ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನ ವಿಜಯೇಂದ್ರಗೆ ಕೊಡಿ , ನಾನು ರಾಜ್ಯಾಧ್ಯಕ್ಷನಾಗುತ್ತೇನೆ : ಯತ್ನಾಳ್ – vishwanews24
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕಾಗಿ ತಮ್ಮ ಮತ್ತು ವಿಜಯೇಂದ್ರ ನಡುವೆ ಹೊಂದಾಣಿಕೆ ನಡೆಯುತ್ತಿದೆ : ಯತ್ನಾಳ್
ವಿಜಯಪುರ: ಬಿ. ವೈ. ವಿಜಯೇಂದ್ರ ಮತ್ತು ತಮ್ಮ ಮಧ್ಯೆ ಹೊಂದಾಣಿಕೆ ಮಾಡಿಸಲು ಪ್ರಯತ್ನಗಳು ನಡೆಯುತ್ತಿವೆ.ನಾನು ಬಿಜೆಪಿ ರಾಜ್ಯಾಧ್ಯಕ್ಷನಾಗುವುದಾಗಿ ಹೇಳಿದ್ದೇನೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ.
ನಗರದಲ್ಲಿ ವಿಶ್ವ ಯೋಗದ ದಿನದ ಅಂಗವಾಗಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ತಮ್ಮನ್ನು ಭೇಟಿಯಾದ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು.
ಅರವಿಂದ್ ಕೇಜ್ರಿವಾಲ್ ಬಿಡುಗಡೆಗೆ ತಡೆ ನೀಡಿದ ದಿಲ್ಲಿ ಹೈಕೋರ್ಟ್ – vishwanews24
ಇತ್ತೀಚೆಗೆ ಬಿಜೆಪಿ ಶಾಸಕ ಎನ್. ರವಿಕುಮಾರ ಮತ್ತಿತರರು ವಿಜಯಪುರದಲ್ಲಿ ಶಾಸಕ ಯತ್ನಾಳ ಭೇಟಿಯಾಗಿದ್ದರು. ಈ ಸಂದರ್ಭದಲ್ಲಿ ಬಿ. ವೈ. ವಿಜಯೇಂದ್ರ ಮತ್ತು ಯತ್ನಾಳ ಮಧ್ಯೆ ಹೊಂದಾಣಿಕೆ ಮಾಡಿಸುವ ಕುರಿತು ಮಾತುಕತೆಗಳು ನಡೆದಿವೆ ಎಂಬ ಮಾತುಗಳು ಕೇಳಿ ಬಂದಿದ್ದವು. ಈ ಕುರಿತು ಕೇಳಲಾದ ಪ್ರಶ್ನಗೆ ಉತ್ತರಿಸಿದ ಯತ್ನಾಳ, ಅಂಥ ಪ್ರಯತ್ನಗಳು ನಡೆಯುತ್ತವೆ. ನಾನು ಕಾಂಪಿಟೇಟರ್ ಇದ್ದೇನೆ ಎಂದು ಹೇಳಿದರು.
ತಮಗೆ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡುವುದಾಗಿ ಹೇಳಿದ್ದಾರೆ. ಆದರೆ ನಾನು ವಿಜಯೆಂದ್ರನೇ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆ ಇಟ್ಟುಕೊಳ್ಳಲಿ. ನಾನು ರಾಜ್ಯಾಧ್ಯಕ್ಷನಾಗುತ್ತೇನೆಂದು ಹೇಳಿದ್ದೇನೆ ಎಂದು ಅವರು ಸ್ಪಷ್ಟಪಡಿಸಿದರು.
ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಕಾಂಗ್ರೆಸ್ ಶಾಸಕನ ಪತ್ನಿ – vishwanews24
