ಲೈಂಗಿಕ ಹಗರಣ ಪ್ರಕರಣ: ಪ್ರಜ್ವಲ್ ರೇವಣ್ಣ ಬಂಧನಕ್ಕೆ ಆಗ್ರಹಿಸಿ ದ.ಕ. ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರತಿಭಟನೆ – Vishwanews24

Featured, ದಕ್ಷಿಣ ಕನ್ನಡ

ಲೈಂಗಿಕ ಹಗರಣ ಪ್ರಕರಣ: ಪ್ರಜ್ವಲ್ ರೇವಣ್ಣ ಬಂಧನಕ್ಕೆ ಆಗ್ರಹಿಸಿ ದ.ಕ. ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರತಿಭಟನೆ

ಮಂಗಳೂರು: ಲೈಂಗಿಕ ಹಗರಣ ಪ್ರಕರಣದ ಆರೋಪಿಪ್ರಜ್ವಲ್ ರೇವಣ್ಣ ಬಂಧನಕ್ಕೆ ಒತ್ತಾಯಿಸಿ ದ.ಕ. ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಸೋಮವಾರ ಪ್ರತಿಭಟನೆ ನಡೆಯಿತು.

ಮಲ್ಲಿಕಟ್ಟೆಯ ಕಾಂಗ್ರೆಸ್ ಕಚೇರಿ ಎದುರು ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಶಾಲೆಟ್ ಪಿಂಟೋ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಮಹಿಳೆಯರು ಪ್ರಜ್ವಲ್ ನನ್ನು ಬಂಧಿಸಿ, ಮಹಿಳೆಯರಿಗೆ ನ್ಯಾಯ ಒದಗಿಸಿ ಎಂದು ಘೋಷಣೆ ಕೂಗಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಶಾಲೆಟ್ ಪಿಂಟೋ, ಪ್ರಜ್ವಲ್ ನ ಲೈಂಗಿಕ ಹಗರಣದ ಬಗ್ಗೆ ಮಾಹಿತಿ ಇದ್ದೂ ಆತನಿಗೆ ಟಿಕೆಟ್ ನೀಡಿರುವುದಲ್ಲದೆ, ಆತನ ರಕ್ಷಣೆಗೆ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಮುಂದಾಗಿದೆ. ಬೇಟಿ ಬಚಾವೊ, ಅಂದವರು ಈಗ ಎಲ್ಲಿದ್ದಾರೆ. ಪೆನ್ ಡ್ರೈವ್ ಬಗ್ಗೆ ಬಿಜೆಪಿಯವರು ಯಾಕೆ ಮಾತನಾಡುತ್ತಿಲ್ಲ ಎಂದು ಪ್ರಶ್ನಿಸಿದರು.

ಮೂಡುಬಿದಿರೆ : ಕಾಲೇಜು ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು – Vishwanews24

ಕಾಂಗ್ರೆಸ್ ನ ಗ್ಯಾರಂಟಿ ಹಣದಿಂದ ಮಹಿಳೆಯರು ದಾರಿ ತಪ್ಪುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದರು. ಆದರೆ ದಾರಿ ತಪ್ಪಿದ್ದು ಜೆಡಿಎಸ್ ನಾಯಕರು. ಅದೆಷ್ಟೋ ಹೆಣ್ಣು ಮಕ್ಕಳಿಗೆ ಇನ್ನಿಲ್ಲದ ಶಿಕ್ಷೆ ನೀಡಿದ್ದಾರೆ. ಆ ಮಹಿಳೆಯರ ಕುಟುಂಬ ಹಾಳಾಗುವಂತೆ ಮಾಡಿದ್ದಾರೆ. ಪ್ರಜ್ವಲ್ ನನ್ನು ತಕ್ಷಣ ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಅವರು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕಾಧ್ಯಕ್ಷ ಶಾಹುಲ್ ಹಮೀದ್, ತನ್ವೀರ್ ಶಾ, ರೂಪಾ ಚೇತನ್, ಚಂದ್ರಕಲಾ ಜೋಗಿ, ಶಶಿಕಲಾ ಪದ್ಮನಾಭನ್, ಶಾಂತಲಾ ಗಟ್ಟಿ, ಗೀತಾ ಅತ್ತಾವರ, ಚಂದ್ರಕಲಾ ಡಿ.ರಾವ್, ನಮಿತಾ ಡಿ.ರಾವ್, ವಂದನ ಭಂಡಾರಿ, ಶಾರಿಕ ಪೂಜಾರಿ, ಪ್ರಮಿಳಾ, ಅನಿತ, ವಿಲ್ಮ, ಡಿಂಪಲ್, ಮೇರಿ, ನ್ಯಾನ್ಸಿ, ಲವಿನಾ, ಅರ್ಚನ ಪ್ರತಿಭಟನೆಯಲ್ಲಿ ಉಪಸ್ಥಿತರಿದ್ದರು.

ಸಂತ್ರಸ್ತೆಯೊಂದಿಗೆ  ರೇವಣ್ಣ ನಿವಾಸದಲ್ಲಿ ಮಹಜರು ನಡೆಸಿದ ಎಸ್ಐಟಿ – Vishwanews24

Leave a Reply