ಸುಳ್ಯ : ಚೆನ್ನಕೇಶವ ದೇವಸ್ಥಾನ ಜಾತ್ರೆಗೆ ಅನ್ಯಧರ್ಮೀಯರಿಗೆ ವ್ಯಾಪಾರ ನಿರ್ಬಂಧ : ತುರ್ತು ಸಭೆಯಲ್ಲಿ ನಿರ್ಧಾರ – Vishwanews24

Featured, ದಕ್ಷಿಣ ಕನ್ನಡ

ಸುಳ್ಯ ಚೆನ್ನಕೇಶವ ದೇವಸ್ಥಾನ ಜಾತ್ರೆಗೆ ಅನ್ಯಧರ್ಮೀಯರಿಗೆ ವ್ಯಾಪಾರ ನಿರ್ಬಂಧ : ತುರ್ತು ಸಭೆಯಲ್ಲಿ ನಿರ್ಧಾರ

ಸುಳ್ಯ : ಶ್ರೀ ಚೆನ್ನಕೇಶವ ದೇವಸ್ಥಾನದ ಜಾತ್ರೋತ್ಸವದ ಸಂದರ್ಭದಲ್ಲಿ ಸಂತೆ ವ್ಯಾಪಾರ ನಡೆಸಲು ಈ ಹಿಂದ ಅನ್ಯಧರ್ಮೀಯರಿಗೆ ಅವಕಾಶ ನೀಡಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿತ್ತು, ಆದರೆ ನಿನ್ನ ಸಂಜೆ ನಡೆದ ಜೀರ್ಣೋದ್ಧಾರ ಮತ್ತು ಪುಮುಖರ ತುರ್ತು ಸಭೆಯಲ್ಲಿ ಅನ್ಯ ಧರ್ಮೀಯರಿಗೆ ವ್ಯಾಪಾರ ನಡೆಸಲು ಅವಕಾಶ ನೀಡದಂತ ನಿರ್ಧಾರ ಕೈಗೊಳ್ಳಲಾಗಿದೆ.

ದೇವಸ್ಥಾನದ ವತಿಯಿಂದ ಸಂತೆ ವ್ಯಾಪಾರ ನಡೆಸಲು ಏಲಂ ಮಾಡುವ ಸ್ಥಳದಲ್ಲಿ ಹಿಂದುಯೇತರರಿಗೆ ಅವಕಾಶ ನೀಡುವುದಿಲ್ಲ, ಸಂತೆಯಲ್ಲಿ ವ್ಯಾಪಾರ ನಡೆಸಲು ಹಿಂದುಗಳಿಗೆ ಮಾತ್ರ ಅವಕಾಶ ನೀಡಲು ನಿರ್ಧಾರ ಕೈಗೊಳ್ಳಲಾಗಿದೆ. ಸಂತೆಯಲ್ಲಿ ಈ ಹಿಂದಿನಂತೆ ಮುಕ್ತ ಅವಕಾಶ ನೀಡಲು ಈ ಹಿಂದಿನ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿತ್ತು. ಆದರೆ ಇದಕ್ಕೆ ವಿರೋಧ ವ್ಯಕ್ತಪಡಿಸಿ ಸಂತೆ ವ್ಯಾಪಾರಕ್ಕೆ ಎಲ್ಲರಿಗೂ ಮುಕ್ತ ಅವಕಾಶ ನೀಡಬಾರದು ಎಂದು ಒತ್ತಾಯಿಸಿ ಹಿಂದುತ್ವ ಸಂಘಟನೆಗಳು ಸುಳ್ಯ ತಾಲೂಕು ಹಿಂದೂ ಹಿತ ರಕ್ಷಣಾ ವೇದಿಕೆಯನ್ನು ರಚಿಸಿ ದೇವಸ್ಥಾನಕ್ಕೆ, ಜೀರ್ಣೋದ್ಘಾರ ಸಮಿತಿ ಅಧ್ಯಕ್ಷರಿಗೆ, ತಾಲೂಕು ಆಡಳಿತ, ಪೊಲೀಸ್ ಇಲಾಖೆಗೆ ಹಾಗು ಧಾರ್ಮಿಕ ದತ್ತಿ ಇಲಾಖೆಗೆ ಮನವಿ ನೀಡಿದರು.

ಸವದತ್ತಿ ಜಾತ್ರೆಗೆ ಹೊರಟಿದ್ದ ಭಕ್ತರ ವಾಹನ ಮರಕ್ಕೆ ಡಿಕ್ಕಿ : ಆರು ಮಂದಿ ಸಾವು – Vishwanews24

ಈ ಹಿನ್ನಲೆಯಲ್ಲಿ ಚೆನ್ನಕೇಶವ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಡಾ.ಕ.ವಿ.ಚಿದಾನಂದ ಅವರ ಅಧ್ಯಕ್ಷತೆಯಲ್ಲಿ ತುರ್ತು ಸಭೆ ನಡೆಸಿ ಈ ನಿರ್ಧಾರ ಕೈಗೊಳ್ಳಲಾಗಿದೆ. ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತಸರ ಡಾ.ಹರಪುಸಾದ್ ತುದಿಯಡ್ಕ, ಜೀರ್ಣೋದ್ಧಾರ ಸಮಿತಿ ಸದಸ್ಯರಾದ ಎಂ.ಮೀನಾಕ್ಷಿ ಗೌಡ, ಲಿಂಗಪ್ಪ ಗೌಡ ಕೇರ್ವಳ, ಕೃಪಾಶಂಕರ ತುದಿಯಡ್ಕ, ನ.ಪಂ.ಅಧ್ಯಕ್ಷ ವಿನಯಕುಮಾರ್ ಕಂದಡ್ಕ, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಹಿಂದೂ ಹಿತ ರಕ್ಷಣಾ ವೇದಿಕೆಯ ಸಂಚಾಲಕ ಚಿದಾನಂದ ವಿದ್ಯಾನಗರ, ಕೇಶವ ನಾಯಕ್ ಸುಳ್ಯ, ಸುನಿಲ್ ಕೇರ್ಪಳ,ನಿಕೇಶ್ ಉಬರಡ್ಕ, ಜಿ.ಜಿ.ನಾಯಕ್, ಗೋಪಾಲಕೃಷ್ಣ, ಲತೀಶ್ ಗುಂಡ, ಗಿರೀಶ್ ಕಲ್ಲುಗದ್ದ, ರಜತ್ ಅಡ್ಯಾರ್‌ ಮತ್ತಿತರರು ಇದ್ದರು.

ಮಂಗಳೂರು: ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ : ಆರೋಪಿಗಳ ಮಾಹಿತಿ ನೀಡುವವರಿಗೆ 14 ಲಕ್ಷ ರೂ. ಬಹುಮಾನ – Vishwanews24

 

Leave a Reply