ರಾಜ್ಯದಲ್ಲಿ 14 ಲಕ್ಷ ಅನರ್ಹ ಪಡಿತರ ಚೀಟಿಗಳು ಪತ್ತೆ : ಆಹಾರ ಸಚಿವ ಕೆ ಎಚ್ ಮುನಿಯಪ್ಪ – vishwanews24

Featured, ರಾಜ್ಯ ನ್ಯೂಸ್

ರಾಜ್ಯದಲ್ಲಿ 14 ಲಕ್ಷ ಅನರ್ಹ ಪಡಿತರ ಚೀಟಿಗಳು ಪತ್ತೆ : ಆಹಾರ ಸಚಿವ ಕೆ ಎಚ್ ಮುನಿಯಪ್ಪ

ಬೆಂಗಳೂರು: ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ರಾಜ್ಯದಲ್ಲಿ ಸುಮಾರು 14 ಲಕ್ಷ ಅನರ್ಹ ಪಡಿತರ ಚೀಟಿಗಳನ್ನು ಗುರುತಿಸಿದೆ ಎಂದು ಸಚಿವ ಕೆಎಚ್ ಮುನಿಯಪ್ಪ ಮಾಹಿತಿ ನೀಡಿದ್ದಾರೆ. ಅಧಿಕಾರಿಗಳು 13.87 ಲಕ್ಷ ಅನರ್ಹ ಕಾರ್ಡ್ಗಳನ್ನು ಗುರುತಿಸಿದ್ದು, ಅವುಗಳಲ್ಲಿ 3.64 ಲಕ್ಷ ಕಾರ್ಡುಗಳನ್ನು ಈಗಾಗಲೇ ರದ್ದುಗೊಳಿಸಲಾಗಿದೆ. ಇದರಲ್ಲಿ ಸರ್ಕಾರಿ ನೌಕರರ 2,964 ಕಾರ್ಡ್ಗಳನ್ನು ರದ್ದುಗೊಳಿಸಲಾಗಿದೆ. ಅನರ್ಹ ಪಡಿತರ ಚೀಟಿಗಳ ಸಂಖ್ಯೆ 20 ಲಕ್ಷಕ್ಕಿಂತ ಹೆಚ್ಚಿರಬಹುದು ಎಂದು ಹೇಳಿದ್ದಾರೆ.

6 ತಿಂಗಳವರೆಗೆ ಪಡಿತರ ಪಡೆಯದಿರುವವರು, ಒಂದು ವರ್ಷದವರೆಗೆ ನೇರ ನಗದು ವರ್ಗಾವಣೆ ಸೌಲಭ್ಯ ಪಡೆಯದಿರುವವರು ಮತ್ತು ನಿಗದಿಪಡಿಸಿದ್ದಕ್ಕಿಂತ ಹೆಚ್ಚಿನ ವಾರ್ಷಿಕ ಆದಾಯ ಹೊಂದಿರುವವರನ್ನು ಅನರ್ಹರೆಂದು ಪರಿಗಣಿಸಲಾಗುತ್ತಿದೆ. ಅರ್ಹ ಫಲಾನುಭವಿಗಳು ಸೌಲಭ್ಯ ಪಡೆಯದೇ ಕಾರ್ಡ್ ರದ್ದಾದಲ್ಲಿ ಮುಂದಿನ ದಿನಗಳಲ್ಲಿ ಹೊಸ ಕಾರ್ಡ್ಗಳನ್ನು ಪಡೆಯಲು ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ.

ಹಾಸನ: ನಕಲಿ ಆಧಾರ್ ಕಾರ್ಡ್ ಹೊಂದಿದ್ದ ಮೂವರು ಬಾಂಗ್ಲಾ ಪ್ರಜೆಗಳ ಬಂಧನ – vishwanews24

Leave a Reply