ಶೂಟಿಂಗ್‌ ವೇಳೆ ಸಮುದ್ರದಲ್ಲಿ ಮಗುಚಿದ ದೋಣಿ: ಬಂಗಾಳಿ ಸೀರಿಯಲ್ ನಟ ಸಾವು – vishwanews24

Featured, ರಾಷ್ಟ್ರ ನ್ಯೂಸ್

ಶೂಟಿಂಗ್‌ ವೇಳೆ ಸಮುದ್ರದಲ್ಲಿ ಮಗುಚಿದ ದೋಣಿ: ಬಂಗಾಳಿ ಸೀರಿಯಲ್ ನಟ ಸಾವು

ಮುಂಬಯಿ: ಬಂಗಾಳಿ ಖ್ಯಾತ ನಟ ರಾಹುಲ್ ಅರುಣೋದಯ್ ಬ್ಯಾನರ್ಜಿ(43) ನಿಧನರಾಗಿದ್ದಾರೆ. ಚಿತ್ರೀಕರಣದ ಸಮಯದಲ್ಲಿ ಅವರು ಅಪಘಾತಕ್ಕೀಡಾಗಿದ್ದಾರೆ.

ನಟ ರಾಹುಲ್ ಅರುಣೋದಯ್ ಬ್ಯಾನರ್ಜಿ ಒಡಿಶಾದ ತಲ್ಸಾರಿ ಬೀಚ್‌ನಲ್ಲಿ ಚಿತ್ರೀಕರಣ ನಡೆಸುತ್ತಿದ್ದರು, ಈ ವೇಳೆ ಸಮುದ್ರದ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಘಟನೆ ಸಂಭವಿಸಿದ ಸಮಯದಲ್ಲಿ ಸ್ಥಳದಲ್ಲಿದ್ದ ತಂತ್ರಜ್ಞರು ಅವರನ್ನು ಹೊರತೆಗೆದು ತಕ್ಷಣ ಆಸ್ಪತ್ರೆಗೆ ಸಾಗಿಸಿದ್ದಾರೆ ಆದರೆ ಚಿಕಿತ್ಸೆ ಫಲಕಾರಿಯಾಗದೆ ನಟ ರಾಹುಲ್ ಕೊನೆಯುಸಿರೆಳೆದಿದ್ದಾರೆ.

ಇದನ್ನೂ ಓದಿ:

ಉಡುಪಿ : ಮೂವರು ಪೊಲೀಸ್ ಸಿಬ್ಬಂದಿಗೆ ಸಿಎಂ ಚಿನ್ನದ ಪದಕ – vishwanews24

ಸಮುದ್ರದಲ್ಲಿ ದೋಣಿ ದೃಶ್ಯವನ್ನು ಚಿತ್ರೀಕರಿಸುವಾಗ, ರಾಹುಲ್ ಆಕಸ್ಮಿಕವಾಗಿ ಸಮುದ್ರಕ್ಕೆ ಬಿದಿದ್ದಾರೆ. ತಕ್ಷಣ ಅವರನ್ನು ರಕ್ಷಿಸಿ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಆದರೆ ವೈದ್ಯರು ಅವರು ಈಗಾಗಲೇ ಸಾವನ್ನಪ್ಪಿದ್ದಾರೆ ಎಂದು ದೃಢಪಡಿಸಿದರು. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ರಾಹುಲ್ ಬ್ಯಾನರ್ಜಿ 2008 ರಲ್ಲಿ ಚಿರೋದಿನಿ ತುಮಿ ಜೆ ಅಮರ್‌ ಚಿತ್ರದ ಮೂಲಕ ಎಲ್ಲರ ಗಮನ ಸೆಳೆದಿದ್ದರು. ಇದು ಅವರನ್ನು ಬಂಗಾಳಿ ಪ್ರೇಕ್ಷಕರಲ್ಲಿ ಗುರುತಿಸಬಹುದಾದ ಮುಖವನ್ನಾಗಿ ಮಾಡಿತು.ಆ ಬಳಿಕ ಅವರು ಚಲನಚಿತ್ರಗಳು, ದೂರದರ್ಶನ ಮತ್ತು ಡಿಜಿಟಲ್ ವೇದಿಕೆಗಳಲ್ಲಿ ಕೆಲಸ ಮಾಡಿದರು.

ಇದನ್ನೂ ಓದಿ:

ಎ.2ರಂದು ದ.ಕ. ಜಿಲ್ಲಾ ಎಸ್ಪಿ ಡಾ.ಅರುಣ್ ಕೆ., ಎಸಿಪಿ ನಜ್ಮಾ ಫಾರೂಕಿಗೆ ಸಿಎಂ ಪದಕ ಪ್ರದಾನ- vishwanews24

Leave a Reply