ಶ್ರೀಲಂಕಾದಲ್ಲಿ ಮತ್ತೆ ತುರ್ತುಪರಿಸ್ಥಿತಿ ಘೋಷಣೆ – Vishwanews24
ಶ್ರೀಲಂಕಾದಲ್ಲಿ ಮತ್ತೆ ತುರ್ತುಪರಿಸ್ಥಿತಿ ಘೋಷಣೆ
ಕೊಲಂಬೊ: ದ್ವೀಪರಾಷ್ಟ್ರದ ಅಧ್ಯಕ್ಷ ಗೊಟಬಯಾ ರಾಜಪಕ್ಸ ದೇಶ ಬಿಟ್ಟು ಮಾಲ್ಡೀವ್ಸ್ ಗೆ ಪರಾರಿಯಾದ ಬೆನ್ನಲ್ಲೇ ಹಿಂಸಾಚಾರ, ಪ್ರತಿಭಟನೆ ತಾರಕಕ್ಕೇರಿದ್ದು, ಏತನ್ಮಧ್ಯೆ ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ ಎಂದು ಪ್ರಧಾನಿ ಕಚೇರಿ ಬುಧವಾರ (ಜುಲೈ 13) ಪ್ರಕಟಣೆಯಲ್ಲಿ ತಿಳಿಸಿದೆ.
ರಾಜಧಾನಿ ಕೊಲಂಬೊದಲ್ಲಿ ಶ್ರೀಲಂಕಾ ಪ್ರಧಾನಿ ವಿಕ್ರಮಸಿಂಘೆ ಅವರ ನಿವಾಸದೊಳಕ್ಕೆ ಪ್ರವೇಶಿಸಲು ಪ್ರತಿಭಟನಾಕಾರರು ಯತ್ನಿಸುತ್ತಿದ್ದು, ಭದ್ರತಾ ಪಡೆ ಸಿಬಂದಿಗಳು ಅಶ್ರುವಾಯು ಪ್ರಯೋಗಿಸುವ ಮೂಲಕ ಪರಿಸ್ಥಿತಿಯನ್ನು ನಿಯಂತ್ರಿಸಲು ಹೆಣಗಾಡುತ್ತಿರುವುದಾಗಿ ವರದಿ ವಿವರಿಸಿದೆ.
ಪ್ರಧಾನಿ ನಿವಾಸದ ಭದ್ರತಾ ನಿಯಮವನ್ನು ಉಲ್ಲಂಘಿಸಿ ಉದ್ರಿಕ್ತ ನೂರಾರು ಪ್ರತಿಭಟನಾಕಾರರು ಪ್ರಧಾನಿ ನಿವಾಸದ ಆವರಣದೊಳಕ್ಕೆ ನುಗ್ಗಿರುವುದಾಗಿ ಎಎನ್ ಐ ವರದಿ ಮಾಡಿದೆ.
