
ರಾಜ್ಯದಲ್ಲಿ ಮತ್ತೊಂದು ಭ್ರೂಣಲಿಂಗ ಪ್ರಕರಣ ; ಸರ್ಕಾರಿ ಆಸ್ಪತ್ರೆ ಕ್ವಾರ್ಟಸ್ ನಲ್ಲೇ ನಡೆಯುತ್ತಿದ್ದ ಅಕ್ರಮ ದಂಧೆ
ಪಾಂಡವಪುರ : ಕಳೆದ ಅಕ್ಟೋಬರ್ ನಲ್ಲಿ ಮಂಡ್ಯ ತಾಲೂಕಿನ ಆಲೆಮನೆಯೊಂದರಲ್ಲಿ ಅಕ್ರಮವಾಗಿ ನಡೆಸಲಾಗುತ್ತಿದ್ದ ಭ್ರೂಣಲಿಂಗ ಪತ್ತೆ ದಂಧೆ ಬೆಳಕಿಗೆ ಬಂದ ಕೆಲವೇ ತಿಂಗಳಲ್ಲಿ ಪಾಂಡವಪುರದಲ್ಲಿ ಅಂಥದ್ದೇ ಪ್ರಕರಣ ಬೆಳಕಿಗೆ ಬಂದಿದೆ.ಪಾಂಡವಪುರದ ಸರ್ಕಾರಿ ಆಸ್ಪತ್ರೆಯ ಕ್ವಾರ್ಟಸ್ ನಲ್ಲಿಯೇ ಕಾನೂನು ಬಾಹಿರವಾಗಿ ಭ್ರೂಣ ಲಿಂಗ ಪತ್ತೆ ಮಾಡುತ್ತಿದ್ದ ವ್ಯೂಹವೊಂದನ್ನು ಜಿಲ್ಲಾ ಆರೋಗ್ಯಾಧಿಕಾರಿಗಳು ಮೇ 5ರ ತಡರಾತ್ರಿ ಭೇದಿಸಿದ್ದಾರೆ.
ಖಚಿತ ಮಾಹಿತಿಯನ್ನು ಆಧರಿಸಿ ಪಾಂಡವಪುರದ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಮೋಹನ್ ಹಾಗೂ ತಾಲೂಕು ಆರೋಗ್ಯಾಧಿಕಾರಿ ಡಾ. ಅರವಿಂದ್ ನೇತೃತ್ವದಲ್ಲಿ ಮೇ 6ರ ತಡರಾತ್ರಿ ದಾಳಿ ನಡೆಸಲಾಗಿದೆ. ದಾಳಿಯ ವೇಳೆ ಆರೋಪಿಗಳು ಸಿಕ್ಕಿಬಿದ್ದಿದ್ದು, ಅವರನ್ನು ಹಾಗೂ ಅವರು ಬಳಸುತ್ತಿದ್ದ ಯಂತ್ರೋಪಕರಣಗಳನ್ನೂ ವಶಕ್ಕೆ ಪಡೆಯಲಾಗಿದೆ ಎಂದು ಮೂಲಗಳು ತಿಳಿಸಿವೆ.
ಹಾಸನ ಲೈಂಗಿಕ ಹಿಂಸೆ ವಿಡಿಯೋಗಳನ್ನ ಸಾಮಾಜಿಕ ಜಾಲತಾಣಗಳಲ್ಲಿ ಹಂಚುವುದು ಶಿಕ್ಷಾರ್ಹ ಅಪರಾಧ : ಎಸ್ ಐಟಿ – Vishwanews24
ದಾಳಿಯ ವೇಳೆ ಮೈಸೂರು ಮೂಲದ ಮಹಿಳೆಯೊಬ್ಬರು ಅಲ್ಲಿ ಭ್ರೂಣಲಿಂಗ ಪರೀಕ್ಷೆಗೆ ಒಳಗಾಗಿದ್ದರು. ಡಾ. ಮೋಹನ್ ಹಾಗೂ ಡಾ. ಅರವಿಂದ್ ಹಾಗೂ ಪೊಲೀಸರು ಆ ಮಹಿಳೆಯನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ. ಅಷ್ಟೇ ಅಲ್ಲದೆ, ಪಾಂಡವಪುರ ಸರ್ಕಾರಿ ಆಸ್ಪತ್ರೆಯ ಆ್ಯಂಬುಲೆನ್ಸ್ ವಾಹನ ಚಾಲಕ ಆನಂದ್, ಆಸ್ಪತ್ರೆಯಲ್ಲಿ ಹೊರಗುತ್ತಿಗೆ ಮೇಲೆ ಕೆಲಸ ಮಾಡುತ್ತಿದ್ದ ‘ಡಿ’ ಗ್ರೂಪ್ ನ ಅಶ್ವಿನಿ ಹಾಗೂ ಮತ್ತೊಬ್ಬ ಮಹಿಳೆಯನ್ನು ಬಂಧಿಸಲಾಗಿದೆ ಎಂದು ಹೇಳಲಾಗಿದೆ. ಅವರು ಮಾತ್ರವಲ್ಲದೆ, ಕೆಲವು ವೈದ್ಯ ಸಿಬ್ಬಂದಿಯೂ ಷಾಮೀಲಾಗಿರುವ ಅನುಮಾನಗಳಿದ್ದು, ತನಿಖೆಯ ವೇಳೆ ಆ ಬಗ್ಗೆ ಎಲ್ಲಾ ವಿವರಗಳು ಬಹಿರಂಗಗೊಳ್ಳಿವೆ ಎಂದು ಹೇಳಲಾಗಿದೆ.
