ಹಾಸನ : ಮಾವಿನ ಹಣ್ಣು ಮಾರ್ಕೆಟ್ ಹಿಂದೂಗಳ ಪಾಲಾಗಬೇಕು ; ಹಿಂದೂ ಕಾರ್ಯಕರ್ತರ ಮತ್ತೊಂದು ಅಭಿಯಾನ – Vishwanews24

Featured, ರಾಜ್ಯ ನ್ಯೂಸ್

ಹಾಸನ : ಮಾವಿನ ಹಣ್ಣು ಮಾರ್ಕೆಟ್ ಹಿಂದೂಗಳ ಪಾಲಾಗಬೇಕು ; ಹಿಂದೂ ಕಾರ್ಯಕರ್ತರ ಮತ್ತೊಂದು ಅಭಿಯಾನ

ಹಾಸನ: ಹಿಂದೂ ದೇವಾಲಯ, ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ, ಹಲಾಲ್ ಕಟ್-ಜಟ್ಕಾ ಕಟ್ ವಿವಾದ ಬಳಿಕ, ಇದೀಗ ಮಾವಿನಹಣ್ಣು ಹೋಲ್‍ಸೇಲ್ ಮಾರ್ಕೆಟ್ ಹಿಂದೂಗಳ ಪಾಲಾಗಬೇಕೆಂದು ಹಿಂದೂ ಕಾರ್ಯಕರ್ತರು ಅಭಿಯಾನ ಆರಂಭಿಸಿದ್ದಾರೆ.

ಮಾವಿನ ಸೀಜನ್ ಆರಂಭವಾಗುತ್ತಿದ್ದಂತೆಯೇ ಹಾಸನದಲ್ಲಿ ಹೊಸ ಅಭಿಯಾನ ಆರಂಭವಾಗಿದ್ದು, ಮಾವಿನ ಹಣ್ಣು ಹೋಲ್ ಸೆಲ್ ಮಾರ್ಕೆಟ್ ಹಿಂದೂಗಳ ಪಾಲಾಗಬೇಕು ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟರ್ ಗಳು ವೈರಲ್ ಆಗುತ್ತಿವೆ.

ಮಾವಿನ ಹಣ್ಣಿನ ಮಾರ್ಕೆಟ್ ನಮ್ಮದಾಗಬೇಕು. ಹಿಂದೂ ಯುವಕರೇ ಮುಂದೆ ಬನ್ನಿ ಎಂದು ಕರೆ ನೀಡಲಾಗಿದೆ.

ವಾಟ್ಸಪ್ ಗ್ರೂಪ್ ನಲ್ಲಿ ಅಭಿಯಾನ ಶುರುವಾಗಿದ್ದು, ಮಾವಿನ ಹಣ್ಣಿನ ಮಾರ್ಕೆಟ್ ಹಿಂದೂಗಳದ್ದಾಗಬೇಕು. ಹಿಂದೂ ಯುವಕರೆ ಮುಂದೆ ಬನ್ನಿ ಎಂದು ಹಿಂದೂ ಸಂಘಟನೆಗಳು ಕರೆ ನೀಡಿವೆ.

ಮಂಗಳೂರು : ಕರಾವಳಿ ಭಾಗದಲ್ಲಿ ಮಳೆ ಸಾಧ್ಯತೆ : ಯೆಲ್ಲೋ ಅಲರ್ಟ್ ಘೋಷಣೆ – Vishwanews24

Leave a Reply