ಹೊಳೆಯುವ ಪದಾರ್ಥಕ್ಕೆ ಗ್ರಾಮೀಣ ಭಾಷೆಯಲ್ಲಿ ಮಿಣಿಮಿಣಿ ಎಂದು ಕರೆಯುತ್ತಾರೆ : ಕುಮಾರಸ್ವಾಮಿ -Vishwanews24
ಬೆಂಗಳೂರು: ಮಿಣಿ ಮಿಣಿ ಪದ ಬಳಕೆ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ಗೆ ಗುರಿಯಾಗಿದ್ದ ಜೆಡಿಎಸ್ ನಾಯಕ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮಿಣಿ ಮಿಣಿ ಪದದ ಅರ್ಥ ಹೇಳುವ ಮೂಲಕ ಬಿಜೆಪಿಗೆ ತಿರುಗೇಟು ನೀಡಿದ್ದಾರೆ.
ಮಿಣಿಮಿಣಿ ಪದ ಬಳಕೆ ಕುರಿತಂತೆ ಮಂಗಳವಾರ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಹೊಳೆಯುವ ಪದಾರ್ಥಕ್ಕೆ ಗ್ರಾಮೀಣ ಭಾಷೆಯಲ್ಲಿ ಮಿಣಿಮಿಣಿ ಎಂದು ಕರೆಯುತ್ತಾರೆ. ಇದು ಶುದ್ಧ ಕನ್ನಡ ಪದವಾಗಿದ್ದು, ಗ್ರಾಮೀಣ ಭಾಗದ ಜನರು ಈ ಪದವನ್ನು ಬಳಕೆ ಮಾಡುತ್ತಾರೆ. ಬಿಜೆಪಿಯವರ ಜಿನ್ಸ್ ಪಾಕಿಸ್ತಾನ ಆಗಿರುವುದರಿಂದ ಅವರಿಗೆ ಕನ್ನಡ ಪದಗಳ ಬಗ್ಗೆ ತಾತ್ಸಾರವಿದ್ದು ಅವರು ಗ್ರಾಮೀಣ ಕರ್ನಾಟಕವನ್ನು ಅಪಮಾನಿಸಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.
ಗ್ರಾಮೀಣ ಕನ್ನಡದಲ್ಲಿ ಹೊಳೆಯುವ ಪದಾರ್ಥಕ್ಕೆ ಮಿಣಿಮಿಣಿ ಎನ್ನಲಾಗುತ್ತದೆ. ಅದು ಶುದ್ಧ ಕನ್ನಡ, ಗ್ರಾಮೀಣ ಪದ. ಅದನ್ನೇ ಅಪಮಾನಕ್ಕೆ ಬಳಸಿಕೊಳ್ಳಲಾಗುತ್ತಿದೆ ಎಂದರೆ ಅದು ಕನ್ನಡಕ್ಕೆ, ಗ್ರಾಮೀಣ ಕರ್ನಾಟಕಕ್ಕೆ ಮಾಡಿದ ಅಪಮಾನ. ಎಷ್ಟೇ ಆಗಲಿ ಬಿಜೆಪಿಗರ ಜೀನ್ ಪಾಕಿಸ್ತಾನದ್ದಲ್ಲವೇ. ಅದಕ್ಕೇ ಅವರಿಗೆ ಕನ್ನಡದ ಪದಗಳು ತಾತ್ಸಾರ.
4/4— H D Kumaraswamy (@hd_kumaraswamy) January 28, 2020
ನಾನು ಯಾವುದೇ ಸುಳ್ಳು ಹೇಳಿಲ್ಲ, ನಿಂದನಾತ್ಮಕ ಪದವನ್ನು ಬಳಕೆ ಮಾಡಿಲ್ಲ, ಪತ್ರಿಕೆಯಲ್ಲಿ ಬಂದಿದ್ದ ವರದಿಯನ್ನೇ ಓದಿ ಹೇಳಿದ್ದೇನೆ, ಕನ್ನಡ ಭಾಷೆಯ ಬಗ್ಗೆ ಅರಿವಿರದ ಬಿಜೆಪಿಯವರು ಸತ್ಯದ ಮಾತನ್ನು ಗೇಲಿ ಮಾಡಿ, ಉಗ್ರ ಆದಿತ್ಯ ರಾವ್ ಬೆನ್ನಿಗೆ ನಿಂತಿದ್ದಾರೆ ಇವರು ಧರ್ಮ ವಿರೋಧಿಗಳು ಎಂದು ಕುಮಾರಸ್ವಾಮಿ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.
