ಸುರತ್ಕಲ್ : ಮದರಸದಿಂದ ಹಿಂತಿರುಗುವ ವೇಳೆ ಬಾಲಕನ ಮೇಲೆ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್  – Vishwanews24

Featured, ದಕ್ಷಿಣ ಕನ್ನಡ

ಸುರತ್ಕಲ್ : ಮದರಸದಿಂದ ಹಿಂತಿರುಗುವ ವೇಳೆ ಬಾಲಕನ ಮೇಲೆ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ 

ಸುರತ್ಕಲ್ : ಶೈಕ್ಷಣಿಕ ಕಲಿಕೆಯಲ್ಲಿ ಹಿಂದಿದ್ದ ಬಾಲಕನೊಬ್ಬ, ಮದರಸದಿಂದ ಹಿಂತಿರುಗುವ ವೇಳೆ ತನ್ನ ಮೇಲೆ ಬೈಕಿನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಹಲ್ಲೆ ನಡೆಸಿದ್ದರು ಎಂದು ಮಾಡಿರುವ ಆರೋಪ, ಸತ್ಯಕ್ಕೆ ದೂರವಾದದ್ದು ಎಂದು ಪೊಲೀಸ್ ತನಿಖೆ ವೇಳೆ ಸಾಬೀತಾಗಿದೆ.

ಕಾಟಿಪಳ್ಳ ನಿವಾಸಿಯೋರ್ವರ ಪುತ್ರ, 6ನೇ ತರಗತಿ ಬಾಲಕರಂದು ಸಂಜೆ ಮದ್ರಸದ ಪಾಠ ಮುಗಿಸಿ ಮನೆಗೆ ಹೋಗುವ ಸಂದರ್ಭ ಹಲ್ಲೆ ನಡೆದಿದೆ ಎಂದು ಅಪ್ರಾಪ್ತ ಹುಡುಗ ಹಾಗೂ ಆತನ ಕುಟುಂಬಸ್ಥರು ದೂರು ನೀಡಿದ್ದರು.

ಕೋಮು ಸೌಹಾರ್ಧತೆಗೆ ಧಕ್ಕೆ ತರುವ ಈ ವಿಚಾರವನ್ನು ಗಂಭೀರವಾಗಿ ತೆಗೆದುಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದರು. ಆದರೆ, ಬಾಲಕ ಪೆನ್ನು ಬಳಸಿ ಶರ್ಟ್ ಹರಿದು ಹಾಕಿದ್ದು, ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಸತ್ಯಕ್ಕೆ ದೂರವಾದದ್ದು ಎಂದು ತನಿಖೆ ವೇಳೆ ಸಾಬೀತಾಗಿದೆ.

“ಘಟನೆಯನ್ನು ಬಹಳ ಗಂಭೀರವಾಗಿ ಪರಿಗಣಿಸಿ, ನಮ್ಮ ಅಧಿಕಾರಿಗಳು ತನಿಖೆಯನ್ನು ತ್ವರಿತವಾಗಿ ಕೈಗೆತ್ತಿಕೊಂಡರು ಮತ್ತು ಸಾಂದರ್ಭಿಕ ಸಾಕ್ಷಿಗಳು ಮತ್ತು ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದರು ಸೇರಿದಂತೆ ಸಾಕ್ಷ್ಯಗಳನ್ನು ಸಂಗ್ರಹಿಸಿದರು. ಇದೇ ವೇಳೆ ನಾನು ಮತ್ತು ನನ್ನ ತಂಡ ಮಕ್ಕಳ ಕಲ್ಯಾಣ ಸಮಿತಿ ಪ್ರತಿನಿಧಿಗಳು ಮತ್ತು ವೈದ್ಯರ ಸಮ್ಮುಖದಲ್ಲಿ ಬಾಲಕನೊಂದಿಗೆ ಸಂವಾದ ನಡೆಸಿದೆವು. ವಾಸ್ತವವಾಗಿ, ಹುಡುಗ ಕಲಿಕೆಯಲ್ಲಿ ಹಿನ್ನಡೆಯಿದ್ದು, ಶಾಲೆಯಲ್ಲಿ ಆತ್ಮೀಯ ಸ್ನೇಹಿತರಿಲ್ಲ ಎಂಬ ಭಾವನೆ ಇದೆ. ಮನೆಯಲ್ಲಿನ ಬಡತನವಿದ್ದು ಈ ಎಲ್ಲಾ ಕಿರಿಕಿರಿಯಿಂದ ನೊಂದಿದ್ದ ಬಾಲಕ ಪೆನ್ನಿನಿಂದ ಶರ್ಟ್ ಹರಿದುಕೊಂಡು ಎಲ್ಲರ ಗಮನ ಸೆಳೆಯಲು ಈ ರೀತಿಯ ಕಥೆ ಕಟ್ಟಿದ್ದ ಸಾಂದರ್ಭಿಕ ಪುರಾವೆಗಳು ಬಾಲಕ ತನ್ನ ಪೆನ್ನಿನಿಂದ ಶರ್ಟ್ ಹರಿದುಕೊಂಡಿರುವುದು ಸಾಬೀತಾಗಿದೆ. ಬಾಲಕ ಧಾರ್ಮಿಕ ಅಧ್ಯಯನ ನಡೆಸುತ್ತಿದ್ದ ಮದರಸಾದ ಧಾರ್ಮಿಕ ಮುಖಂಡರು ಮತ್ತು ಆಡಳಿತ ಮಂಡಳಿಗೆ ಪ್ರಕರಣದ ಬಗ್ಗೆ ಮನವರಿಕೆ ಮಾಡಿದ್ದೇವೆ. ಈ ಘಟನೆಯು ಕೋಮು ಉದ್ವಿಗ್ನತೆಗೆ ಕಾರಣವಾಗುವ ದ್ವೇಷದ ಸಂದೇಶಗಳನ್ನು ಹರಡಲು ಕಾರಣವಾಗಿರುವುದರಿಂದ ನಾವು ಅವುಗಳ ಬಗ್ಗೆ ವಿವರವಾಗಿ ಮಾಹಿತಿ ನೀಡಿದ್ದೇವೆ ಎಂದು ಅವರು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ.

Leave a Reply