ಹರಿಯಾಣ ವಿಧಾನಸಭಾ ಚುನಾವಣೆ : ಕಾಂಗ್ರೆಸ್ ಜೆಜೆಪಿ ಪಕ್ಷದೊಂದಿಗೆ ಮೈತ್ರಿ ಸಾಧ್ಯತೆ , ದುಷ್ಯಂತ್ ಚೌಟಾಲಾಗೆ `DCM’ ಸ್ಥಾನದ ಆಫರ್ ಕೊಟ್ಟ ಕಾಂಗ್ರೆಸ್ -Vishwanews24
ಹರಿಯಾಣ: ಹರಿಯಾಣ ವಿಧಾನಸಭಾ ಚುನಾವಣೆಯ ಮತಎಣಿಕೆ ನಡೆಯುತ್ತಿದ್ದು, ಏತನ್ಮಧ್ಯೆ ರಾಜಕೀಯ ಚಟುವಟಿಕೆ ಗರಿಗೆದರಿದೆ. ಇದಕ್ಕೆ ಕಾರಣವಾಗುತ್ತಿರುವುದು ಈ ಬಾರಿ ಯಾವ ಪಕ್ಷಕ್ಕೂ ಸ್ಪಷ್ಟ ಬಹುಮತ ದೊರಕುವುದು ಅನುಮಾನ ಮೂಡಿಸಿದೆ. ಬಿಜೆಪಿ 40 ಸ್ಥಾನಗಳಲ್ಲಿ, ಕಾಂಗ್ರೆಸ್ 33 ಹಾಗೂ ಜೆಜೆಪಿ (ಜನನಾಯಕ್ ಜನತಾ ಪಕ್ಷ) 12 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.
ಈ ಹಿನ್ನೆಲೆಯಲ್ಲಿ ಜೆಜೆಪಿ ಸ್ಥಾಪಕ ದುಶ್ಯಂತ್ ಚೌಟಾಲಾ ಇದೀಗ ಯಾರೇ ಸರಕಾರ ರಚನೆ ಮಾಡುವುದಿದ್ದರೂ ಅದರ ಕೀಲಿ ಕೈ ನಮ್ಮ ಬಳಿ ಇದೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಅಷ್ಟೇ ಅಲ್ಲ ನಮಗೆ ಯಾರು ಮುಖ್ಯಮಂತ್ರಿ ಸ್ಥಾನ ಕೊಡುತ್ತಾರೋ ಅವರಿಗೆ ನಾವು ಬೆಂಬಲ ನೀಡುತ್ತೇವೆ ಎಂದು ಚೌಟಾಲಾ ಆಫರ್ ನೀಡಿದ್ದಾರೆ.
ಮತ್ತೊಂದೆಡೆ ಜೆಜೆಪಿ ಮುಖ್ಯಸ್ಥ ದುಶ್ಯಂತ್ ಚೌಟಾಲಾ ಜತೆ ಕಾಂಗ್ರೆಸ್ ಪಕ್ಷ ನಿರಂತರ ಸಂಪರ್ಕದಲ್ಲಿದ್ದು, ಡಿಸಿಎಂ ಹುದ್ದೆ ಕೊಡುವುದಾಗಿ ತಿಳಿಸಿದ್ದು, ಮಾತುಕತೆ ಮುಂದುವರಿಸಿರುವುದಾಗಿ ಪಕ್ಷದ ಮೂಲಗಳು ತಿಳಿಸಿವೆ.
ಹರಿಯಾಣದಲ್ಲಿ ಸರಕಾರ ರಚನೆ ಮಾಡಲು 45 ಸ್ಥಾನಗಳ ಅಗತ್ಯವಿದೆ. ಬಿಜೆಪಿ 40 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಕಾಂಗ್ರೆಸ್ 34 ಸ್ಥಾನಗಳಲ್ಲಿ, ಜೆಜೆಪಿ 12 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿ ಗೆಲುವಿನ ಹೊಸ್ತಿಲಿನಲ್ಲಿದೆ
