ಸುರತ್ಕಲ್: ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ ;  ಸವಾರ ಮೃತ್ಯು – vishwanews24

Featured, ಉಡುಪಿ

ಸುರತ್ಕಲ್: ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ ;  ಸವಾರ ಸ್ಥಳದಲ್ಲೇ ಮೃತ್ಯು

ಸುರತ್ಕಲ್: ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮುಕ್ಕ ಜಂಕ್ಷನ್ ನಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.

ಮೃತ ಯುವಕನನ್ನು ಹಳೆಯಂಗಡಿ ಇಂದಿರಾನಗರ ನಿವಾಸಿ ಗಣೇಶ ದೇವಾಡಿಗ (27) ಎಂದು ಗುರುತಿಸಲಾಗಿದೆ.

ಮಂಗಳೂರು : ಕಡಬ ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ಪ್ರಕರಣ ;  ಆರೋಪಿಯ ಜಾಮೀನು ಅರ್ಜಿ ವಜಾ – vishwanews24

ಗಣೇಶ್ ಅವರು ಪಣಂಬೂರು ಬಂದರಿನಲ್ಲಿ ಕೆಲಸ ನಿರ್ವಹಿಸುತ್ತಿದ್ದು ಗುರುವಾರ ಬೆಳಿಗ್ಗೆ ಕೆಲಸಕ್ಕೆ ತನ್ನ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು ಎನ್ನಲಾಗಿದೆ. ಮುಕ್ಕ ಜಂಕ್ಷನ್ ನಲ್ಲಿ ಹಾಕಲಾಗಿದ್ದ ಬ್ಯಾರಿಕೇಡ್ ಬಳಿ ಸ್ಕೂಟರ್ ಸ್ಲೋ ಮಾಡಿದ್ದ ವೇಳೆ ಹಿಂದಿನಿಂದ ಬಂದ ಲಾರಿ ಡಿಕ್ಕಿ ಹೊಡೆದು ಮೃತಪಟ್ಟಿದ್ದಾರೆ.

ಮಂಗಳೂರು ಉತ್ತರ ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರತಿ ಬೂತ್‌ಗೆ ಕನಿಷ್ಠ 400 ಹೊಸ ಸದಸ್ಯರ ನೇಮಕ ಮಾಡುವ ಗುರಿ : ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ – vishwanews24

Leave a Reply