ಸಿದ್ದರಾಮಯ್ಯ 75ನೇ ವರ್ಷದ ಜನ್ಮದಿನಾಚರಣೆ ಹಿನ್ನೆಲೆ : ಆ. 3ಕ್ಕೆ ದಾವಣಗೆರೆಯಲ್ಲಿ ಅಮೃತ ಮಹೋತ್ಸವ – Vishwanews24

Featured, ರಾಜ್ಯ ನ್ಯೂಸ್

ಸಿದ್ದರಾಮಯ್ಯ 75ನೇ ವರ್ಷದ ಜನ್ಮದಿನಾಚರಣೆ ಹಿನ್ನೆಲೆ : ಆ. 3ಕ್ಕೆ ದಾವಣಗೆರೆಯಲ್ಲಿ ಅಮೃತ ಮಹೋತ್ಸವ

ಬೆಂಗಳೂರು: ‘ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ 75ನೇ ವರ್ಷದ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ಆಗಸ್ಟ್ 3ರಂದು ದಾವಣಗೆರೆಯಲ್ಲಿ ಅಮೃತ ಮಹೋತ್ಸವ ಹಮ್ಮಿಕೊಳ್ಳಲಾಗಿದೆ. ಸಮಾವೇಶವನ್ನು ಎಐಸಿಸಿ ನಾಯಕ ರಾಹುಲ್ ಗಾಂಧಿ ಉದ್ಘಾಟಿಸಲಿದ್ದಾರೆ’ ಎಂದು‌ ‘ಸಿದ್ದರಾಮಯ್ಯ–75 ಅಭಿನಂದನಾ ಸಮಿತಿ’ಯ ಗೌರವಾಧ್ಯಕ್ಷರೂ ಆಗಿರುವ ಶಾಸಕ ಆರ್.ವಿ. ದೇಶಪಾಂಡೆ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ‘ನಾಲ್ಕು ದಶಕಗಳಿಂದ ಸಿದ್ದರಾಮಯ್ಯ ಅವರು ರಾಜಕೀಯದಲ್ಲಿದ್ದಾರೆ. ಸಾಮಾಜಿಕ ನ್ಯಾಯದ ಪರವಾಗಿ ಹಲವು ಹೋರಾಟಗಳಲ್ಲಿ ಭಾಗಿಯಾಗಿ ಪ್ರೊ. ನಂಜುಂಡಸ್ವಾಮಿ ಜೊತೆ ಗುರುತಿಸಿಕೊಂಡರು. ರಾಜಕೀಯ ಕ್ಷೇತ್ರದಲ್ಲಿ ಏಳುಬೀಳು ಕಂಡಿದ್ದಾರೆ. ಅವರ ಅಭಿಮಾನಿಗಳು, ಹಿತೈಷಿ ಗಳ ಒತ್ತಾಸೆಯಿಂದ ಅಮೃತ ಮಹೋ ತ್ಸವ ಮಾಡಲಾಗುತ್ತಿದೆ’ ಎಂದರು.

‘ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವಾರು ಕಾಂಗ್ರೆಸ್ ನಾಯಕರು ಭಾಗವಹಿಸಲಿದ್ದಾರೆ’ ಎಂದರು.

ಕಾಂಗ್ರೆಸ್‌ ಮುಖಂಡರಾದ ಎಚ್.ಸಿ. ಮಹದೇವಪ್ಪ, ನಜೀರ್ ಅಹಮದ್, ಭೈರತಿ ಸುರೇಶ್, ಜಯಮಾಲಾ, ಎಚ್. ಆಂಜನೇಯ, ಎಚ್. ಹನುಮಂತಯ್ಯ, ಎಸ್.ಎಸ್. ಮಲ್ಲಿಕಾರ್ಜುನ, ಪಿ.ಜಿ.ಆರ್. ಸಿಂಧ್ಯಾ, ಬಿ.ಎಲ್. ಶಂಕರ್ ಇದ್ದರು.‌

ಬ್ರಿಟನ್ ಹಣಕಾಸು ಸಚಿವ ಸ್ಥಾನಕ್ಕೆ ಇನ್ನ್ಫೋಸಿಸ್ ನಾರಾಯಣಮೂರ್ತಿ ಅಳಿಯ ರಿಷಿ ಸುನಾಕ್ ರಾಜೀನಾಮೆ – Vishwanews24

Leave a Reply