ವಾಡಿಕೆಗೂ ಮೊದಲೇ ಕೇರಳ ಕರಾವಳಿಗೆ ಮುಂಗಾರು ಪ್ರವೇಶ  – vishwanews24

Featured, ರಾಷ್ಟ್ರ ನ್ಯೂಸ್

ವಾಡಿಕೆಗೂ ಮೊದಲೇ ಕೇರಳ ಕರಾವಳಿಗೆ ಮುಂಗಾರು ಪ್ರವೇಶ 

ನವದೆಹಲಿ : ವಾಡಿಕೆಗೂ ಮೊದಲೇ ಕೇರಳ ಕರಾವಳಿಗೆ ಮುಂಗಾರು ಪ್ರವೇಶವಾಗಿದೆ. ಭಾರತೀಯ ಹವಾಮಾನ ಇಲಾಖೆ ಮೇ 27ಕ್ಕೆ ಮುಂಗಾರು ಮಾರುತಗಳು ಕೇರಳ ಕರಾವಳಿ ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹೇಳಿತ್ತು. ಆದರೆ 3 ದಿನದ ಮೊದಲೇ ಮುಂಗಾರು ಪ್ರವೇಶವಾಗಿದ್ದು ರೈತರು ಮೊಗದಲ್ಲಿ ಖುಷಿ ತಂದಿದೆ.

ಸಾಮಾನ್ಯವಾಗಿ ಭಾರತದಲ್ಲಿ ಜೂನ್ 1 ರಂದು ಮುಂಗಾರು ಮಳೆ ಭಾರತವನ್ನು ಪ್ರವೇಶಿಸುತ್ತದೆ. ಆದರೆ ಈ ಬಾರಿ ನೈರುತ್ಯ ಮಾನ್ಸೂನ್ ಕೇರಳದಲ್ಲಿ ಸಾಮಾನ್ಯ ದಿನಾಂಕಕ್ಕಿಂತ 8 ದಿನಗಳು ಮುಂಚಿತವಾಗಿ ಪ್ರಾರಂಭವಾಗಿರುವುದು ವಿಶೇಷ.

ಈ ಹಿಂದೆ 2009 ರಲ್ಲಿ ಮೇ 23ಕ್ಕೆ ಮುಂಗಾರು ಮಳೆ ಪ್ರವೇಶವಾಗಿತ್ತು. 2023 ರಲ್ಲಿ ಜೂನ್‌ 9, 2024ರಲ್ಲಿ ಮೇ 30 ರಂದು ಮುಂಗಾರು ಪ್ರವೇಶವಾಗಿತ್ತು.

ಉಡುಪಿ: ಮೇ 24ರಿಂದ 30ರ ವರೆಗೆ ಕರಾವಳಿ  ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ – vishwanews24

Leave a Reply