ಹಿಂದು ಮುಸ್ಲಿಂ ಕ್ರಾಸ್ ಆಗಿ ಹುಟ್ಟಿದವರು ಬಹಳ ಜನ ಇದ್ದಾರೆ , ಲವ್ ಜಿಹಾದ್ ಕಾನೂನಿಗೆ ಸಿದ್ದರಾಮಯ್ಯ ವಿರೋಧ -Vishwanews24

Featured, ರಾಜ್ಯ ನ್ಯೂಸ್

ಹಿಂದು ಮುಸ್ಲಿಂ ಕ್ರಾಸ್ ಆಗಿ ಹುಟ್ಟಿದವರು ಬಹಳ ಜನ ಇದ್ದಾರೆ , ಲವ್ ಜಿಹಾದ್ ಕಾನೂನಿಗೆ ಸಿದ್ದರಾಮಯ್ಯ ವಿರೋಧ -Vishwanews24

ಬೆಂಗಳೂರು: ಲವ್ ಜಿಹಾದ್ ಕಾಯ್ದೆ ಹಾಗೂ ಗೋಹತ್ಯೆ ನಿಷೇಧ ಕಾಯ್ದೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರವಾಗಿ ವಿರೋಧ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನು ಜಾರಿಗೆ ತರಲು ಸರ್ಕಾರ ಚಿಂತನೆ ಹಿನ್ನೆಲೆ ಇಂದು ಮುಸ್ಲಿಂ ಮುಖಂಡರ ನಿಯೋಗ ವಿಪಕ್ಷ ನಾಯಕ ಸಿದ್ದರಾಮಯ್ಯರನ್ನು ಭೇಟಿ ಮಾಡಿತ್ತು. ಈ ವೇಳೆ ಮಾತಾಡಿದ ಸಿದ್ದರಾಮಯ್ಯ, ಕೇಂದ್ರ ವಿವೇಕ ಇಲ್ಲದೆ ಕಾನೂನು ತರುತ್ತಿದೆ. ಮದುವೆ ಅವರವರ ವೈಯುಕ್ತಿಕ ಆಯ್ಕೆ. ಈ ದೇಶದಲ್ಲಿ ಮುಸಲ್ಮಾನರು ಮೊಘಲರು 600 ವರ್ಷಗಳಿಂದ ಇದ್ದಾರೆ. ಎಷ್ಟೋ ಸಂಬಂಧಗಳು ಬೆಳೆದು ಬಿಟ್ಟಿದ್ದಾವೆ ಎಂದರು.

ಇದೇ ವೇಳೆ ಹಿಂದೂ- ಮುಸ್ಲಿಂ ಕ್ರಾಸ್ ಆಗಿ ಹುಟ್ಟಿದವರು ಬಹಳ ಜನ ಇದ್ದಾರೆ. ನನ್ನ ಪ್ರಕಾರ ಇದೊಂದು ಮೂರ್ಖತನ. ಇದನ್ನು ಸಂವಿಧಾನ ಅನುಮತಿಸುವುದಿಲ್ಲ. ಕೋರ್ಟಿಗೆ ಹೋದರೆ ವಜಾ ಆಗುತ್ತವೆ. ವಯಸ್ಸಿಗೆ ಬಂದ ಹೆಣ್ಣು ಅಥವಾ ಗಂಡು ಅವರ ಇಚ್ಛೆಯಂತೆ ಬದುಕಬಹುದು ಎಂದು ಇತ್ತೀಚೆಗಷ್ಟೇ ಅಲಹಬಾದ್ ಹೈಕೋರ್ಟ್ ಹೇಳಿದೆ. ತೀರ್ಪಿನ ನಂತರವೂ ಕೇಂದ್ರ ಕಾನೂನು ಜಾರಿಗೆ ಮುಂದಾಗಿರುವುದು ದುರುದ್ದೇಶದ ಸಂಗತಿ ಆಗಿದೆ ಎಂದರು.

ದೇಶದಲ್ಲಿ 600 ವರ್ಷಗಳ ಕಾಲ ಮೊಗಲರು ಆಳ್ವಿಕೆ ನಡೆಸಿದ್ದರು. ಅವಾಗ ಏಷ್ಟೋ ಸಂಬಂಧಗಳು ಬೆಳೆದುಬಿಟ್ಟಿವೆ. ಹಿಂದು ಮುಸ್ಲಿಂ ಕ್ರಾಸ್ ಆಗಿ ಹುಟ್ಟಿದವರು ಬಹಳ ಜನ ಇದ್ದಾರೆ. ಇಂತಹ ಸಂದರ್ಭದಲ್ಲಿ ಲವ್ ಜಿಹಾದ್ ತಡೆ ಕಾಯ್ದೆ ಮೂರ್ಖತನ. ಇದಕ್ಕೆ ಸಂವಿಧಾನ ಅವಕಾಶ ಕೊಡಲ್ಲ ಎಂದರು.