ಶಿವಕುಮಾರ ಸ್ವಾಮೀಜಿ ಗೆ ಭಾರತ ರತ್ನ ಪುರಸ್ಕಾರ ನೀಡಲು ಪ್ರಧಾನಿ ಮೋದಿ ಅವರಿಗೆ ಸಿಎಂ ಮನವಿ -Vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು : ನಡೆದಾಡುವ ದೇವರು ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮೀಜಿ ಅವರಿಗೆ ಮರಣೋತ್ತರವಾಗಿ `ಭಾರತ ರತ್ನ’ ಪುರಸ್ಕಾರ ನೀಡಲು ಪ್ರಧಾನಿ ಮೋದಿ ಅವರಿಗೆ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪತ್ರ ಬರೆದಿದ್ದಾರೆ.

ಶಿವಕುಮಾರ ಸ್ವಾಮೀಜಿಗಳಿಗೆ ಭಾರತ ರತ್ನ ನೀಡಬೇಕೆಂಬ ಕೂಗು ಹಲವು ವರ್ಷಗಳಿಂದ ಕೇಳಿ ಬರುತ್ತಿದ್ದು, ಸ್ವಾಮೀಜಿಗಳು ಲಿಂಗೈಕ್ಯರಾದ ವೇಳೆ ಸಿಎಂ ಸ್ವತಃ ಕೇಂದ್ರಕ್ಕೆ ಪತ್ರ ಬರೆದು ಮನವಿ ಮಾಡಿಕೊಳ್ಳುತ್ತೇನೆ ಎಂದಿದ್ದರು.

ಜನರಿಗೆ ಸ್ವಾಮೀಜಿಗಳು ನೀಡಿರುವ ಸೇವೆಯಿಂದ ದೇಶದ ಅತ್ಯುನ್ನತ ಭಾರತ ರತ್ನ ಪ್ರಶಸ್ತಿಗೆ ಅರ್ಹರಾಗಿದ್ದಾರೆ. ಎಲ್ಲಾ ರಾಜಕೀಯ ಮತ್ತು ನಾಗರೀಕರು, ಸಂಸ್ಥೆಗಳು ಮತ್ತು ಸಂಘಟನೆಗಳಿಂದ ಭಾರತ ರತ್ನ ನೀಡುವ ಸಲುವಾಗಿ ಹಲವು ಜ್ಞಾಪನೆಗಳನ್ನು ಸ್ವೀಕರಿಸಲಾಗಿದೆ.

2019ರ ಜನವರಿ 21 ರಂದು ಶಿವಕುಮಾರ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದು, ನಡೆದಾಡುವ ದೇವರು ಎಂದೇ ಖ್ಯಾತಿ ಪಡೆದಿರುವ ಶ್ರೀ ಶಿವಕುಮಾರ ಸ್ವಾಮೀಜಿಗಳಿಗೆ ಮರಣೋತ್ತರ ಭಾರತ ರತ್ನ ಪ್ರಶಸ್ತಿಗೆ ಪರಿಗಣಿಸಬೇಕು ಎಂದು ಸಿಎಂ ಕುಮಾರಸ್ವಾಮಿ ಪತ್ರದಲ್ಲಿ ಮನವಿ ಮಾಡಿಕೊಂಡಿದ್ದಾರೆ.