ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ನದಿ ನೀರಿನಲ್ಲಿ ಕೊಚ್ಚಿ ಹೋದ ಬಸ್ (ವಿಡಿಯೊ)
ಶಿಮ್ಲಾ: ಕೇರಳ, ಈಶಾನ್ಯ ಭಾರತ ಆಯ್ತು ಇದೀಗ ಹಿಮಾಚಲ ಪ್ರದೇಶದಲ್ಲಿ ವರುಣರಾಯ ರೌದ್ರಾವತಾರ ತೋರುತ್ತಿದ್ದಾನೆ. ಭಾರಿ ಮಳೆಗೆ ಇಲ್ಲಿನ ಪ್ರಸಿದ್ಧ ಪ್ರವಾಸಿ ತಾಣ ಮನಾಲಿ ಅಕ್ಷರಶಃ ತತ್ತರಿಸಿ ಹೋಗಿದೆ.
ಮನಾಲಿಯಲ್ಲಿ ಭಾರಿ ಮಳೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 127.4 ಮಿ.ಮೀ. ಮಳೆಯಾಗಿದೆ. ಪ್ರಮುಖ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಮನಾಲಿ ರಸ್ತೆಗಳೆಲ್ಲಾ ಸಂಪೂರ್ಣ ಜಲಾವೃತಗೊಂಡಿದೆ. ಅಲ್ಲದೆ ಭಾರಿ ಮಳೆಗೆ ಭೂಕುಸಿತ ಉಂಟಾಗಿದ್ದು, ಹಲವೆಡೆ ರಸ್ತೆ ಸಂಪರ್ಕ ಕಡಿತಗೊಂಡಿದೆ. ಇಲ್ಲಿನ ಬಿಯಾಸ್ ನದಿ ತುಂಬಿ ಹರಿಯುತ್ತಿದ್ದು, ದಡದಲ್ಲಿ ನಿಂತಿದ್ದ ಟೂರಿಸ್ಟ್ ಬಸ್ ಒಂದು ನೀರಿನಲ್ಲಿ ಕೊಚ್ಚಿ ಹೋಗಿದೆ. ಈ ದೃಶ್ಯ ಕ್ಯಾಮರಾಗಳಲ್ಲಿ ಸೆರೆಯಾಗಿದೆ.
ಅದೃಷ್ಟವಶಾತ್ ಬಸ್ ನಲ್ಲಿ ಯಾವುದೇ ಪ್ರಯಾಣಿಕರು ಇಲ್ಲವಾದ್ದರಿಂದ ನಡೆಯಬಹುದಾಗಿದ್ದ ಭಾರಿ ದುರಂತವೊಂದು ತಪ್ಪಿದೆ. ಇನ್ನು ಕೆಲವು ಟ್ರಕ್ಗಳು ಪ್ರವಾಹದಲ್ಲಿ ಸಿಲುಕಿದ್ದು, ತಗ್ಗು ಪ್ರದೇಶಗಳು ಸಂಪೂರ್ಣ ಜಲಾವೃತಗೊಂಡಿವೆ. ಬಿಯಾಸ್ ನದಿಯು ಮಂಡಿ ಜಿಲ್ಲೆಯ ಚಂಡೀಗರ್-ಮೊನಾಲಿ ರಾಷ್ಟ್ರೀಯ ಹೆದ್ದಾರಿ 21ರಲ್ಲಿ ಅಪಾಯದ ಸುಳಿವು ನೀಡಿದ್ದು, ರಸ್ತೆಗಳು ಮುಳುಗಡೆಯಾಗುವ ಭೀತಿ ಎದುರಾಗಿದೆ.
#WATCH: Vacant bus gets washed away into the flooded Beas river in Manali. #HimachalPradesh pic.twitter.com/GMV2nqR2jX
— ANI (@ANI) September 23, 2018
