ನ್ಯೂಯಾರ್ಕ್: ವಿಶ್ವದ 100 ಶಕ್ತಿಶಾಲಿ ಮಹಿಳೆಯರಲ್ಲಿ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಒಬ್ಬರೀಂದು ಖ್ಯಾತ ನಿಯತಕಾಲಿಕೆ ಫೋರ್ಬ್ಸ್ ಪಟ್ಟಿ ಹೇಳಿದೆ. ಫೋರ್ಬ್ಸ್ ವಿಶ್ವದ 100 ಶಕ್ತಿಶಾಲಿ ಮಹಿಳೆಯರಲ್ಲಿ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್, ಎಚ್ಸಿಎಲ್ ಕಾರ್ಪೊರೇಶನ್ ಸಿಇಒ ಮತ್ತು ಕಾರ್ಯನಿರ್ವಾಹಕ ನಿರ್ದೇಶಕಿ ರೋಶನಿ ನಾಡರ್ ಮಲ್ಹೋತ್ರಾ ಮತ್ತು ಬಯೋಕಾನ್ ಸಂಸ್ಥಾಪಕಿ ಕಿರಣ್ ಮಜುಂದಾರ್ ಶಾ ಇದ್ದಾರೆ.
ಫೋರ್ಬ್ಸ್ 2019 ರ “ವಿಶ್ವದ 100 ಅತ್ಯಂತ ಶಕ್ತಿಶಾಲಿ ಮಹಿಳೆಯರ” ಪಟ್ಟಿಯಲ್ಲಿ ಜರ್ಮನ್ ಚಾನ್ಸೆಲರ್ ಏಂಜೆಲಾ ಮರ್ಕೆಲ್ ಅಗ್ರಸ್ಥಾನದಲ್ಲಿದ್ದರೆ, ಯುರೋಪಿಯನ್ ಸೆಂಟ್ರಲ್ ಬ್ಯಾಂಕ್ ಅಧ್ಯಕ್ಷೆ ಕ್ರಿಸ್ಟೀನ್ ಲಾಗಾರ್ಡ್ ಎರಡನೇ ಸ್ಥಾನದಲ್ಲಿದ್ದಾರೆ ಮತ್ತು ಯುಎಸ್ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್ ಸ್ಪೀಕರ್ ನ್ಯಾನ್ಸಿ ಪೆಲೋಸಿ ತೃತೀಯ ಸ್ಥಾನದಲ್ಲಿದ್ದಾರೆ.
ಫೋರ್ಬ್ಸ್ ಪಟ್ಟಿಗೆ ಹೊಸದಾಗಿ ಸೇರ್ಪಡೆಯಾಗಿರುವ ಸೀತಾರಾಮನ್ 34 ನೇ ಸ್ಥಾನದಲ್ಲಿದ್ದಾರೆ. ಇವರು ಪಟ್ಟಿಯಲ್ಲಿರುವ ಭಾರತೀಯರ ಪೈಕಿ ಮೊದಲಿಗರಾಗಿದ್ದಾರೆ. ಭಾರತದ ಮೊದಲ ಮಹಿಳಾ ಹಣಕಾಸು ಸಚಿವೆಯಾಗಿರುವ ಸೀತಾರಾಮನ್ ದೇಶದ ರಕ್ಷಣಾ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ.
ಇನ್ನು ನಾಡರ್ ಮಲ್ಹೋತ್ರಾ (54), ಕಿರಣ್ ಮಜುಂದಾರ್ ಶಾ(65) ಸ್ಥಾನದಲ್ಲಿದ್ದಾರೆ. ಮಲ್ಹೋತ್ರಾ ಎಚ್ಸಿಎಲ್ ಕಾರ್ಪೊರೇಶನ್ನ ಸಿಇಒ ಆಗಿ, 8.9 ಬಿಲಿಯನ್ ಯುಎಸ್ಡಿ ತಂತ್ರಜ್ಞಾನ ಕಂಪನಿಯ ಎಲ್ಲಾ ಕಾರ್ಯತಂತ್ರದ ಭಾಗವಾಗಿ ದುಡಿಯುತ್ತಿದ್ದರೆ ಮಜುಂದಾರ್ ಶಾಭಾರತದ ಅತ್ಯಂತ ಶ್ರೀಮಂತ ಸ್ವಂತ ಉದ್ಯಮ ನಡೆಸುವ ಮಹಿಳೆ ಮತ್ತು 1978 ರಲ್ಲಿ ದೇಶದ ಅತಿದೊಡ್ಡ ಜೈವಿಕ ಔಷಧೀಯ ಸಂಸ್ಥೆ ಬಯೋಕಾನ್ ಸ್ಥಾಪನೆ ಮಾಡಿದ್ದವರು ಎನ್ನುವುದು ಗಮನೀಯ ಅಂಶ.
ಉಳಿದಂತೆ ಫೋರ್ಬ್ಸ್ ಪಟ್ಟಿಯಲ್ಲಿ ಬಿಲ್ & ಮೆಲಿಂಡಾ ಗೇಟ್ಸ್ ಫೌಂಡೇಶನ್ನ ಸಹ-ಅಧ್ಯಕ್ಷ ಮೆಲಿಂಡಾ ಗೇಟ್ಸ್ (6), ಐಬಿಎಂ ಸಿಇಒ ಗಿನ್ನಿ ರೊಮೆಟ್ಟಿ (9), ಫೇಸ್ಬುಕ್ ಸಿಒಒ ಶೆರಿಲ್ ಸ್ಯಾಂಡ್ಬರ್ಗ್ (18), ನ್ಯೂಜಿಲೆಂಡ್ ಪ್ರಧಾನಿ ಜಸಿಂಡಾ ಅರ್ಡೆರ್ನ್ (38), ಮೊದಲ ಮಗಳು ಮತ್ತು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸಲಹೆಗಾರ ಇವಾಂಕಾ ಟ್ರಂಪ್ (42), ಗಾಯಕರಾದ ರಿಹಾನ್ನಾ (61), ಬೆಯೋನ್ಸ್ (66) ಮತ್ತು ಟೇಲರ್ ಸ್ವಿಫ್ಟ್ (71), ಟೆನಿಸ್ ತಾರೆ ಸೆರೆನಾ ವಿಲಿಯಮ್ಸ್ (81) ಮತ್ತು ಯುವ ಹವಾಮಾನ ಕಾರ್ಯಕರ್ತೆ ಗ್ರೆಟಾ ಥನ್ಬರ್ಗ್ (100). ಸ್ಥಾನ ಗಳಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…