2023ರ ಅಕ್ಟೋಬರ್ ನಲ್ಲಿ ಮಂಡ್ಯ ಜಿಲ್ಲೆಯ ಆಲೆಮನೆಯೊಂದರಲ್ಲಿ ಅಕ್ರಮವಾಗಿ ನಡೆಸಲಾಗುತ್ತಿದ್ದ ಭ್ರೂಣ ಹತ್ಯೆ ದೊಡ್ಡ ದಂಧೆಯೊಂದನ್ನು ಪತ್ತೆ ಹಚ್ಚಿದ್ದ ಪೊಲೀಸರು, ಅದಕ್ಕೆ ಸಂಬಂದಿಸಿದ ಆರೋಪಿಗಳನ್ನು ಬಂಧಿಸಿದ್ದರು. ಮಂಡ್ಯ ತಾಲೂಕಿನ ಹುಳ್ಳನಹಳ್ಳಿ – ಕಾಡ್ಯ ಗ್ರಾಮದ ಕಬ್ಬಿನಗದ್ದೆಯ ಮಧ್ಯಭಾಗದಲ್ಲಿ ಅಲೆಮನೆಯ ಶೆಡ್ ಒಂದರಲ್ಲಿ ಈ ಕೃತ್ಯ ನಡೆಸಲಾಗುತ್ತಿತ್ತು.
ಇದು ಸುಳ್ಳು ಪ್ರಕರಣ, ನನ್ನ ವಿರುದ್ಧ ರಾಜಕೀಯ ಷಡ್ಯಂತ್ರ : ಎಸ್ಐಟಿ ಬಂಧನದ ಬಳಿಕ ರೇವಣ್ಣ – Vishwanews24
ಆಲೆಮನೆಯನ್ನು ಬಾಡಿಗೆ ಪಡೆದಿದ್ದ ಹುಳ್ಳೇನಹಳ್ಳಿ ಗ್ರಾಮದ ನಯನ್ ಹಾಗೂ ಪಾಂಡವಪುರ ತಾಲೂಕಿನ ಸುಂಕಾತೊಣ್ಣೂರು ಗ್ರಾಮ ನವೀನ್ ಎಂಬ ಯುವಕರು ಭಾವ – ಭಾಮೈದರಾಗಿದ್ದು, ಅವರು ಈ ಆಲೆಮನೆಯನ್ನು ಬಾಡಿಗೆ ಪಡೆದಿದ್ದರು. ಅದರ ಪಕ್ಕದಲ್ಲೇ ಶೆಡ್ ಒಂದನ್ನು ನಿರ್ಮಿಸಿದ್ದರು. ಅದರಲ್ಲಿ ಸ್ಕ್ಯಾನಿಂಗ್ ಮೆಷೀನ್ ಮತ್ತಿತರ ವೈದ್ಯಕೀಯ ಸಲಕರಣೆಗಳನ್ನಿಟ್ಟುಕೊಂಡು ಅವರು ಅಕ್ರಮವಾಗಿ ಭ್ರೂಣಲಿಂಗ ಪತ್ತೆ ಮಾಡುತ್ತಿದ್ದರು. ಅಲ್ಲಿ ಭ್ರೂಣವು ಹೆಣ್ಣು ಎಂದು ಪತ್ತೆಯಾದರೆ ಅಂಥ ಗರ್ಭಿಣಿಯರನ್ನು ಮೈಸೂರಿಗೆ ಕರೆದುಕೊಂಡು ಹೋಗಿ ಅಲ್ಲಿ ಖಾಸಗಿ ಕ್ಲಿನಿಕ್ ಗಳಲ್ಲಿ ಗರ್ಭಪಾತ ಮಾಡಿಸುತ್ತಿದ್ದರು ಎಂದು ಹೇಳಲಾಗಿದೆ
