ಸಕಾಲಕ್ಕೆ ಚಿಕಿತ್ಸೆ ಸಿಗದೇ ಮಗು, ಗರ್ಭಿಣಿ ಸಾವು: ಮನನೊಂದು ಪತಿ ಆತ್ಮಹತ್ಯೆಗೆ ಯತ್ನ – vishwanews24
ಸಕಾಲಕ್ಕೆ ಚಿಕಿತ್ಸೆ ಸಿಗದೇ ಮಗು, ಗರ್ಭಿಣಿ ಸಾವು: ಮನನೊಂದು ಪತಿ ಆತ್ಮಹತ್ಯೆಗೆ ಯತ್ನ
ಹುಬ್ಬಳ್ಳಿ: ಸಕಾಲಕ್ಕೆ ಸೂಕ್ತ ಚಿಕಿತ್ಸೆ ಸಿಗದೆ ಹೊಟ್ಟೆಯಲ್ಲೇ ಮಗು ಮತ್ತು ಚಿಕಿತ್ಸೆ ಫಲಿಸದೆ ಗರ್ಭಿಣಿ ರಾಧಿಕಾ ಮಲ್ಲೇಶ್ ಗಡ್ಡಿಹೊಳಿ (19) ಸಾವು ಪ್ರಕರಣ ಸದ್ಯ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಈ ಮಧ್ಯೆ ಪತ್ನಿ ಸಾವಿನ ಸುದ್ದಿ ತಿಳಿದು ವಿಷ ಸೇವಿಸಿ ಪತಿಯೂ ಆತ್ಮಹತ್ಯೆಗೆ ಯತ್ನಸಿರುವ ಘಟನೆ ನಡೆದಿದೆ. ಮಲ್ಲೇಶ್(25) ಆತ್ಮಹತ್ಯೆಗೆ ಯತ್ನಿಸಿದ ರಾಧಿಕಾ ಪತಿ. ಸದ್ಯ ಮಲ್ಲೇಶ್ಗೆ ಕಿಮ್ಸ್ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಕಳೆದ 2 ದಿನಗಳಿಂದ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಬೆಳಗಾವಿ ಮೂಲದ ರಾಧಿಕಾ ಗಡ್ಡಿಹೊಳಿ ಸಾವಿನ ಮನೆ ಸೇರಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೇ ರಾಧಿಕಾ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಉಡುಪಿ : ಶ್ರೀಕೃಷ್ಣ ಮಠದಲ್ಲಿ ಅಯ್ಯಪ್ಪ ಮಾಲಾಧಾರಿಗಳಿಂದ ದಾಂಧಲೆ ; 8 ಮಂದಿ ಬಂಧನ – vishwanews24
ಇಷ್ಟಕ್ಕೂ ರಾಧಿಕಾ ವಯಸ್ಸು ಕೇವಲ 19 ವರ್ಷ. ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲಮಟ್ಟಿ ಗ್ರಾಮದವರು. ಎಂಟೂವರೆ ತಿಂಗಳ ಗರ್ಭಿಣಿ ಆಗಿದ್ದ ರಾಧಿಕಾಗೆ 6 ಬಾರಿ ಫಿಟ್ಸ್ ಬಂದಿತ್ತು. ಮೊನ್ನೆ ಭಾನುವಾರ ರಾತ್ರಿ 8 ಗಂಟೆ ಸುಮಾರಿಗೆ ಫಿಟ್ಸ್ ಬಂದು ಸೀರಿಯಸ್ ಆಗಿದ್ದರು. 2 ಆಸ್ಪತ್ರೆಗೆ ಅಲೆದರೂ ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿರಲಿಲ್ಲ. ಕೊನೆಗೆ ಬೆಳಗಾವಿಯ ಬಿಮ್ಸ್ಗೆ ಕರೆದುಕೊಂಡು ಬರುವಷ್ಟರಲ್ಲಿ ಶಿಶು ಗರ್ಭಿಣಿಯ ಹೊಟ್ಟೆಯಲ್ಲೇ ಮೃತಪಟ್ಟಿತ್ತು. ರಾಧಿಕಾ ಸ್ಥಿತಿಯೂ ಗಂಭೀರವಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ನಿನ್ನೆ ಬಿಮ್ಸ್ ಆಸ್ಪತ್ರೆಯಿಂದ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಆದರೆ ರಾಧಿಕಾ ಆರೋಗ್ಯದಲ್ಲಿ ತೀವ್ರ ಏರುಪೇರು ಉಂಟಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
