ರೇಣುಕಾಸ್ವಾಮಿ ಕೊಲೆ ಪ್ರಕರಣ : 17 ಮಂದಿಯ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ – vishwanews24
ರೇಣುಕಾಸ್ವಾಮಿ ಕೊಲೆ ಪ್ರಕರಣ : 17 ಮಂದಿಯ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ
ಬೆಂಗಳೂರು: ಚಿತ್ರದುರ್ಗದ ಯುವಕ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ (ಚಾರ್ಜ್ ಶೀಟ್) ಸಲ್ಲಿಸಿದ್ದಾರೆ.
ಆರೋಪಿ ನಟ ದರ್ಶನ್, ಅವರ ಆಪ್ತೆ ಪವಿತ್ರಾ ಗೌಡ ಸೇರಿದಂತೆ 17 ಮಂದಿಯ ವಿರುದ್ಧ 3,991 ಪುಟಗಳ ಪ್ರಾಥಮಿಕ ದೋಷಾರೋಪ ಪಟ್ಟಿಯ ಮುದ್ರಿತ ಪ್ರತಿಯನ್ನು ತನಿಖಾ ತಂಡವು ನ್ಯಾಯಾಲಯಕ್ಕೆ ಸಲ್ಲಿಸಿದೆ.
ಮೂವರು ಪ್ರತ್ಯಕ್ಷ ಸಾಕ್ಷಿಗಳ ಹೇಳಿಕೆ, ಎಂಟು ವರದಿಗಳು, 231ಕ್ಕೂ ಹೆಚ್ಚು ಸಾಕ್ಷ್ಯಾಧಾರಗಳ ಹೇಳಿಕೆಯ ಸಹಿತ ಇದುವರೆಗಿನ ತನಿಖಾ ಮಾಹಿತಿಯನ್ನು ದೋಷಾರೋಪ ಪಟ್ಟಿ ಒಳಗೊಂಡಿದೆ ಎಂದು ತಿಳಿದುಬಂದಿದೆ.
ಮಂಗಳೂರು : ಮಹಿಳೆ ಅಸ್ವಸ್ಥ – ಬಸ್ಸನ್ನು ಆಸ್ಪತ್ರೆಗೆ ಕೊಂಡೊಯ್ದು ಮಾನವೀಯತೆ ಮೆರೆದ ಚಾಲಕ, ನಿರ್ವಾಹಕ – vishwanews24
ದರ್ಶನ್ 2ನೇ ಆರೋಪಿ: ಎಫ್ ಐಆರ್ ನಲ್ಲಿ ಇರುವಂತೆಯೇ ಚಾರ್ಜ್ ಶೀಟ್ ನಲ್ಲೂ ನಟ ದರ್ಶನ್ ಅವರನ್ನು ಎರಡನೇ ಆರೋಪಿ ಎಂದೇ ಉಲ್ಲೇಖಿಸಲಾಗಿದೆ. ಪವಿತ್ರಾ ಗೌಡ ಮೊದಲ ಆರೋಪಿಯಾಗಿಯೇ ಉಳಿದಿದ್ದಾರೆ. ಉಳಿದ ಹದಿನೈದು ಆರೋಪಿಗಳ ಪಾತ್ರವನ್ನು ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ.
ತನಿಖೆ ಇನ್ನೂ ಬಾಕಿಯಿದ್ದು, ಇದು ಪ್ರಾಥಮಿಕ ದೋಷಾರೋಪ ಪಟ್ಟಿ. ತನಿಖೆ ಪೂರ್ಣಗೊಂಡ ಬಳಿಕ ಮತ್ತೊಂದು ದೋಷಾರೋಪ ಪಟ್ಟಿ ಸಲ್ಲಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
