ಹಾಸನ : ಮಹಾಮಾರಿ ಡೆಂಗ್ಯೂಗೆ ಎಂಬಿಬಿಎಸ್ ವಿದ್ಯಾರ್ಥಿ ಬಲಿ – vishwanews24
ಹಾಸನ : ಮಹಾಮಾರಿ ಡೆಂಗ್ಯೂಗೆ ಎಂಬಿಬಿಎಸ್ ವಿದ್ಯಾರ್ಥಿ ಬಲಿ
ಹಾಸನ: ಡೆಂಗ್ಯೂ ಮಹಾಮಾರಿ ಎಂಬಿಬಿಎಸ್ ವಿದ್ಯಾರ್ಥಿಯನ್ನು ಬಲಿಪಡೆದಿದೆ. ಮೃತನನ್ನು ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ವಿದ್ಯಾರ್ಥಿ, ಹೊಳೆನರಸೀಪುರ ತಾಲ್ಲೂಕಿನ, ಹಳ್ಳಿಮೈಸೂರು ಹೋಬಳಿ, ಗೋಹಳ್ಳಿ ಗ್ರಾಮದ ರೇಖಾ ಮತ್ತು ಮಂಜುನಾಥ್ ದಂಪತಿಯ ಪುತ್ರ ಕುಶಾಲ್ (22) ಎಂದು ಗುರುತಿಸಲಾಗಿದೆ.
ಕಳೆದ ಒಂದು ವಾರದಿಂದ ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕುಶಾಲ್ ಗುರುವಾರ ಸಂಜೆ ಸಾವನ್ನಪ್ಪಿದ್ದಾನೆ.
ಮಂಗಳೂರು: ಗದ್ದೆಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಯುವತಿ ಮೃತ್ಯು – vishwanews24
ಡೆಂಗ್ಯೂ ಸೋಂಕಿತನಾಗಿ ಜ್ವರದಿಂದ ಬಳಲುತ್ತಿದ್ದ ವೈದ್ಯಕೀಯ ವಿದ್ಯಾರ್ಥಿಯಾಗಿದ್ದ ಇವರು ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು. ಗುಣವಾಗದ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಪ್ರತಿಭಾನ್ವಿತ, ಬಡ ವಿದ್ಯಾರ್ಥಿಯಾಗಿದ್ದ ಕುಶಾಲ್ ಹಾಸನದ ಹಿಮ್ಸ್ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಓದುತ್ತಿದ್ದರು.
ಕುಶಾಲ್ ತಾಯಿ, ಟೈಲರ್ ವೃತ್ತಿಯಲ್ಲಿದ್ದು, ಅವರೂ ಕೂಡ ಡೆಂಗ್ಯೂ ಸೋಂಕಿನಿಂದ ಬಳಲುತ್ತಿದ್ದಾರೆ. ಆವರೂ ಕೂಡ ಆಸ್ಪತ್ರೆಯಲ್ಲೇ ಒಳರೋಗಿಯಾಗಿದ್ದು, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ಮಂಗಳೂರು : ನಿಯಂತ್ರಣ ತಪ್ಪಿ ಕಾರು ಪಲ್ಟಿ: ಇಬ್ಬರಿಗೆ ಗಾಯ – vishwanews24
