ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಜನಪ್ರಿಯತೆ ಹೆಚ್ಚಾದ ಕಾರಣ ಭಯಭೀತರಾಗಿ ಬಿಜೆಪಿಯಿಂದ ಸೇಡಿನ ರಾಜಕಾರಣ : ವಿ.ಎಸ್ ಉಗ್ರಪ್ಪ – Vishwanews24

Featured, ರಾಜ್ಯ ನ್ಯೂಸ್

ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಜನಪ್ರಿಯತೆ ಹೆಚ್ಚಾದ ಕಾರಣ ಭಯಭೀತರಾಗಿ ಬಿಜೆಪಿಯಿಂದ ಸೇಡಿನ ರಾಜಕಾರಣ : ವಿ.ಎಸ್ ಉಗ್ರಪ್ಪ – Vishwanews24

ಬೆಂಗಳೂರು: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ವಿರುದ್ಧ ಇ.ಡಿ ತನಿಖೆ ನಡೆಸುವ ಮೂಲಕ ಬಿಜೆಪಿ ಸೇಡಿನ ರಾಜಕೀಯ ಮಾಡುತ್ತಿದೆ ಎಂದು ಮಾಜಿ ಸಂಸದ ವಿ.ಎಸ್ ಉಗ್ರಪ್ಪ ಆರೋಪ ಮಾಡಿದರು.

ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಸಂವಿಧಾನದ ಆರ್ಟಿಕಲ್ 15(1) ಎ ಹಾಗೂ ಆರ್ಟಿಕಲ್ 20 ವಿರುದ್ಧವಾಗಿ ನಡೆಯುತ್ತಿದ್ದಾರೆ. ಸಂವಿಧಾನದ ಅರಿವು ದೇಶದ ಸ್ವಾತಂತ್ರ್ಯ ಚಳವಳಿ ಅರಿವು ಇದ್ದಿದ್ದರೆ ಸೇಡಿನ ರಾಜಕಾರಣ ಮಾಡುತ್ತಿರಲಿಲ್ಲ ಎಂದರು.

ಆಡಳಿತ ವೈಫಲ್ಯವನ್ನು ಜನರ ಮುಂದೆ ಇಡುವ ಪ್ರಯತ್ನವನ್ನು ಕಾಂಗ್ರೆಸ್ ಮಾಡುತ್ತಿದೆ. ಈ ನಿಟ್ಟಿನಲ್ಲಿ ರಾಹುಲ್ ಆತ್ಮಸ್ಥೈರ್ಯ ಕುಗ್ಗಿಸುವ ಕೆಲಸ ಮೋದಿ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ನ್ಯಾಷನಲ್ ಹೆರಾಲ್ಡ್ ಸ್ವಾತಂತ್ರ್ಯ ಚಳವಳಿಯ ಹಾಗೂ ಕಾಂಗ್ರೆಸ್ ಜನಪರ ಕಾಳಜಿ ಧ್ವನಿಯಾಗಿತ್ತು. ಖುಲಾಸೆ ಆದ ಪ್ರಕರಣವನ್ನು ಮತ್ತೆ‌ ಕೆದಕಿ ತನಿಖೆ ನಡೆಸಲಾಗುತ್ತಿದೆ. ಇದು ಸೇಡಿ‌ನ ರಾಜಕೀಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಜನಪ್ರಿಯತೆ ಹೆಚ್ಚಾದ ಕಾರಣಕ್ಕಾಗಿ ಭಯಭೀತರಾಗಿ ಸೇಡಿನ ರಾಜಕಾರಣ ಮಾಡುತ್ತಿದ್ದಾರೆ ಎಂದ ಅವರು, ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಆಡಿದ ಮಾತಿಗೆ ಬದ್ಧನಾಗಿರಬೇಕಾಗಿರುವುದು ಉತ್ತಮ ನಾಯಕನ ಲಕ್ಷಣ‌ : ಪ್ರಧಾನಿಗೆ ದಿನೇಶ್ ಗುಂಡುರಾವ್ – Vishwnaews24

