ಸರ್ಕಾರದಲ್ಲಿ ಯಾವುದೇ ಹಣದ ಕೊರತೆಯಿಲ್ಲ , ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ : ಜಿ ಪರಮೇಶ್ವರ್ ಸ್ಪಷ್ಟನೆ – vishwanews24

Featured, ರಾಜ್ಯ ನ್ಯೂಸ್

 ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ; ಸರ್ಕಾರದಲ್ಲಿ ಯಾವುದೇ ಹಣದ ಕೊರತೆಯಿಲ್ಲ : ಜಿ ಪರಮೇಶ್ವರ್ ಸ್ಪಷ್ಟನೆ

ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ಯಾವುದೇ ಹಣದ ಕೊರತೆಯಿಲ್ಲ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ ಅವರು ಮಂಗಳವಾರ ಸ್ಪಷ್ಟಪಡಿಸಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಬಾದಾಮಿಯಲ್ಲಿ ಸೋಮವಾರ ನಡೆದ ಸಭೆಯನ್ನುದ್ದೇಶಿಸಿ ಮಾತನಾಡಿದ ಹಿರಿಯ ಕಾಂಗ್ರೆಸ್ ನಾಯಕ, ರಾಜ್ಯ ಸರ್ಕಾರದಲ್ಲಿ ಹಣವಿಲ್ಲ ಎಂದು ಹೇಳಿದ್ದರು.

ಪರಮೇಶ್ವರ ಅವರ ಈ ಹೇಳಿಕೆ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆ ವಿರೋಧ ಪಕ್ಷ ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿತ್ತು ಮತ್ತು ರಾಜ್ಯದ ಆರ್ಥಿಕ ಸ್ಥಿತಿ ಹದಗೆಟ್ಟಿದೆ ಎಂದು ಆರೋಪಿಸಿದೆ.

ಉಡುಪಿ : ಮಹಿಳೆ ನಾಪತ್ತೆ – vishwanews24

“ನಾನು ಹಾಗೆ ಹೇಳಿಲ್ಲ, ಹಣವಿಲ್ಲ ಎಂದು ಯಾರು ಹೇಳಿದರು? ನಾವು ದಾಖಲೆಯ ಬಜೆಟ್ ಮಂಡಿಸಿದ್ದೇವೆ. ಭಾಷಣದ ಸಮಯದಲ್ಲಿ ಯಾರೋ ತಮಾಷೆಯಾಗಿ ಕೇಳಿದ್ದಕ್ಕೆ ನಾನು ತಮಾಷೆಯ ರೀತಿಯಲ್ಲಿ ಪ್ರತಿಕ್ರಿಯೆ ನೀಡಿದ್ದೇನೆ ಅಷ್ಟೇ” ಎಂದು ಪರಮೇಶ್ವರ ಅವರು ಇಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.

“ಸಿಎಂ ಸಿದ್ದರಾಮಯ್ಯ ಅವರು 4.9 ಲಕ್ಷ ಕೋಟಿ ರೂ. ಬಜೆಟ್ ಮಂಡಿಸಿದ್ದಾರೆ. ನಾನು ಸರ್ಕಾರದ ಬಳಿ ದುಡ್ಡಿಲ್ಲ ಅಂತ ಹೇಳಿಲ್ಲ. ಯಾವುದೇ ರೀತಿಯ ಆರ್ಥಿಕ ಮುಗ್ಗಟ್ಟು ಇಲ್ಲ. ಹಣ ಬಿಡುಗಡೆ ಸ್ವಲ್ಪ ನಿಧಾನ ಆಗಿರಬಹುದು. ಡಿಪಿಆರ್ ಮಾಡೋದ್ರಲ್ಲಿ ತಡ ಆಗಿರಬಹುದು” ಎಂದು ಹೇಳಿದರು.

ಆಕ್ಸಿಯಂ-4 ಉಡಾವಣೆ ಯಶಸ್ವಿ : ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅಂತರಿಕ್ಷ ಪ್ರಯಾಣ – vishwanews24

“ನಮ್ಮ ಸರ್ಕಾರದಲ್ಲಿ ಯಾವುದೇ ಆರ್ಥಿಕ ತೊಂದರೆ ಇಲ್ಲ ಎಂದು ನಾನು ಈಗ ಅಧಿಕೃತವಾಗಿ ಹೇಳುತ್ತಿದ್ದೇನೆ. ನಾನು ಅದನ್ನು ಬಹಳ ಸ್ಪಷ್ಟವಾಗಿ ಹೇಳುತ್ತಿದ್ದೇನೆ. ಕೆಲವೊಮ್ಮೆ, ಹಣ ಬಿಡುಗಡೆ ಮಾಡುವ ಮೊದಲು ಡಿಪಿಆರ್ ಮತ್ತು ಅಂದಾಜುಗಳನ್ನು ಸಿದ್ಧಪಡಿಸಬೇಕಾಗಿರುವುದರಿಂದ, ಹಣ ಬಿಡುಗಡೆಯಲ್ಲಿ ವಿಳಂಬವಾಗಬಹುದು. ಅದನ್ನು ಹೊರತುಪಡಿಸಿ, ಬೇರೇನೂ ಇಲ್ಲ. ನಮ್ಮ ಸರ್ಕಾರದಲ್ಲಿ ಯಾವುದೇ ಕಾರಣಕ್ಕೂ ಹಣದ ಕೊರತೆಯಿಲ್ಲ. ನಾನು ಅದನ್ನು ಸ್ಪಷ್ಟಪಡಿಸುತ್ತಿದ್ದೇನೆ. ಯಾರಾದರೂ ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಂಡಿದ್ದರೆ, ನಾನು ಅದನ್ನು ಸರಿಪಡಿಸುತ್ತಿದ್ದೇನೆ” ಎಂದು ಗೃಹ ಸಚಿವರು ತಿಳಿಸಿದರು.

ಬೆಳ್ತಂಗಡಿ: ಜ್ವರ ಉಲ್ಬಣಗೊಂಡು ಯುವಕ ಸಾವು – vishwanews24

 

Leave a Reply