ಶಾಸಕನಲ್ಲದ ನನಗೆ ಸಚಿವ ಸ್ಥಾನ ಹಾಗೂ ಡಿಸಿಎಂ ಹುದ್ದೆ ಸಿಕ್ಕಿರುವುದು ಅನಿರೀಕ್ಷಿತ :ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ -Vishwanews24
ಬಳ್ಳಾರಿ: ಶಾಸಕನಲ್ಲದ ನನಗೆ ಸಚಿವ ಸ್ಥಾನ ಹಾಗೂ ಡಿಸಿಎಂ ಹುದ್ದೆ ಸಿಕ್ಕಿರುವುದು ಅನಿರೀಕ್ಷಿತ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೂಚನೆ ಮೇರೆಗೆ ಧ್ವಜಾರೋಹಣ ಮಾಡಲು ಜಿಲ್ಲೆಗೆ ಆಗಮಿಸಿದ್ದೇನೆ. ಬಳ್ಳಾರಿ ಉಸ್ತುವಾರಿ ಸಿಕ್ಕಿರುವುದು ಸಂತಸ ತಂದಿದೆ ಎಂದರು. ಪಕ್ಷದ ನಾಯಕರು ನನ್ನ ಮೇಲೆ ಭರವಸೆ ಇಟ್ಟು ವಿವಿಧ ಜವಾಬ್ದಾರಿ ನೀಡಿದ್ದು, ಸೂಕ್ತವಾಗಿ ನಿಭಾಯಿಸುವ ಭರವಸೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗುಜರಾತ್ನಲ್ಲಿ ಸ್ಥಳೀಯ ನಾಯಕರಿಗೆ ಸಚಿವ ಸ್ಥಾನ ನೀಡದೆೇ, ಬೇರೆಯವರಿಗೆ ಅವಕಾಶ ನೀಡುವ ಮೂಲಕ ಅಭಿವೃದ್ಧಿಗೆ ನಾಂದಿ ಹಾಡಿದ್ದರು. ಈಗ ರಾಜ್ಯದಲ್ಲಿಯೂ ಇದೇ ಪ್ರಯೋಗ ಅನುಸರಿಸಿದ್ದಾರೆ ಎಂದರು.