ರಾಜ್ಯ ಸರ್ಕಾರ ಚಾಣಕ್ಯ ವಿವಿಗೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪದಲ್ಲಿ 116.16 ಎಕರೆ ಜಮೀನು ನೀಡಿದೆ. ಕೈಗಾರಿಕಾ ಉದ್ದೇಶದಿಂದ 2006 ರಲ್ಲಿ ಏರೋಸ್ಪೇಸ್ ಗೆ ಈ ಜಮೀನನ್ನು ವಶಪಡಿಸಿಕೊಳ್ಳಲಾಗಿತ್ತು. ಆದರೆ, ಅದನ್ನು 2021 ರಲ್ಲಿ 50 ಕೋಟಿಗೆ ಚಾಣಕ್ಯ ವಿವಿಗೆ ನೀಡಲಾಗುತ್ತದೆ ಎಂದರು.

ಇದೇ ಜಮೀನನ್ನು ರೈತರಿಂದ ವಶಪಡಿಸಿಕೊಂಡ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಒಂದು ಎಕರೆಗೆ 1.50 ಕೋಟಿ ಪರಿಹಾರ ನೀಡಿತ್ತು. ಆದರೆ, ಯಾವ ಉದ್ದೇಶಕ್ಕಾಗಿ ವಶಪಡಿಸಿಕೊಳ್ಳಲಾಗಿತ್ತು ಅದನ್ನು ಬಿಟ್ಟು ಸಾವಿರ ಕೋಟಿ ಬೆಳೆಬಾಳುವ ಜಮೀನನ್ನು ಚಾಣಕ್ಯ ವಿ.ವಿ ಗೆ ಕೊಡಲಾಗಿದೆ. ಇದರಲ್ಲಿ ಅಕ್ರಮ ಹಣ ವರ್ಗಾವಣೆ ಆಗಿಲ್ಲವೆ?ಎಂದು ಪ್ರಶ್ನಿಸಿದರು.

ಸರ್ಕಾರ ಅಥವಾ ಸಚಿವರು ಚಾಣಕ್ಯ ವಿವಿ ಜೊತೆ ಅಕ್ರಮ ಹಣ ವರ್ಗಾವಣೆ ಆಗಿದೆ ಎಂಬ ಅನುಮಾನ ಇದೆ.‌ ರಾಷ್ಟ್ರೋತ್ಥಾನ ಪರಿಷತ್ ಗೂ ಜಮೀನು ನೀಡಲಾಗಿದೆ. ಇದರಲ್ಲಿ ಎಷ್ಟು ಅಕ್ರಮ ಹಣ ವರ್ಗಾವಣೆ ಆಗಿದೆ. ಸಿಎಜಿ ವರದಿಯಲ್ಲೂ ಇದರ ಬಗ್ಗೆ ಉಲ್ಲೇಖ ಮಾಡಲಾಗಿದೆ. ಹಾಗಿದ್ದರೂ ಈ ಬಗ್ಗೆ ಏಕೆ ಇ.ಡಿ ತನಿಖೆ ಮಾಡುತ್ತಿಲ್ಲ? ಎಂದು ಪ್ರಶ್ನಿಸಿದರು. ರಾಜ್ಯ ಕಾಂಗ್ರೆಸ್ ಮುಖಂಡರೂ ಸೇರಿದಂತೆ ಮಹಿಳೆಯರ ಜೊತೆಗೂ ಕಾನೂನು ಮೀರಿ ವರ್ತಿಸಿದ್ದಾರೆ ಎಂದು ಇದೇ ಸಂದರ್ಭದಲ್ಲಿ ದೆಹಲಿ ಪೊಲೀಸರ ವಿರುದ್ಧ ಅವರು ಅಸಮಾಧಾನ ವ್ಯಕ್ತಪಡಿಸಿದರು.

BREAKING – ದಾಖಲೆಯ ಗೆಲುವು : ಎಂಟನೇ ಬಾರಿಗೆ ಜಯಗಳಿಸಿ ಮೇಲ್ಮನೆ ಪ್ರವೇಶಿಸಿದ ಬಸವರಾಜ ಹೊರಟ್ಟಿ – Vishwanews24

Leave a Reply