ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜುಲೈ 18ರವರೆಗೆ ನಟ ದರ್ಶನ್‌ ನ್ಯಾಯಾಂಗ ಬಂಧನ ವಿಸ್ತರಣೆ – vishwanews24

Featured, ರಾಜ್ಯ ನ್ಯೂಸ್

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜುಲೈ 18ರವರೆಗೆ ನಟ ದರ್ಶನ್‌  ನ್ಯಾಯಾಂಗ ಬಂಧನ ವಿಸ್ತರಣೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿಬಂಧಿತನಾಗಿರುವ ನಟ ದರ್ಶನ್‌ಗೆ ಮತ್ತೆ ಪರಪ್ಪನ ಅಗ್ರಹಾರವೇ ಗತಿಯಾಗಿದೆ. ನಟ ದರ್ಶನ್‌ ಸೇರಿ ಹಲವು ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಜುಲೈ 18ರವರೆಗೆ ವಿಸ್ತರಣೆ ಮಾಡಲಾಗಿದೆ. ಬೆಂಗಳೂರಿನಲ್ಲಿರುವ ಆರ್ಥಿಕ ಅಪರಾಧಗಳ ಕೋರ್ಟ್‌ ನ್ಯಾಯಾಧೀಶರು ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಣೆ ಮಾಡಿ ಆದೇಶ ಹೊರಡಿಸಿದ್ದಾರೆ.

ಪೊಲೀಸ್‌ ಕಸ್ಟಡಿ ಬಳಿಕ ನ್ಯಾಯಾಂಗ ಬಂಧನದಲ್ಲಿದ್ದ ದರ್ಶನ್‌ ಸೇರಿ ಹಲವು ಆರೋಪಿಗಳ ಅವಧಿಯು ಮುಕ್ತಾಯಗೊಂಡ ಕಾರಣ ವಿಡಿಯೊ ಕಾನ್ಫರೆನ್ಸ್‌ ಮೂಲಕ ಜಡ್ಜ್‌ ಎದುರು ಆರೋಪಿಗಳನ್ನು ಹಾಜರುಪಡಿಸಲಾಯಿತು. ವಿಚಾರಣೆ ನಡೆಸಿದ ನ್ಯಾಯಾಧೀಶರು ಜುಲೈ 18ರವರೆಗೆ ನ್ಯಾಯಾಂಗ ಬಂಧನಕ್ಕೆ ವಹಿಸಿ ಆದೇಶ ಹೊರಡಿಸಿದರು. ಇದರಿಂದಾಗಿ ದರ್ಶನ್‌ ಹಾಗೂ ಗ್ಯಾಂಗ್‌ಗೆ ಹಿನ್ನಡೆಯಾದಂತಾಗಿದೆ.

ದ.ಕ.ಜಿಲ್ಲಾ ನೂತನ ಎಸ್ಪಿ‌ಯಾಗಿ‌ ಯತೀಶ್ ಎನ್.‌ ಅಧಿಕಾರ‌‌ ಸ್ವೀಕಾರ‌‌ – vishwanews24

Leave a Reply