ಹೆಚ್​ಡಿಕೆ ಸಮಿಶ್ರ ಸರ್ಕಾರವನ್ನು ಯಾರು ಕೆಡುವಲು ಸಾಧ್ಯವಿಲ್ಲ: ಮುಖ್ಯಮಂತ್ರಿ ಕುಮಾರಣ್ಣ

Featured, ರಾಜ್ಯ ನ್ಯೂಸ್

ಬೆಂಗಳೂರು: ಇದೀಗ ಬಜೆಟ್​ ಮಂಡನೆ ಬಳಿಕ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಹೆಚ್​ಡಿಕೆ ಸರ್ಕಾರವನ್ನು ಯಾರು ಕೆಡುವಲು ಸಾಧ್ಯವಿಲ್ಲ. ನಾವು ಒಟ್ಟಾಗಿದ್ದೇವೆ ಹಾಗೂ ಸಮ್ಮಿಶ್ರ ಸರ್ಕಾರ ಭದ್ರವಾಗಿದೆ. ಮಾಧ್ಯಮದವರ ಸಹಕಾರ ಬೇಕು ಅಷ್ಟೆ. ಕಾಂಗ್ರೆಸ್ ಪಕ್ಷದ ಬೆಂಬಲದಿಂದ ಉತ್ತಮ ಬಜೆಟ್ ಮಂಡನೆ ಸಾಧ್ಯವಾಗಿದೆ ಎಂದು ಹೇಳಿದ್ದಾರೆ.
ಇದೇ ಸಮದರ್ಭದಲ್ಲಿ ಸಾಲಮನ್ನಾದ ಕುರಿತಾಗಿ ಮಾತನಾಡಿದ ಅವರು ಸಾಲಮನ್ನಾಕ್ಕೆ ಈ ವರ್ಷ 10,500 ಕೋಟಿ ಇಟ್ಟಿದ್ದೇವೆ. ಬೆಳೆ ಸಾಲ ಮಾತ್ರ ಈಗ ಮನ್ನಾ ಮಾಡಲಾಗಿದೆ. ​ಸಾಲಮನ್ನಾವನ್ನು 2 ಲಕ್ಷ ಕ್ಕೆ ನಿಗದಿ ಮಾಡಿದ್ದೇವೆ. ಕೆಲವು ರೈತರ 40-50 ಲಕ್ಷದ ವರೆಗೂ ಸಾಲ ಮಾಡಿದ್ದಾರೆ ಎಂದಿದ್ದಾರೆ. ಅಲ್ಲದೇ ಅಕ್ಕಿಯಲ್ಲಿ ಕಡಿತ ಮಾಡಿದರೂ ಪೌಷ್ಟಿಕಾಂಶದಲ್ಲಿ ಹೆಚ್ಚಳವಾಗಿದೆ. ಈ ಬಜೆಟ್​ ಹಳೆಯ ಬಜೆಟ್​ನ ಗಾತ್ರ ಹೆಚ್ಚಿಸಿದೆ. ಇದು ಪೂರ್ಣ ಪ್ರಮಾಣದ ಬಜೆಟ್​ ಎಂದೂ ತಿಳಿಸಿದ್ದಾರೆ

ಬಿಜೆಪಿಯವರ ಟೊಳ್ಳು ಮಾತುಗಳನ್ನು ಜನತೆ ನಂಬಬಾರದು

ಯಡಿಯೂರಪ್ಪ ಸೇರಿದಂತೆ ಹಲವು ಬಿಜೆಪಿ ನಾಯಕರು ಬಜೆಟ್​ ಕುರಿತಾಗಿ ಅಸಮಾಧಾನ ವ್ಯಕ್ತಪಡಿಸಿದ್ದು, ಕರಾವಳಿ ಭಾಗದ ಜನರಿಗೆ ಯಾವುದೇ ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸಿಲ್ಲ ಎಂದಿ ದೂರಿದ್ದಾರೆ. ಇದೀಗ ಬಜೆಟ್​ ಮಂಡನೆ ಬಳಿಕ  ಸಿಎಂ ಕುಮಾರಸ್ವಾಮಿ ಬಿಜೆಪಿಯವರ ಟೊಳ್ಳು ಮಾತುಗಳನ್ನು ಜನ ನಂಬಬಾರದು, ಸಮ್ಮಿಶ್ರ ಸರ್ಕಾರವಿರುವುದು ನಾಡಿನ ಸಮಗ್ರ ಅಭಿವೃದ್ಧಿಗೆ ಇರುವುದು. ಕಲಾಪದಲ್ಲಿ ಇದಕ್ಕೆಲ್ಲಾ ಉತ್ತರಿಸುತ್ತೇನೆ ಎಂದು ಪ್ರತ್ಯುತ್ತರ ನೀಡಿದ್ದಾರೆ.

ಬಿಜೆಪಿಯವರ ಟೊಳ್ಳು ಮಾತುಗಳನ್ನು ಜನ ನಂಬಬಾರದು, ಸಮ್ಮಿಶ್ರ ಸರ್ಕಾರವಿರುವುದು ನಾಡಿನ ಸಮಗ್ರ ಅಭಿವೃದ್ಧಿಗೆ ಇರುವುದು. ಕಲಾಪದಲ್ಲಿ ಇದಕ್ಕೆಲ್ಲಾ ಉತ್ತರಿಸುತ್ತೇನೆ ಎಂದಿದಸ್ದಾರೆ. ಅಲ್ಲದೇ ಬೆಂಗಳೂರು ನಗರಾಭಿವೃದ್ಧಿಗೆ ಸಮಗ್ರ ಒತ್ತು ನೀಡಿದ್ದೇವೆ. ನೀಡಿದ ಭರವಸೆಗಳ ಪೂರೈಸಲು ಅಧಿಕಾರಿಗಳು ಜೊತೆ ನೀಡಲಿದ್ದಾರೆ. 5 ದಿನಗಳಿಂದ ಅಧಿಕಾರಿಗಳ ನಿದ್ದೆಗೆಡಿಸಿದ್ದೇನೆ.
ಜನರಿಗೆ ಕೊಟ್ಟ ಭರವಸೆ ಈಡೇರಿಸಲು ಅಧಿಕಾರಿಗಳಿಗೆ ಹೆಚ್ಚಿನ ಕೆಲಸ ಕೊಟ್ಟಿದ್ದೇನೆ ಎಂದು ಅಧಿಕಾರಿಗಳ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.