ಶ್ರೀಲಂಕಾ ಬಾಂಬ್ ಸ್ಟೋಟ : ಸಾವಿನ ಸಂಖ್ಯೆ 290ಕ್ಕೆ ಏರಿಕೆ ;ನೆಲಮಂಗಲದ ಇಬ್ಬರು ಸಾವು, ಐದು ಮಂದಿ ನಾಪತ್ತೆ – Vishwanews24
ಬೆಂಗಳೂರು:ಈಸ್ಟರ್ ದಿನವಾದ ರವಿವಾರ ದ್ವೀಪರಾಷ್ಟ್ರ ಶ್ರೀಲಂಕಾದಲ್ಲಿ ಸಂಭವಿಸಿದ್ದ ಭೀಕರ ಆತ್ಮಹತ್ಯಾ ಬಾಂಬ್ ದಾಳಿಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 290ಕ್ಕೆ ಏರಿದ್ದು, ಬೆಂಗಳೂರಿನ ಇಬ್ಬರು ಕನ್ನಡಿಗರು ಮೃತಪಟ್ಟಿರುವ ಬಗ್ಗೆ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಟ್ವೀಟ್ ಮಾಡುವ ಮೂಲಕ ಖಚಿತಪಡಿಸಿದ್ದಾರೆ.
ಏಳು ಜನರಿರುವ ಜೆಡಿಎಸ್ ತಂಡ ಸ್ಫೋಟದ ಬಳಿಕ ನಾಪತ್ತೆಯಾಗಿದ್ದಾರೆ ಎಂದು ತಿಳಿದು ಇನ್ನಿಲ್ಲದ ಆಘಾತ ಹಾಗೂ ನೋವಾಗಿದೆ. ಈ ಪೈಕಿ ಇಬ್ಬರು ಭಯೋತ್ಪಾದಕರ ದಾಳಿಗೆ ಬಲಿಯಾಗಿದ್ದಾರೆ ಎಂದು ಶಂಕಿಸಲಾಗಿದೆ. ಕಳೆದು ಹೋಗಿರುವವರ ಪತ್ತೆ ಹಚ್ಚಲು ನಾನು ಭಾರತ ರಾಯಭಾರ ಕಚೇರಿಯೊಂದಿಗೆ ಸತತ ಸಂಪರ್ಕದಲ್ಲಿದ್ದೇನೆ ಎಂದು ಸಿಎಂ ಕುಮಾರಸ್ವಾಮಿ ಟ್ವೀಟ್ ಮೂಲಕ ತಿಳಿಸಿದ್ದಾರೆ.
ಕೊಲಂಬೊದಲ್ಲಿ ಪ್ರವಾಸದಲ್ಲಿದ್ದ ರಾಜ್ಯದ JDS ನ ಏಳು ಮಂದಿಯ ತಂಡ ಬಾಂಬ್ ಸ್ಫೋಟದ ನಂತರ ಕಾಣೆಯಾಗಿದ್ದಾರೆ. ಇದನ್ನು ಕೇಳಿ ನನಗೆ ಇನ್ನಿಲ್ಲದ ಆಘಾತ ಹಾಗೂ ನೋವಾಗಿದೆ. ಈ ಪೈಕಿ ಇಬ್ಬರು ಭಯೋತ್ಪಾದಕರ ದಾಳಿಗೆ ಬಲಿಯಾಗಿದ್ದಾರೆ ಎಂದು ಶಂಕಿಸಲಾಗಿದೆ. ಕಳೆದು ಹೋಗಿರುವವರ ಪತ್ತೆ ಹಚ್ಚಲು ನಾನು ಭಾರತ ರಾಯಭಾರ ಕಚೇರಿಯೊಂದಿಗೆ ಸತತ ಸಂಪರ್ಕದಲ್ಲಿದ್ದೇನೆ
— H D Kumaraswamy (@hd_kumaraswamy) April 22, 2019
ಬೆಂಗಳೂರಿನ ಯಲಹಂಕ ಶಾಸಕ ಎಸ್.ಆರ್ ವಿಶ್ವನಾಥ್ ಸೇರಿದ ತಂಡ ಪ್ರವಾಸಕ್ಕೆಂದು ಶ್ರೀಲಂಕಾ ತೆರಳಿದ್ದರು. ಇದಲ್ಲದೆ ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಅವರ ಸಂಬಂಧಿ ಪುರುಷೋತ್ತಮ್ ಎಂವರು ಗಂಭೀರವಾಗಿ ಗಾಯಗೊಂಡು ಕೋಮಾ ಸ್ಥಿತಿಯಲಿದ್ದಾರೆ ಎಂದು ತಿಳಿದುಬಂದಿದೆ. ಇವರಿಗೆ ಸ್ಥಳೀಯ ಕೊಲಂಬೋ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದಲ್ಲದೆ ನೆಲಮಂಗಲ ಮೂಲದ ಕೆ.ಜಿ ಹನುಮಂತರಾಯಪ್ಪ ಮತ್ತು ರಂಗಪ್ಪ ಎಂಬ ಇಬ್ಬರು ಕನ್ನಡಿಗರು ಸಾವನಪ್ಪಿದ್ದಾರೆ ಎಂದು ಶ್ರೀಲಂಕಾ ಸರ್ಕಾರ ಟ್ವೀಟ್ ಮಾಡಿದೆ.
ಭೀಕರ ಸರಣಿ ಬಾಂಬ್ ಸ್ಫೋಟದಲ್ಲಿ ಸುರತ್ಕಲ್ ಮೂಲದ ಮಹಿಳೆ ರಝೀನಾ(58) ಮೃತಪಟ್ಟಿದ್ದರು. ಇದೀಗ ಬೆಂಗಳೂರಿನ ಇಬ್ಬರು ಸೇರಿದಂತೆ ಮೂವರು ಕನ್ನಡಿಗರು ಸಾವನ್ನಪ್ಪಿದಂತಾಗಿದೆ.

