ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಮಾಡುವ ಆಲೋಚನೆ ಇಲ್ಲ : ಇಂಧನ ಸಚಿವ ಸುನಿಲ್ ಕುಮಾರ್ ಸ್ಪಷ್ಟನೆ – Vishwanews24
ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಮಾಡುವ ಆಲೋಚನೆ ಇಲ್ಲ : ಇಂಧನ ಸಚಿವ ಸುನಿಲ್ ಕುಮಾರ್ ಸ್ಪಷ್ಟನೆ
ಬಾಗಲಕೋಟೆ : ಲೋಡ್ ಶೆಡ್ಡಿಂಗ್ ಆತಂಕದಲ್ಲಿದ್ದ ರಾಜ್ಯದ ಜನತೆಗೆ ನೆಮ್ಮದಿಯ ಸುದ್ದಿ ಸಿಕ್ಕಿದ್ದು, ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಮಾಡುವ ಆಲೋಚನೆ ಇಲ್ಲ ಎಂದು ಇಂಧನ ಸಚಿವ ವಿ. ಸುನೀಲ್ ಕುಮಾರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಲ್ಲಿದ್ದಲು ಕೊರತೆಯಿಂದ ಲೋಡ್ ಶೆಡ್ಡಿಂಗ್ ಮಾಡಲಾಗುತ್ತಿದೆ ಎಂಬ ವದಂತಿ ಹರಡಿದ್ದು, ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಮಾಡುವ ಆಲೋಚನೆ ಇಲ್ಲ ಎಂದು ಸುನಿಲ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಕಲ್ಲಿದ್ದಲಿನ ಕೊರತೆ ಕಾರಣಲ್ಲಿ ವಿದ್ಯುತ್ ಉತ್ಪಾದನೆ ಕಡಿಮೆಯಾಗಿಲ್ಲ. ಕಳೆದ 3 ದಿನಗಳಿಂದ ಮಳೆಯಾಗುತ್ತಿದ್ದು, ವಿದ್ಯುತ್ ಬೇಡಿಕೆ ತಗ್ಗಿದೆ. ಹೀಗಾಗಿ ರಾಯಚೂರಿನ 3 ಯೂನಿಟ್ ಸ್ಥಗಿತಗೊಳಿಸಲಾಗಿದೆ. ಹೀಗಾಗಿ ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಮಾಡುವುದಿಲ್ಲ ಎಂದು ಹೇಳಿದ್ದಾರೆ. ಈ ಮೂಲಕ ಪವರ್ ಕಟ್ ಆತಂಕದಲ್ಲಿದ್ದ ರಾಜ್ಯದ ಜನತೆಗೆ ನೆಮ್ಮದಿಯ ಸುದ್ದಿ ನೀಡಿದ್ದಾರೆ.
ಹುಬ್ಬಳ್ಳಿ ಗಲಭೆ ಪ್ರರಕಣ : ಗಲಭೆಕೋರರಿಂದಲೇ ಹಾನಿ ನಷ್ಟ ವಸೂಲಿ : ಸಿಎಂ ಬೊಮ್ಮಾಯಿ – Vishwnaews24
