ಲಂಬಾಣಿ ಅಭಿವೃದ್ಧಿ ನಿಗಮಕ್ಕೆ ಅನುದಾನ ನೀಡಿದ್ದು ನಾವು , ಇವತ್ತು ಮೋದಿ ಕರೆಸಿ ಪ್ರಚಾರ ಗಿಟ್ಟಿಸಿಕೊಳ್ಳಲು ಪ್ರಯತ್ನ ಮಾಡ್ತಿದ್ದಾರೆ : ಸಿದ್ದರಾಮಯ್ಯ – Vishwanews24
ಲಂಬಾಣಿ ಅಭಿವೃದ್ಧಿ ನಿಗಮಕ್ಕೆ ಅನುದಾನ ನೀಡಿದ್ದು ನಾವು , ಇವತ್ತು ಮೋದಿ ಕರೆಸಿ ಪ್ರಚಾರ ಗಿಟ್ಟಿಸಿಕೊಳ್ಳಲು ಪ್ರಯತ್ನ ಮಾಡ್ತಿದ್ದಾರೆ : ಸಿದ್ದರಾಮಯ್ಯ
ಹುಬ್ಬಳ್ಳಿ: ತಾಂಡಾ ನಿವಾಸಿಗಳಿಗೆ ಮೋದಿಯಿಂದ ಹಕ್ಕುಪತ್ರ ವಿತರಣೆ ವಿಚಾರಕ್ಕೆ ಸಂಬಂಧಿಸಿ ಕಂದಾಯ ಗ್ರಾಮ ಮಾಡಬೇಕೆಂದು ಖರ್ಗೆ ಪ್ರಯತ್ನ ಮಾಡಿದ್ದರು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಅಂದು ಕಾಗೋಡು ತಿಮ್ಮಪ್ಪ ಮಂತ್ರಿ ಆಗಿದ್ದಾಗ ಕಾನೂನು ಜಾರಿ ಮಾಡಿದರು.
ನರಸಿಂಹಯ್ಯನವರ ಅಧ್ಯಕ್ಷತೆಯಲ್ಲಿ ಸಮಿತಿ ಮಾಡಿದ್ದೆ. ಬಿಜೆಪಿಯವರು ನಾವು ಅಡುಗೆ ಮಾಡಿದ್ದನ್ನು ಊಟ ಮಾಡುತ್ತಿದ್ದಾರೆ. ಮೋದಿಗೆ ತಪ್ಪು ಸಂದೇಶ ಕೊಟ್ಟು ನಾವೇ ಮಾಡಿದ್ದು ಎಂದು ಹೇಳ್ತಿದ್ದಾರೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಲಂಬಾಣಿ ಅಭಿವೃದ್ಧಿ ನಿಗಮಕ್ಕೆ ಅನುದಾನ ನೀಡಿದ್ದು ನಾವು. ಇವತ್ತು ಮೋದಿ ಕರೆಸಿ ಪ್ರಚಾರ ಗಿಟ್ಟಿಸಿಕೊಳ್ಳಲು ಪ್ರಯತ್ನ ಮಾಡ್ತಿದ್ದಾರೆ. ನಾವ ಹಕ್ಕು ಪತ್ರ ರೆಡಿ ಮಾಡಿದ್ದೆವು, ಇವರು ಹಂಚೋಕೆ ಬಂದಿದ್ದಾರೆ. ಬಿಜೆಪಿಯವರು ಮೋದಿಯಿಂದ ಸುಳ್ಳು ಹೇಳಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
Join our Whatsapp group by clicking the below link 👇👇
