ಸಿದ್ದರಾಮಯ್ಯನವರ ಅಪ್ಪನಾಣೆಗೂ ಮೋದಿಯೇ ಮುಂದಿನ ಪ್ರಧಾನಿ : ಕೇಂದ್ರ ಸಚಿವ ರಮೇಶ್ ಜಿಗಜಿಣಗಿ – Vishwanews24

Featured, ಜಿಲ್ಲೆ, ರಾಜ್ಯ ನ್ಯೂಸ್

ಬೆಳಗಾವಿ: ಲೋಕಸಭಾ ಚುನಾವಣೆಗೆ ನಾನೇ ವಿಜಯಪುರದ ಅಭ್ಯರ್ಥಿ. ಸಿದ್ದರಾಮಯ್ಯನವರ ಅಪ್ಪನಾಣೆ ಮೋದಿಯೇ ಮುಂದಿನ‌ ಪ್ರಧಾನಿ ಆಗುತ್ತಾರೆ ಎಂದು ಕೇಂದ್ರ ಸಚಿವ ರಮೇಶ್ ಜಿಗಜಿಣಗಿ ಹೇಳಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರ ಅಪ್ಪನಾಣೆಗೂ ಮುಂದಿನ ಪ್ರಧಾನಿ ನರೇಂದ್ರ ಮೋದಿಯೇ. ಅದರಲ್ಲಿ ಯಾವುದೇ ಸಂಶಯವಿಲ್ಲ. ಈ ಮೂಲಕ ಹಿಂದೆ ಮೋದಿ ಅವರಪ್ಪನಾಣೆ ಮತ್ತೆ ಪ್ರಧಾನಿ‌ ಆಗಲ್ಲ ಎಂದಿದ್ದ ಸಿದ್ದರಾಮಯ್ಯನವರ ಹೇಳಿಕೆಗೆ ಸಚಿವ ಜಿಗಜಿಣಗಿ ತಿರುಗೇಟು ನೀಡಿದ್ದಾರೆ.

ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್‌ ಮತ್ತು ನಾನು ಹಳೆಯ ದೋಸ್ತಿಗಳು. ನನ್ನ ಮತ್ತು ಅವನ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. 40 ವರ್ಷದಿಂದಲೂ ಜತೆಯಲ್ಲಿಯೇ ಇದ್ದೇವೆ. ಯತ್ನಾಳ್​ರನ್ನು‌ ರಾಜಕೀಯವಾಗಿ ನಾನೇ ಬೆಳೆಸಿದ್ದೇನೆ. ವಿಜಯಪುರ ಜಿಲ್ಲೆಯಲ್ಲಿ ಪಕ್ಷದ ನಾಯಕರ ಮಧ್ಯೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಅಭಿವೃದ್ಧಿ ಮಾಡಿದಕ್ಕೇ ನಿರಂತರವಾಗಿ ಆಯ್ಕೆ ಆಗುತ್ತಿದ್ದೇನೆ ಎಂದು ಹೇಳಿದರು.

ನಮ್ಮಪ್ಪನ ಆಣೆ ಅಲ್ಲ, ಸಿದ್ದರಾಮಯ್ಯ ಅವರ ಅಪ್ಪನಾಣೆಗೂ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿ ಆಗೇ ಆಗುತ್ತಾರೆ. ನಾನು ಅಭಿವೃದ್ಧಿ ಮಾಡಿದ್ದಕ್ಕೆ ನಿರಂತರವಾಗಿ ಗೆಲುವು ಸಾಧಿಸುತ್ತ ಬಂದಿದ್ದೇನೆ.ಮುಂದಿನ ಲೋಕಸಭೆ ಚುನಾವಣೆಯಲ್ಲಿ ನಾನೇ ವಿಜಯಪುರದ ಬಿಜೆಪಿ ಅಭ್ಯರ್ಥಿ ಎಂದರು.