ಸಿದ್ದರಾಮಯ್ಯನವರ ಬಜೆಟ್ ಮುಸಲ್ಮಾನರಿಗೆ ರಂಜಾನ್ ಕೊಡುಗೆ : ನಾರಾಯಣಸಾ ಕೆ.ಭಾಂಡಗೆ – vishwanews24

Featured, ರಾಜ್ಯ ನ್ಯೂಸ್

ಸಿದ್ದರಾಮಯ್ಯನವರ ಬಜೆಟ್ ಮುಸಲ್ಮಾನರಿಗೆ ರಂಜಾನ್ ಕೊಡುಗೆ : ನಾರಾಯಣಸಾ ಕೆ.ಭಾಂಡಗೆ

ಬಾಗಲಕೋಟೆ: 2025ನೇ ಸಾಲಿನ ಕರ್ನಾಟಕ ಬಜೆಟ್​​ ಮಂಡನೆಯಾಗಿದ್ದು, ಸಿದ್ದರಾಮಯ್ಯ ಮಂಡಿಸಿರೋ ಬಜೆಟ್​ನ ಗಾತ್ರ ಬರೋಬ್ಬರಿ 4 ಲಕ್ಷ ಕೋಟಿ ರೂ ಆಗಿದೆ. ಈ ಬಗ್ಗೆ ಬಾಗಲಕೋಟೆಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ರಾಜ್ಯಸಭಾ ಸದಸ್ಯ ನಾರಾಯಣಸಾ ಕೆ.ಭಾಂಡಗೆ ಪ್ರತಿಕ್ರಿಯಿಸಿ, ಸಿದ್ದರಾಮಯ್ಯನವರ ಬಜೆಟ್ ಮುಸಲ್ಮಾನರಿಗೆ ರಂಜಾನ್ ಕೊಡುಗೆ ಎಂದು ಹೇಳಿದ್ದಾರೆ.

ಸರ್ಕಾರ ರಂಜಾನ್ ಹಬ್ಬದ ಇಫ್ತಾರ್ ಕೂಟದ ಔತಣವನ್ನು ಪೂರ್ಣವಾಗಿ ಕೊಟ್ಟಂತಿದೆ. ಮುಸಲ್ಮಾನರಿಗೆ ಕೊಟ್ಟ ಅನುದಾನ ನೋಡಿದ್ರೆ, ಇದು ಮುಸಲ್ಮಾನರ ಸರ್ಕಾರ ಅನ್ನೋದನ್ನ ಸಿದ್ದರಾಮಯ್ಯ ಮತ್ತೆ ಸಾಬೀತು ಮಾಡಿದ್ದಾರೆ. ಎಂದು ಆಕ್ರೋಶ ವ್ಯಕ್ತಪಡಿಸಿದರು.

ಉಡುಪಿ: ಸಿದ್ದರಾಮಯ್ಯನವರು ಮಂಡಿಸಿದ ಬಜೆಟ್ ರಾಜ್ಯದ ಸಮಗ್ರ ಅಭಿವೃದ್ಧಿಗೆ ಪೂರಕ  : ಪ್ರಸಾದ್ ರಾಜ್ ಕಾಂಚನ್ – vishwanews24

ಮುಸಲ್ಮಾನರ ಮದುವೆಗೆ ಸಹಾಯಧನ ಕೊಟ್ಟಿದ್ದಾರೆ. ಅಲ್ಪಸಂಖ್ಯಾತ 16 ಮಹಿಳಾ ಕಾಲೇಜ್, 100 ಉರ್ದು ಶಾಲೆಗೆ ಹೈಟೆಕ್ ಟಚ್, ಹಜ್ ಭವನ ನಿರ್ಮಾಣಕ್ಕೆ ದುಡ್ಡು ಕೊಡ್ತಿದ್ದಾರೆ. ಮುಸಲ್ಮಾನರು ಎಂದು ಹೇಳಬಾರದು ಎಂಬ ಕಾರಣಕ್ಕೆ ಅಲ್ಪಸಂಖ್ಯಾತರು ಎಂದು ಹೇಳಿದ್ದಾರೆ. 25 ಸಾವಿರ ವಿದ್ಯಾರ್ಥಿಗಳಿಗೆ ಸ್ವಯಂ ರಕ್ಷಣಾ ತರಬೇತಿ ವಿಚಾರವಾಗಿ ಯಾಕೆ, ಅವರಿಗೆ ಯಾಕೆ ರಕ್ಷಣಾ ತರಬೇತಿ? ಬೇರೆ ವಿದ್ಯಾರ್ಥಿಗಳಿಗೆ ಸ್ವಯಂ ರಕ್ಷಣೆ ಬೇಡವೇನು ಎಂದು ಪ್ರಶ್ನೆ ಮಾಡಿದರು.

ಈ ಬಜೆಟ್ ನಲ್ಲಿ ಮುಸಲ್ಮಾನರಿಗೆ ಎನ್ ಕೊಡಬೇಕೆಂದು ರಂಜಾನ್ ಹಬ್ಬದ ಕೊಡುಗೆಯಾಗಿ ಸಂಪೂರ್ಣ ಬಜೆಟ್‌ನ್ನು ಮುಸಲ್ಮಾನರಿಗೆ ಕೊಟ್ಟಿದ್ದಾರೆ. ಎಲ್ಲವನ್ನೂ ಮುಸಲ್ಮಾನರಿಗೆ ಕೊಟ್ಟ ಈ ಸರ್ಕಾರದ್ದು ಬೋಗಸ್ ಬಜೆಟ್ ಉರ್ದು ಉರ್ದು ಅಂತ ಅಲ್ಪಸಂಖ್ಯಾತರ ಹೆಸರಿನಲ್ಲಿ ಮುಸಲ್ಮಾನರಿಗೆ ಕೊಟ್ಟಿದ್ದು, ಇದು ತಾರತಮ್ಯ ಮಾಡಿದಂತಿದೆ ಎಂದು ಕಿಡಿಕಾರಿದ್ದಾರೆ.

ಕರಾವಳಿ ಜಿಲ್ಲೆಗೆ ಯಾವುದೇ ಯೋಜನೆ ಘೋಷಿಸದೆ ಮಲತಾಯಿ ಧೋರಣೆಯ ಬಜೆಟ್ ಮಂಡನೆ : ಯಶ್ಪಾಲ್ ಸುವರ್ಣ – vishwanews24

Leave a Reply