ಲವ್ ಜಿಹಾದ್ ವಿರುದ್ಧ ಕಾನೂನು ತಂದೇ ತರುತ್ತೇವೆ: ಉಡುಪಿಯಲ್ಲಿ ಗೃಹ ಸಚಿವ ಬೊಮ್ಮಾಯಿ -Vishwanews24

Featured, ಉಡುಪಿ

ಲವ್ ಜಿಹಾದ್ ವಿರುದ್ಧ ಕಾನೂನು ತಂದೇ ತರುತ್ತೇವೆ: ಉಡುಪಿಯಲ್ಲಿ ಗೃಹ ಸಚಿವ ಬೊಮ್ಮಾಯಿ -Vishwanews24

ಉಡುಪಿ:  ರಾಜ್ಯದಲ್ಲಿ ಲವ್ ಜಿಹಾದ್ ವಿರುದ್ಧ ಕಾನೂನು ವಿಚಾರದಲ್ಲಿ ನಮ್ಮಲ್ಲಿ ಯಾವುದೇ ಗೊಂದಲಗಳು ಇಲ್ಲ.ಕರ್ನಾಟಕದಲ್ಲಿ ಲವ್ ಜಿಹಾದ್ ವಿರುದ್ಧ ಕಾನೂನು ಬಂದೇ ಬರುತ್ತದೆ.ಅಲಹಾಬಾದ್ ಹೈಕೋರ್ಟ್ ಲವ್ ಜಿಹಾದ್ ವಿಚಾರದಲ್ಲಿ ಆದೇಶ ಕೊಟ್ಟಿದೆ.ಯು.ಪಿ, ಹರಿಯಾಣ ಮಧ್ಯಪ್ರದೇಶದಲ್ಲಿ ಜಾರಿಗೆ ತರುವ ಚಿಂತನೆ ಮಾಡಿದೆ.

ಕರ್ನಾಟಕ ಸರ್ಕಾರ ಕೂಡ ಈ ಬಗ್ಗೆ ಚಿಂತನೆಯನ್ನು ನಡೆಸಿದೆ.ಲವ್ ಜಿಹಾದ್ ಕಾನೂನು ಹೇಗೆ ಜಾರಿಗೆ ತರಬೇಕು ಯಾವ ಅಂಶಗಳನ್ನು ಸೇರಿಸಬೇಕೆಂಬೂದು ಮುಖ್ಯ ಉತ್ತರಪ್ರದೇಶ ಸರಕಾರ ಅಧಿಸೂಚನೆಯನ್ನು ಹೊರಡಿಸಿಯಾಗಿದೆ. ಯುಪಿ ಸರ್ಕಾರ ಹೊರಡಿಸುವ ಅಧಿಸೂಚನೆಯ ಪ್ರತಿಗಳನ್ನು ಪಡೆದುಕೊಳ್ಳಲು ಅಧಿಕಾರಿಗಳಿಗೆ ಹೇಳಿದ್ದೇನೆ.

ಲವ್ ಜಿಹಾದ್ ವಿರುದ್ಧ ಕಾನೂನು ತರಲು ಮುಖ್ಯಮಂತ್ರಿಗಳ ಒಪ್ಪಿಗೆಯೂ ಇದೆ. ಸಿದ್ದರಾಮಯ್ಯನವರು ತಾನು ಮೊಘಲ್ ಕಾಲದಲ್ಲಿ ಇದ್ದೇನೆ ಎಂದು ಭಾವಿಸಿರಬೇಕು. ಅದಕ್ಕೆ ಮೊಘಲ್ ಕಾಲದಿಂದಲೂ ಲವ್ ಜಿಹಾದ್ ಇದೆ ಎಂದಿದ್ದಾರೆ ಎಂದು ಟೀಕಿಸಿದರು.