ರೈಲು ಪ್ರಯಾಣಿಕರ ಗಮನಕ್ಕೆ: ರೈಲಿನಲ್ಲಿ ಪ್ರಯಾಣಿಸುವ ಮುನ್ನ ಕೋವಿಡ್ ಮಾರ್ಗಸೂಚಿಗಳ ಬಗ್ಗೆ ತಿಳಿದುಕೊಳ್ಳಿ..Vishwanews24
ರೈಲು ಪ್ರಯಾಣಿಕರ ಗಮನಕ್ಕೆ: ರೈಲಿನಲ್ಲಿ ಪ್ರಯಾಣಿಸುವ ಮುನ್ನ ಕೋವಿಡ್ ಮಾರ್ಗಸೂಚಿಗಳ ಬಗ್ಗೆ ತಿಳಿದುಕೊಳ್ಳಿ..Vishwanews24
ನವದೆಹಲಿ: ದೇಶದಲ್ಲಿ ಮತ್ತೆ ಕೊರೊನಾ ಆತಂಕ ಶುರುವಾಗಿದೆ. ಹೀಗಾಗಿ ರೈಲ್ವೆ ಇಲಾಖೆ ಮಾರ್ಗಸೂಚಿಗಳನ್ನು ಹೊರಡಿಸಿದೆ. ಹೀಗಾಗಿ ರೈಲಿನಲ್ಲಿ ಪ್ರಯಾಣಿಸುವ ಮುನ್ನ ಮಾರ್ಗಸೂಚಿಗಳ ಬಗ್ಗೆ ತಿಳಿದುಕೊಳ್ಳಬೇಕಾದ ಅಗತ್ಯವಿದೆ.
ರೈಲ್ವೆ ಮಂಡಳಿಯ ಅಧ್ಯಕ್ಷ ಸುನೀತ್ ಶರ್ಮಾ ಅವರು, ರೈಲಿನಲ್ಲಿ ಪ್ರಯಾಣಿಸಲು ಕೊರೊನಾ ಸೋಂಕಿನ ನೆಗೆಟಿವ್ ವರದಿಯ ಪ್ರಮಾಣಪತ್ರದ ಅಗತ್ಯವಿಲ್ಲ. ಇದಲ್ಲದೆ ಪ್ರಯಾಣಿಕರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹೊರಡಿಸಿರುವ ಇತ್ತೀಚಿನ ಕೋವಿಡ್ 19 ಮಾರ್ಗಸೂಚಿಗಳು ಮತ್ತು ಪ್ರೋಟೋಕಾಲ್ಗಳನ್ನು ಸಹ ಅನುಸರಿಸಬೇಕಾಗುತ್ತದೆ ಎಂದು ಇತ್ತೀಚೆಗೆ ಹೇಳಿದ್ದರು.
ಮಂಗಳೂರು: ಮೀನುಗಾರಿಕಾ ಬೋಟ್ ಅಪಘಾತ – 2 ಮೀನುಗಾರ ಮೃತ್ಯು, 12 ಮಂದಿ ನಾಪತ್ತೆ -Vishwanews24
ಈ ಬಗ್ಗೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ರೈಲು ಸೇವೆಗಳನ್ನು ಮೊಟಕುಗೊಳಿಸುವ ಅಥವಾ ನಿಲ್ಲಿಸುವ ಯಾವುದೇ ಯೋಜನೆ ಇಲ್ಲ. ನಾವು ಅಗತ್ಯವಿರುವಷ್ಟು ಸೇವೆಗಳನ್ನು ನಡೆಸುತ್ತೇವೆ. ಪ್ರಯಾಣಿಕರು ಹೆಚ್ಚಾದರೇ ಹೆಚ್ಚುವರಿ ರೈಲು ಸೇವೆಗಳನ್ನು ಆರಂಭಿಸಲು ಕೂಡ ಇಲಾಖೆ ಕಾರ್ಯ ನಿರ್ವಹಿಸಲಿದೆ. ಕೋವಿಡ್ ಮಾರ್ಗ ಸೂಚಿಗಳನ್ನು ಬಳಸಿಕೊಂಡು ರೈಲು ಸೇವೆ ಮುಂದುವರಿಯುತ್ತದೆ. ಸೋಂಕಿನ ತೀವ್ರತೆಯ ಬಗ್ಗೆ ಗಮನದಲ್ಲಿಟ್ಟುಕೊಂಡು ಹೆಚ್ಚುವರಿ ರೈಲು ಸೇವೆಗಳ ಬಗ್ಗೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ” ಎಂದು ತಿಳಿಸಿದ್ದಾರೆ.
ಕೋವಿಡ್ 19 ಸಾಂಕ್ರಾಮಿಕ ಮತ್ತು ಸಂಬಂಧಿತ ಸ್ವಚ್ಛತತೆಯ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು, ಆಹಾರ ಸೇವೆಯನ್ನು (service of cooked food ) ನಿಲ್ಲಿಸಿ, ರೈಲುಗಳಲ್ಲಿ ರೆಡಿ ಟು ಈಟ್ (ಆರ್ ಟಿ ಇ) ಸೇವೆಯನ್ನು ಆರಂಭಿಸಿತ್ತು.
