ಸುರತ್ಕಲ್‌ ಜಲೀಲ್ ಕೊಲೆ ಪ್ರಕರಣ : ಸರಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತದೆ : ನಳಿನ್ ಕುಮಾರ್ ಕಟೀಲ್ – Vishwanews24

Featured, ದಕ್ಷಿಣ ಕನ್ನಡ

ಸುರತ್ಕಲ್‌ ಜಲೀಲ್ ಕೊಲೆ ಪ್ರಕರಣ : ಸರಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತದೆ : ನಳಿನ್ ಕುಮಾರ್ ಕಟೀಲ್

ಮಂಗಳೂರು: ಸಿದ್ದರಾಮಯ್ಯ ಮತ್ತೆ ಸಿಎಂ ಆಗುವ ಕನಸು ಕಾಣುತ್ತಿದ್ದಾರೆ. ತಿರುಕನೋರ್ವ ಊರಮುಂದೆ ಕನಸು ಕಾಣುತ್ತಿದ್ದನು. ನಾವು ಶಾಲೆಗೆ ಹೋಗುವಾಗ ಈ ಪದ್ಯ ಕೇಳಿದ್ದೇವೆ. ಆ ಹಾಡಿನಂತೆ ಸಿದ್ದರಾಮಯ್ಯ ಪರಿಸ್ಥಿತಿ ಆಗುತ್ತದೆ. ಸಿದ್ದರಾಮಯ್ಯ ಅವರ ಅಪ್ಪನಾಣೆಗೂ ಮುಖ್ಯಮಂತ್ರಿ ಆಗೋದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಸುರತ್ಕಲ್‌ನ ಜಲೀಲ್ ಕೊಲೆ ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಇಂತಹ ಕೃತ್ಯದಿಂದ ರಾಜಕೀಯ ಲಾಭ ಪಡೆಯುತ್ತದೆ. ಕಟ್ಟುನಿಟ್ಟಿನ ಕ್ರಮ ನಮ್ಮ ಸರಕಾರ ಕೈಗೊಳ್ಳುತ್ತದೆ. ಪೊಲೀಸ್ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೇವೆ ಎಂದರು.

ಸುರತ್ಕಲ್ : ಜಂಕ್ಷನ್‌ನಲ್ಲಿ ವಾಹನ ಸಂಚಾರ ನಿಷೇಧ.. ಸಾರ್ವಜನಿಕರಿಗೆ ತೊಂದರೆ , ವಾಹನ ಸವಾರರ ಪರದಾಟ – Vishwanews24

ಜನಾರ್ದನ ರೆಡ್ಡಿ ಹೊಸ ಪಕ್ಷ ಘೋಷಣೆ ಮಾಡಿದ್ದಾರೆ. ನಾವು ಅವರ ಜೊತೆ ಮಾತುಕತೆ ಮಾಡುತ್ತೇವೆ. ಶ್ರೀರಾಮುಲು ಜೊತೆ ಈ ಬಗ್ಗೆ ಮಾತನಾಡಿದ್ದೇನೆ. ಶ್ರೀರಾಮುಲು ಜನಾರ್ದನ ರೆಡ್ಡಿ ಜೊತೆ ಮಾತನಾಡುವುದಾಗಿ ಹೇಳಿದ್ದಾರೆ ಎಂದಿದ್ದಾರೆ.

ಇನ್ನು ಬಿಜೆಪಿ ಒಂದು ರಾಷ್ಟ್ರೀಯ ಪಕ್ಷ. ಚುನಾವಣೆ ಸ್ಪರ್ಧೆ ವಿಚಾರದಲ್ಲಿ ಹಲವಾರು ಯೋಜನೆ ಯೋಜನೆಗಳು ಇವೆ. ಹತ್ತಾರು ಪಾರ್ಟಿ ಹಿಂದೆಯೂ ಬಂದಿದೆ ಮುಂದೆ ಯೂ ಬರುತ್ತದೆ. ಬಿಜೆಪಿಗೆ ಯಾವುದೇ ಲಾಸ್ ಇಲ್ಲ. ಬಿಜೆಪಿ ದೇಶದ ನಂಬರ್ 1 ಪಾರ್ಟಿ. ನಾವು ಕಾಂಗ್ರೆಸ್ ನಂತಹ ಪಾರ್ಟಿಯನ್ನೇ ಎದುರಿಸಿ ಬಂದವರು. ನಮ್ಮ ಎಲ್ಲಾ ಹಿರಿಯರು ಮಾತುಕತೆ ಮಾಡುತ್ತಾರೆ, ಏನಾಗುತ್ತೋ ನೋಡೋಣ ಎಂದು ಹೇಳಿದ್ದಾರೆ.

ಕರಾವಳಿಯಲ್ಲಿ ಪ್ರವಾಸಿಗರ ಸಂಖ್ಯೆ ದಿಢೀರ್‌ ಏರಿಕೆ : ಪ್ರವಾಸಿ ತಾಣ, ಹೋಟೆಲ್‌ , ರೆಸಾರ್ಟ್‌ಗಳು ಭರ್ತಿ – Vishwanews24

Leave a Reply