ರಾಜ್ಯ ಸರಕಾರದ 5ನೇ ಗ್ಯಾರಂಟಿ ಯೋಜನೆ : ಜ. 12ರಂದು ಯುವನಿಧಿಗೆ ಚಾಲನೆ: ಶರಣ ಪ್ರಕಾಶ್ ಪಾಟೀಲ್ – vishwanews24
ರಾಜ್ಯ ಸರಕಾರದ 5ನೇ ಗ್ಯಾರಂಟಿ ಯೋಜನೆ : ಜ. 12ರಂದು ಯುವನಿಧಿಗೆ ಚಾಲನೆ: ಶರಣ ಪ್ರಕಾಶ್ ಪಾಟೀಲ್
ಶಿವಮೊಗ್ಗ: ಇದೆ ಬರುವ ಜನವರಿ 12ರಂದು ರಾಜ್ಯ ಸರಕಾರದ ಐದನೇ ಗ್ಯಾರಂಟಿ ಯೋಜನೆಯಾದ ಯುವನಿಧಿಗೆ ಚಾಲನೆ ನೀಡಲಿದ್ದೇವೆ ಎಂದು ವೈದ್ಯಕೀಯ ಮತ್ತು ಕೌಶ್ಯಲಾಭಿವೃದ್ಧಿ ಸಚಿವ ಶರಣ ಪ್ರಕಾಶ್ ಪಾಟೀಲ್ ಹೇಳಿಕೆ ನೀಡಿದ್ದಾರೆ.
ಈ ಕುರಿತು ಶಿವಮೊಗ್ಗದಲ್ಲಿ ಮಾತನಾಡಿದ ಅವರು ರಾಜ್ಯದ ಐದನೇ ಗ್ಯಾರಂಟಿ ಯೋಜನೆಯಾದ ‘ಯುವನಿಧಿ’ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಚಾಲನೆ ನೀಡಲಿದ್ದಾರೆ ಎಂದು ಹೇಳಿದರು. ಇದಕ್ಕಾಗಿ ಶಿವಮೊಗ್ಗದ ಫ್ರೀಡಂ ಪಾರ್ಕ್ ನಲ್ಲಿ ಸ್ಥಳ ಪರಿಶೀಲನೆ ಮಾಡಿದ್ದೇವೆ ಈ ಕಾರ್ಯಕ್ರಮದಲ್ಲಿ ಒಂದು ಲಕ್ಷಕ್ಕೂ ಅಧಿಕ ಯುವಕರು ಸೇರುವ ನಿರೀಕ್ಷೆ ಇದೆ ಎಂದು ಹೇಳಿದರು.
ರಾಮಮಂದಿರ ಉದ್ಘಾಟನೆಗೆ ಕೇಂದ್ರ ಸರ್ಕಾರ ರಜೆ ಘೋಷಿಸಲಿ, ನಾವು ಯಾಕೆ ನೀಡಬೇಕು : ಸಿಎಂ ಸಿದ್ದರಾಮಯ್ಯ – vishwanews24
ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ 12ರಂದು ಯೋಜನೆಗೆ ಚಾಲನೆ ನೀಡಲಾಗುವುದು ಈ ಕುರಿತು ಸ್ಥಳ ಪರಿಶೀಲನೆ ನಡೆಸಲು ಸಚಿವರಾದ ಮಧು ಬಂಗಾರಪ್ಪ, ಎಂಸಿ ಸುಧಾಕರ್, ಶಾಸಕರಾದ ಬೇಳೂರು ಗೋಪಾಲಕೃಷ್ಣ ಬಂದಿದ್ದೇವೆ. ಸಚಿವರಾದ ಮಧು ಬಂಗಾರಪ್ಪ ಕಾರ್ಯಕ್ರಮದ ನೇತೃತ್ವ ವಹಿಸಿಕೊಂಡಿದ್ದಾರೆ ಎಂದು ಹೇಳಿದರು.
ಮಂಗಳವಾರದವರೆಗೆ ಸುಮಾರು 25 ಸಾವಿರ ಮಂದಿ ನೊಂದಣಿ ಮಾಡಿದ್ದು, ಇನ್ನೂ ಮುಂದುವರೆಯಲಿದೆ ಎಂದು ಹೇಳಿದರು ಅಲ್ಲದೆ ಯೋಜನೆಯ ಚಾಲನೆಯ ದಿನದಂದೇ ಡಿಪ್ಲೊಮಾ ಹಾಗೂ ಪದವೀಧರರಿಗೆ ನೇರವಾಗಿ ಹಣ ಹಾಕುತ್ತೆವೆ ಎಂದು ಹೇಳಿದರು.
ರಾಜ್ಯದಲ್ಲಿ ಬಿಜೆಪಿಯನ್ನು ಶಾಶ್ವತವಾಗಿ ವಿರೋಧ ಪಕ್ಷದ ಸ್ಥಾನದಲ್ಲಿ ಕೂರಿಸಬೇಕೆಂಬುದು ನನ್ನ ಗುರಿ : ಸಿದ್ದರಾಮಯ್ಯ
