ಸಮ್ಮರ್ ಶಾಟ್ ಮಾಡಲು ಹೋಗಿ ದಿಗಂತ್ ಕುತ್ತಿಗೆಗೆ ಬಲವಾದ ಪೆಟ್ಟು, ಗೋವಾದಿಂದ ಬೆಂಗಳೂರಿಗೆ ಏರ್​ಲಿಫ್ಟ್​ – Vishwanews24

Featured, ರಾಷ್ಟ್ರ ನ್ಯೂಸ್

ಸಮ್ಮರ್ ಶಾಟ್ ಮಾಡಲು ಹೋಗಿ ದಿಗಂತ್ ಕುತ್ತಿಗೆಗೆ ಬಲವಾದ ಪೆಟ್ಟು, ಗೋವಾದಿಂದ ಬೆಂಗಳೂರಿಗೆ ಏರ್​ಲಿಫ್ಟ್​

ಗೋವಾ: ನಟ ದಿಗಂತ್ ಕುತ್ತಿಗೆಗೆ ಬಲವಾದ ಪೆಟ್ಟು ಬಿದ್ದಿದೆ. ಗೋವಾದ ಸಮುದ್ರ ತಟದಲ್ಲಿ ಸಮ್ಮರ್ ಶಾಟ್ ಹೊಡೆಯುವ ವೇಳೆ ದಿಗಂತ್ ಕುತ್ತಿಗೆಗೆ ಪೆಟ್ಟು ಬಿದ್ದಿದೆ. ಕುಟುಂಬದ ಜೊತೆ ನಟ ದಿಗಂತ್ ಗೋವಾ ಪ್ರವಾಸಕ್ಕೆ ತೆರಳಿದ್ದರು. ಈ ವೇಳೆ ದಿಗಂತ್ ಕುತ್ತಿಗೆಗೆ ಬಲವಾದ ಪೆಟ್ಟು ಬಿದ್ದಿದೆ.

ಸದ್ಯ ಗೋವಾದಲ್ಲೆ ದಿಗಂತ್ ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ. ಕೆಲವೇ ಗಂಟೆಗಳಲ್ಲಿ ಏರ್ ಲಿಪ್ಟ್ ಮೂಲಕ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಿಗಂತ್ ಅವರನ್ನು ಕುಟುಂಬಸ್ಥರು ಕರೆತರಲಿದ್ದಾರೆ ಎಂದು ಹೇಳಲಾಗಿದೆ.

ನಟ ದಿಗಂತ್​ ಕುಟುಂಬ ಸಮೇತ ಗೋವಾ ಪ್ರವಾಸಕ್ಕೆ ತೆರಳಿದ್ದರು. ಆದರೆ ಗೋವಾದಲ್ಲಿ ಈ ಅವಘಡ ಸಂಭವಿಸಿದೆ. ಸಮ್ಮರ್ ಶಾಟ್ ಮಾಡುವ ವೇಳೆ ದಿಗಂತ್ ಅವರ ಕತ್ತಿಗೆ ಬಲವಾದ ಪೆಟ್ಟು ಬಿದ್ದಿದೆ ಎಂದು ತಿಳಿದುಬಂದಿದೆ. ಈಕುರಿತು ಇನ್ನಷ್ಟು ಮಾಹಿತಿ ಬರಬೇಕಾಗಿದೆ.

ಮುಂಬೈ: ಶಿವಸೇನೆ ನಾಯಕರು ನಾಪತ್ತೆಯಾಗಿರುವುದರಲ್ಲಿ ನಮ್ಮ ಪಾತ್ರವಿಲ್ಲ : ಬಿಜೆಪಿ – Vishwanews24

 

Leave a Reply