ಇನ್ನು, ಕೋವಿಡ್ 19 ಗೆ ಮುಂಜಾಗ್ರತ ಕ್ರಮವಾಗಿ ರಕ್ಷಣಾತ್ಮಕ ವಸ್ತುಗಳಾದ ಮಾಸ್ಕ್, ಸ್ಯಾನಿಟೈಸರ್ ಗಳು, ಕೈಗವಸುಗಳು ಮತ್ತು ಟೇಕ್ ಅವೇ ಬೆಡ್ ರೋಲ್ ಕಿಟ್ಗಳು ರೈಲ್ವೇ ನಿಲ್ದಾಣಗಳ ಬಹುಪಯೋಗಿ ಸ್ಟಾಲ್ ಗಳ ಮೂಲಕ ಮಾರಾಟಕ್ಕೆ ಲಭ್ಯವಿರಲಿವೆ.
ರೈಲು ಸೇವೆಗಳನ್ನು ನಿಲ್ಲಿಸಲು ಅಥವಾ ಕಡಿತಗೊಳಿಸಲು ಯಾವುದೇ ಯೋಜನೆ ಇಲ್ಲ :
ರೈಲು ಸೇವೆಗಳನ್ನು ಕಡಿತಗೊಳಿಸುವ ಅಥವಾ ನಿಲ್ಲಿಸುವ ಯಾವುದೇ ಯೋಜನೆ ಇಲ್ಲ ಎಂದು ರೈಲ್ವೆ ಮಂಡಳಿಯ ಅಧ್ಯಕ್ಷ ಸುನೀತ್ ಶರ್ಮಾ ಇತ್ತೀಚೆಗೆ ಹೇಳಿಕೆ ನೀಡುವುದರ ಮೂಲಕ ಪ್ರಯಾಣಿಕರಿಗೆ ಭರವಸೆ ನೀಡಿದ್ದರು.
ಇನ್ನು, ಪಿಟಿಐ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಅವರು, ರೈಲು ಸೇವೆಗಳನ್ನು ಮೊಟಕುಗೊಳಿಸುವ ಅಥವಾ ನಿಲ್ಲಿಸುವ ಯಾವುದೇ ಯೋಜನೆ ಇಲ್ಲ. ನಾವು ಅಗತ್ಯವಿರುವಷ್ಟು ಸೇವೆಗಳನ್ನು ನಡೆಸುತ್ತೇವೆ. ಪ್ರಯಾಣಿಕರು ಹೆಚ್ಚಾದರೇ ಹೆಚ್ಚುವರಿ ರೈಲು ಸೇವೆಗಳನ್ನು ಆರಂಭಿಸಲು ಕೂಡ ಇಲಖೆ ಕಾರ್ಯ ನಿರ್ವಹಿಸಲಿದೆ. ಕೋವಿಡ್ ಮಾರ್ಗ ಸೂಚಿಗಳನ್ನು ಬಳಸಿಕೊಂಡು ರೈಲು ಸೇವೆ ಮುಂದುವರಿಯುತ್ತದೆ. ಸೋಂಕಿನ ತೀವ್ರತೆಯ ಬಗ್ಗೆ ಗಮನದಲ್ಲಿಟ್ಟುಕೊಂಡು ಹೆಚ್ಚುವರಿ ರೈಲು ಸೇವೆಗಳ ಬಗ್ಗೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂದಿದ್ದಾರೆ.
ಸದ್ಯ, ದಿನನಿತ್ಯ ಅಂದಾಜು 1402 ವಿಶೇಷ ರೈಲುಗಳು ಸೇವೆ ನಡೆಸುತ್ತಿವೆ ಎಂದು ಇತ್ತೀಚೆಗೆ ರೈಲ್ವೆ ಇಲಾಖೆ ತಿಳಿಸಿತ್ತು. ಅದಲ್ಲದೇ, ಒಟ್ಟು 5381 ಉಪನಗರ ರೈಲು ಸೇವೆಗಳು ಮತ್ತು 830 ಪ್ಯಾಸೆಂಜರ್ ರೈಲು ಸೇವೆಗಳು ಸಹ ಕಾರ್ಯನಿರ್ವಹಿಸುತ್ತಿವೆ. ಇದಲ್ಲದೆ, 28 ವಿಶೇಷ ರೈಲುಗಳನ್ನು ನಡೆಸಲಾಗುತ್ತಿದೆ ಎಂದು ಹೇಳಿದೆ.
ಏಪ್ರಿಲ್ ಹಾಗೂ ಮೇ ಗಳಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾದರೇ, ಹೆಚ್ಚುವರಿ ರೈಲುಗಳ ಸೇವೆಗಳನ್ನು ಕೂಡ ನಿಯೋಜಿಸಲಾಗುತ್ತದೆ. ಗೋರಖ್ ಪುರ, ಪಾಟ್ನಾ, ದರ್ಬಂಗಾ, ವಾರಣಾಸಿ, ಗುವಾಹಟಿ, ಬಾರೌನಿ, ಪ್ರಯಾಗರಾಜ್, ಬೊಕಾರೊ, ರಾಂಚಿ ಮತ್ತು ಲಕ್ನೋ ಮುಂತಾದ ಸ್ಥಳಗಳಿಗೆ ಹೆಚ್ಚುವರಿ ರೈಲುಗಳ ಬೇಡಿಕೆಯಿದೆ ಎಂದು ಇಲಾಖೆ ತಿಳಿಸಿತ್ತು
ಉಡುಪಿ :ಧಾರಾಕಾರ ಸುರಿದ ಮಳೆ ; ಮನೆಗೆ ಸಿಡಿಲು ಬಡಿದು ಲಕ್ಷಾಂತರ ರೂ.ನಷ್ಟ -Vishwanews24
