ರಾಮ ಮಂದಿರ ನಿರ್ಮಾಣಕ್ಕೆ ಮೈಸೂರಿನ ಶ್ರೀ ಸುತ್ತೂರು ಮಠ ಹಾಗೂ ಗಣಪತಿ ಸಚ್ಚಿದಾನಂದ ಆಶ್ರಮದಿಂದ ತಲಾ 10 ಲಕ್ಷ ರೂ. ದೇಣಿಗೆ -Vishwanews24

Featured, ರಾಜ್ಯ ನ್ಯೂಸ್

ರಾಮ ಮಂದಿರ ನಿರ್ಮಾಣಕ್ಕೆ ಮೈಸೂರಿನ ಶ್ರೀ ಸುತ್ತೂರು ಮಠ ಹಾಗೂ ಗಣಪತಿ ಸಚ್ಚಿದಾನಂದ ಆಶ್ರಮದಿಂದ ತಲಾ 10 ಲಕ್ಷ ರೂ. ದೇಣಿಗೆ -Vishwanews24

ಮೈಸೂರು: ರಾಮ ಮಂದಿರ ನಿರ್ಮಾಣಕ್ಕೆ ಮೈಸೂರಿನ ಶ್ರೀ ಸುತ್ತೂರು ಮಠ ಹಾಗೂ ಗಣಪತಿ ಸಚ್ಚಿದಾನಂದ ಆಶ್ರಮದಿಂದ ತಲಾ 10 ಲಕ್ಷ ರೂ. ದೇಣಿಗೆ ನೀಡಲಾಗುತ್ತಿದೆ.

ಮೈಸೂರಿನ ಸುತ್ತೂರು ಮಠದಲ್ಲಿ ನಡೆದ ಶ್ರೀರಾಮಜನ್ಮಭೂಮಿ ಮಂದಿರ ನಿರ್ಮಾಣ ನಿಧಿ ಸಮರ್ಪಣ ಅಭಿಮಾನದ ಸಂತರ ಸಮಾವೇಶದಲ್ಲಿ ಈ ಘೋಷಣೆ ಮಾಡಲಾಯಿತು. ರಾಮ ಮಂದಿರ ನಿರ್ಮಾಣಕ್ಕೆ ಎಲ್ಲರೂ ಕೈ ಜೋಡಿಸೋಣ ಎಂಬ ಸಂಕಲ್ಪದಿಂದ ಹಣ ನೀಡೋಣ. ಸರ್ಕಾರದ ಅನುದಾನ, ಶ್ರೀಮಂತರ ದುಡ್ಡಿನಿಂದ ಶ್ರೀರಾಮ ಮಂದಿರ ನಿರ್ಮಾಣವಾಗೋದು ಬೇಡ ಎಂಬುದು ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಸೇರಿದಂತೆ ಪ್ರತಿಯೊಬ್ಬರ ಆಶಯ. ದೇಶದ ಪ್ರತಿಯೊಬ್ಬ ಭಾರತೀಯ ಹಿಂದೂ ಸಮರ್ಪಿಸುವ ನಿಧಿಯಿಂದ ಭವ್ಯ ರಾಮ ಮಂದಿರ ನಿರ್ಮಾಣವಾಗಬೇಕು ಎಂಬುದೇ ಎಲ್ಲರ ಆಶಯ. ಇದನ್ನು ಪೂರೈಸಲು ಎಲ್ಲರೂ ಕೈಜೋಡಿಸೋಣ ಎಂದು ಸಮಾವೇಶದಲ್ಲಿ ನೆರೆದಿದ್ದ ಸಂತರು ಒಕ್ಕೊರಲಿನಿಂದ ಪ್ರತಿಪಾದಿಸಿದರು.

ನಿಧಿ ಸಮರ್ಪಣ ಅಭಿಯಾನ ಪ್ರತಿ ಹಳ್ಳಿಗೂ ಬಂದ ಸಂದರ್ಭದಲ್ಲಿ ಆಯಾ ಭಾಗದ ಮಠಾಧೀಶರೇ ಜನರ ಬಳಿ ತೆರಳಿ ನಿಧಿ ಸಂಗ್ರಹಿಸಿ ಕೊಡಬೇಕು ಎಂದು ಸುತ್ತೂರು ಶ್ರೀ ಶಿವರಾತ್ರಿಶ್ವರ ದೇಶಿಕೇಂದ್ರ ಸ್ವಾಮೀಜಿ ಸಮಾವೇಶದಲ್ಲಿ ಹೇಳಿದರು. ಸುತ್ತೂರು ಶ್ರೀಗಳ ಹೇಳಿಕೆಗೆ ಸಮಾವೇಶದಲ್ಲಿ ಉಪಸ್ಥಿತರಿದ್ದ ಎಲ್ಲ ಮಠಾಧೀಶರು ಸಹಮತ ವ್ಯಕ್ತಪಡಿಸಿದ್ದರು.

http://ರೈತ ಕಾಯ್ದೆ ರದ್ದತಿಗೆ ಆಗ್ರಹಿಸಿ ಜನವರಿ 20ರಂದು ಬೃಹತ್ ಪ್ರತಿಭಟನೆ : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ -Vishwanews24