ಸಾಮಾಜಿಕ ಜಾಲತಾಣದಲ್ಲಿ ಜಾಮಿಯಾ ಮಸೀದಿ ಕುರಿತು ವಿವಾದಿತ ಹೇಳಿಕೆ : ಋಷಿಕುಮಾರಸ್ವಾಮಿ ವಿರುದ್ಧ ಪ್ರಕರಣ ದಾಖಲು – Vishwanews24

Featured, ರಾಜ್ಯ ನ್ಯೂಸ್

ಸಾಮಾಜಿಕ ಜಾಲತಾಣದಲ್ಲಿ ಜಾಮಿಯಾ ಮಸೀದಿ ಕುರಿತು ವಿವಾದಿತ ಹೇಳಿಕೆ : ಋಷಿಕುಮಾರಸ್ವಾಮಿ ವಿರುದ್ಧ ಪ್ರಕರಣ ದಾಖಲು – Vishwanews24

ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ಕುರಿತು ಸಾಮಾಜಿಕ ಜಾಲತಾಣದಲ್ಲಿ ವಿವಾದಿತ ಹೇಳಿಕೆ ನೀಡಿ ವಿಡಿಯೋ ಹರಿಬಿಟ್ಟಿದ್ದ ಕಾಳಿ ಮಠದ ಋಷಿಕುಮಾರಸ್ವಾಮಿ ವಿರುದ್ಧ ಪಟ್ಟಣ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರಿನ ಕಾಳಿ ಮಠದಲ್ಲಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಪೊಲೀಸರು ಬಂಧಿಸಿದ್ದಾರೆ.

ಋಷಿಕುಮಾರ ಸ್ವಾಮೀಜಿ ಹಿಂದುಗಳೇ ಮಸೀದಿ ಒಡೆಯಿರಿ ಎನ್ನುವ ಪ್ರಚೋದನಕಾರಿ ಹೇಳಿಕೆ ನೀಡಿದಲ್ಲದೇ ಆ ಹೇಳಿಕೆಯನ್ನು ಫೇಸ್ ಬುಕ್ ಹಾಕುವ ಮೂಲಕ ಕೋಮುಗಲಭೆಗೆ ಪ್ರಚೋದನೆ ನೀಡಿರುವ ಆರೋಪದ ಮೇಲೆ ಬಂಧಿಸಲಾಗಿದೆ.  ಶ್ರೀರಂಗಪಟ್ಟಣದ ಮಸೀದಿ ಮುಂದೆ ವಿಡಿಯೋ ಮಾಡಿದ್ದ ಸ್ವಾಮೀಜಿ ಬಾಬರಿ ಮಸೀದಿ ರೀತಿಯಲ್ಲಿ ಶ್ರೀರಂಗಪಟ್ಟಣದ ಮಸೀದಿ ಒಡೆಯಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿರುವುದು ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿತ್ತು.

ಕಾಪು ದಂಡತೀರ್ಥ ಕೆರೆಯಲ್ಲಿ ಕೃಷ್ಣಾಪುರದ ಮಠದ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರ ಪವಿತ್ರ ಸ್ನಾನ:vishwanews24 

ಇದೀಗ ಈ ವಿಡಿಯೋ ವೈರಲ್​ ಆಗಿದೆ. ಈ ಹಿನ್ನೆಲೆ ಮಸೀದಿಗೆ ಭದ್ರತೆ ಹೆಚ್ಚಿಸುವ ಕುರಿತು ವಕ್ಫ್​ ಬೋರ್ಡ್​ ಸಮಿತಿ ಹಾಗೂ ಕೇಂದ್ರ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಶ್ರೀರಂಗಪಟ್ಟಣ ಪಟ್ಟಣ ಪೊಲೀಸ್​ ಠಾಣೆಗೆ ಮನವಿ ಮಾಡಿವೆ. ಮಸೀದಿ ಭದ್ರತೆಗೆ ನಿಯೋಜನೆಗೊಂಡ ಸಿಬ್ಬಂದಿ ನೀಡಿರುವ ಲಿಖಿತ ಮಾಹಿತಿ ಪ್ರಕಾರ ವಿಡಿಯೋದಲ್ಲಿ ಮಾತನಾಡಿರುವ ಋಷಿಕುಮಾರಸ್ವಾಮಿ ಹಾಗೂ ವಿಡಿಯೋ ಚಿತ್ರೀಕರಿಸಿದ ಇಬ್ಬರ ಮೇಲೂ ದೂರು ದಾಖಲಾಗಿದೆ.

ಮಂಗಳೂರು: 5 ಅಥವಾ ಅದಕ್ಕಿಂತ ಹೆಚ್ಚು ಕೋವಿಡ್ ಪಾಸಿಟಿವ್ ಬಂದ ಶಾಲೆ ಒಂದು ವಾರದ ಮಟ್ಟಿಗೆ ತಾತ್ಕಾಲಿಕ ಸ್ಥಗಿತ : ಜಿಲ್ಲಾಧಿಕಾರಿ ಸೂಚನೆ – Vishwanews24

 

Leave a Reply