ಶಾಲಾ ಕಾಲೇಜುಗಳಿಗೆ ಈ ಬಾರಿಯ ಮಧ್ಯಂತರ ರಜೆ ಕಡಿತ: ಜಿಲ್ಲಾಧಿಕಾರಿ

Featured, ದಕ್ಷಿಣ ಕನ್ನಡ

ಮಂಗಳೂರು: ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಈ ಬಾರಿಯ ಮಧ್ಯಂತರ ರಜೆಯನ್ನು ಕಡಿತಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಆಗಸ್ಟ್​​ ತಿಂಗಳಿನಲ್ಲಿ ಎಡೆಬಿಡದೇ ಸುರಿದ ಮಳೆಯಿಂದಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿತ್ತು. ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ ಮಧ್ಯಂತರ ರಜೆ ದಿನಗಳನ್ನು ಕಡಿತಗೊಳಿಸಲು ಜಿಲ್ಲಾಧಿಕಾರಿ ಸಸಿಕಾಂತ್​ ಸೆಂಥಿಲ್​ ಈ ನಿರ್ಧಾರ ತೆಗೆದುಕೊಂಡಿದ್ದಾರೆ.

ಜಿಲ್ಲೆಯಲ್ಲಿ ಸುರಿದ ಮಳೆಯಿಂದಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿತ್ತು. ಇದರಿಂದಾಗಿ ಪಠ್ಯ ಮುಗಿಸಲು ತೊಂದರೆ ಆಗಬಹುದಾದ ಎಂಬ ಹಿನ್ನೆಲೆಯಲ್ಲಿ ಮಧ್ಯಂತರ ರಜೆ ಕಡಿತಗೊಳಿಸಲಾಗಿದೆ. ಅಲ್ಲದೇ, ಪಠ್ಯ ಮುಗಿಸಲು ಸಮಯದ ಕೊರತೆ ಉಂಟಾದರೆ ಶನಿವಾರವೂ ಪೂರ್ಣ ಅವಧಿಯ ತರಗತಿ ಮಾಡಲು ಯೋಜನೆ ರೂಪಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.