ಸಿ.ಟಿ ರವಿ ಬಹಿರಂಗ ಕ್ಷಮೆ ಕೇಳಿದರೆ ಎಲ್ಲಾ ಮುಗಿಯುತ್ತದೆ : ಎಂಬಿ ಪಾಟೀಲ್ ಆಕ್ರೋಶ – vishwanews24

Featured, ರಾಜ್ಯ ನ್ಯೂಸ್

ಸಿ.ಟಿ ರವಿ ಬಹಿರಂಗ ಕ್ಷಮೆ ಕೇಳಿದರೆ ಎಲ್ಲಾ ಮುಗಿಯುತ್ತದೆ : ಎಂಬಿ ಪಾಟೀಲ್ ಆಕ್ರೋಶ

ಬೆಂಗಳೂರು: ಬಿಜೆಪಿ ಸಂಸ್ಕೃತಿ, ಸಿಟಿ ರವಿ ಹೇಳಿಕೆ ಘೋರವಾದ ಅಪರಾಧ. ಯಾವುದೇ ಹೆಣ್ಣು ಮಗಳು ಊಹಿಸಿಕೊಂಡು ಈ ರೀತಿಯ ಆರೋಪ ಮಾಡಲು ಸಾಧ್ಯವಿಲ್ಲ. ಸಿ.ಟಿ ರವಿ ಬಹಿರಂಗ ಕ್ಷಮೆ ಕೇಳಿದರೆ ಎಲ್ಲಾ ಮುಗಿಯುತ್ತದೆ ಎಂದು ಸಚಿವ ಎಂಬಿ ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಸಿ.ಟಿ ರವಿ ಪದ ಬಳಕೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ ಬಗ್ಗೆ ಸಂಸ್ಕೃತಿ ಬಗ್ಗೆ ಪಾಠ ಹೇಳುತ್ತಾರೆ. ಇದು ಅವರ ಸಂಸ್ಕೃತಿ. ಪ್ರವೋಕ್ ಮಾಡಿದ್ದು ಇರಲಿ ಆದರೆ ಆ ಪದ ಬಳಕೆ ಮಾಡಿದ್ದು ತಪ್ಪು. ಲಕ್ಷ್ಮಿ ಹೆಬ್ಬಾಳ್ಕರ್ ಇರಲಿ ಅಥವ ಯಾವ ಹೆಣ್ಮಗಳು ಇರಲಿ ಷಡ್ಯಂತ್ರ ಮಾಡಿ ಹೇಳಿಕೆ ಕೊಡಲು ಆಗಲ್ಲ ಎಂದು ಕಿಡಿ ಕಾರಿದರು.

ಹೊರರಾಜ್ಯದಿಂದ ಯುವತಿಯರನ್ನ ಕರೆಸಿ ಬೆಂಗಳೂರಿನಲ್ಲಿ ಹೈಟೆಕ್‌ ವೇಶ್ಯಾವಾಟಿಕೆ ದಂಧೆ ; ಆರೋಪಿ ಬಂಧನ – vishwanews24

 

Leave a Reply