ಸೇತುವೆಯಿಂದ ಚರಂಡಿಗೆ ಬಿದ್ದ ಬಸ್​ ; 29 ಸಾವು, 17 ಮಂದಿಗೆ ಗಾಯ -Vishwanews24

Featured, ರಾಷ್ಟ್ರ ನ್ಯೂಸ್

ಲಖನೌ, : ಇಲ್ಲಿನ ಯುಮುನಾ ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಚಲಿಸುತ್ತಿದ್ದ ಬಸ್​​ ಸ್ಕಿಡ್​​ ಆದ ಪರಿಣಾಮ ರಸ್ತೆ ನಡುವಿನ ಸೇತುವೆಯಿಂದ ಬಹುದೊಡ್ಡ ಚರಂಡಿಗೆ ಬಿದ್ದು ಸುಮಾರು 29 ಮಂದಿ ಸಾವಿಗೀಡಾಗಿ, 17 ಮಂದಿ ಗಂಭೀರವಾಗಿ ಗಾಯಗೊಂಡಿರುವ 17 ಮಂದಿ ಗಂಭೀರವಾಗಿ ಗಾಯಗೊಂಡಿರುವ ದುರಂತ ನಡೆದಿದೆ.

165 ಕಿ.ಮೀ. ಇರುವ ಯಮುನಾ ಎಕ್ಸ್​ಪ್ರೆಸ್‌ ವೇ ಗ್ರೇಟರ್​ ನೋಯ್ಡಾದಿಂದ ಉತ್ತರ ಪ್ರದೇಶದ ಆಗ್ರಾವನ್ನು ಸಂಪರ್ಕಿಸುತ್ತದೆ. ಸುಮಾರು 46 ಪ್ರಯಾಣಿಕರನ್ನು ಹೊತ್ತು ಉತ್ತರ ಪ್ರದೇಶದ ರಾಜಧಾನಿ ಲಖನೌದಿಂದ ದೆಹಲಿಗೆ ತೆರಳುತ್ತಿದ್ದ ಬಸ್​ ರಸ್ತೆಯ ನಡುವೆ ಸ್ಕಿಡ್​ ಆಗಿ ಸೇತುವೆಯಿಂದ ಸುಮಾರು 40 ಅಡಿ ಆಳವಿರುವ ಚರಂಡಿಗೆ ಬಿದ್ದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಯುಪಿ ಪೊಲೀಸರು ಈ ಕುರಿತು ಮಾಹಿತಿ ಖಚಿತಪಡಿಸಿದ್ದಾರೆ.

ಮೂಲಗಳ ಪ್ರಕಾರ ಒನ್​ ಸ್ಲೀಪರ್​ ಕೋಚ್​ ಬಸ್​ ಆಗಿದ್ದು, ದುರಂತ ಸಂಭವಿಸುವ ಮುನ್ನ ಚಾಲಕ ನಿದ್ರೆಗೆ ಜಾರಿದ್ದರಿಂದ ನಿಯಂತ್ರಣ ಕಳೆದುಕೊಂಡ ಬಸ್​ ಚರಂಡಿಗೆ ಬಿದ್ದಿದೆ ಎಂದು ಹೇಳಲಾಗಿದೆ. ಆಗ್ರಾ ಸಮೀಪದಲ್ಲೇ ಈ ದುರ್ಘಟನೆ ಸಂಭವಿಸಿದೆ.

ಚರಂಡಿಗೆ ಬಿದ್ದಿರುವುದರಿಂದ ಬಸ್​ನ ಅಡಿಯಲ್ಲಿ ಸಿಲುಕಿರುವವರನ್ನು ಹೊರತೆಗೆಯಲು ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಬಸ್​​ನ ಮೇಲ್ಭಾಗದ ಕಬ್ಬಿಣದ ಬಿಡಿ ಭಾಗಗಳನ್ನು ಸರಿಸಿ ಮೃತದೇಹಗಳನ್ನು ಹೊರತೆಗೆಯಲಾಗುತ್ತಿದೆ. ಚರಂಡಿಯಾಗಿರುವುದರಿಂದ ರಕ್ಷಣ ಕಾರ್ಯಾಚರಣೆಗೆ ತೊಡಕಾಗಿದೆ.

ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರಗೆ ದಾಖಲಿಸಲಾಗಿದೆ. ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಮೃತರ ಸಾವಿಗೆ ಸಂತಾಪ ಸೂಚಿಸಿದ್ದಾರೆ. ಅಲ್ಲದೆ, ಗಾಯಗೊಂಡವರಿಗೆ ಹಾಗೂ ಸಾವಿಗೀಡಾದ ಕುಟುಂಬದವರಿಗೆ ಸಹಾಯಾಸ್ತ ನೀಡಲು ಸಿಎಂ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.