ರಾಜ್ಯದಲ್ಲಿ 3 ದಿನ ಗುಡುಗು ಸಹಿತ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ – Vishwanews24
ರಾಜ್ಯದಲ್ಲಿ 3 ದಿನ ಗುಡುಗು ಸಹಿತ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ
ಬೆಂಗಳೂರು: ರಾಜ್ಯ ರಾಜಧಾನಿ ಸೇರಿದಂತೆ ರಾಜ್ಯದ ಅನೇಕ ಕಡೆ ಸೋಮವಾರದಿಂದ 3 ದಿನಗಳ ವರೆಗೆ ಗುಡುಗು ಸಹಿತ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಾರ್ಚ್ 27, 28 ಮತ್ತು 29 ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಮಂಡ್ಯ, ಹಾಸನ ಮತ್ತು ಮೈಸೂರು ಭಾಗದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಸೋಮವಾರ ಕೊಡಗು, ಬೀದರ್, ಕಲಬುರಗಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ 2 ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ
ಮಂಗಳೂರು: ಬಿಲ್ಲವ ಸಮುದಾಯಕ್ಕೆ ರಾಜ್ಯದಲ್ಲಿ ಕನಿಷ್ಠ 10 ಸೀಟ್ ಕೊಡಲೇಬೇಕು : ಪ್ರಣವಾನಂದ ಸ್ವಾಮೀಜಿ – Vishwanews24
