ಹೋದ ಕಡೆಯೆಲ್ಲ ಸಿದ್ದರಾಮಯ್ಯ ಅಭ್ಯರ್ಥಿಗಳ ಘೋಷಣೆ ಮಾಡುವುದು ಸರಿಯಲ್ಲ : ಸತೀಶ ಜಾರಕಿಹೊಳಿ – Vishwanews24

Featured, ರಾಜ್ಯ ನ್ಯೂಸ್

ಹೋದ ಕಡೆಯೆಲ್ಲ ಸಿದ್ದರಾಮಯ್ಯ ಅಭ್ಯರ್ಥಿಗಳ ಘೋಷಣೆ ಮಾಡುವುದು ಸರಿಯಲ್ಲ : ಸತೀಶ ಜಾರಕಿಹೊಳಿ

ಕೊಪ್ಪಳ: ಹೋದ ಕಡೆಯೆಲ್ಲ ಸಿದ್ದರಾಮಯ್ಯ ಅಭ್ಯರ್ಥಿಗಳ ಘೋಷಣೆ ಮಾಡುವುದು ಸರಿಯಲ್ಲ ಎಂದು ಮಾಜಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಕುಷ್ಟಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಅರ್ಜಿ ಹಾಕಿದವರಿಗೆ ನಮಗೂ ಟಿಕೆಟ್ ಸಿಗುತ್ತದೆ ಎಂಬ ಆಸೆ ಇರುತ್ತದೆ. ಆದರೆ, ಏಕಾಏಕಿ ಟಿಕೆಟ್ ಘೋಷಣೆ ಮಾಡುವುದರಿಂದ ಅರ್ಜಿ ಹಾಕಿದವರಿಗೆ ತೊಂದರೆಯಾಗುತ್ತದೆ. ಒಂದು ಕಡೆ ಅರ್ಜಿಗಳ ಇತ್ಯರ್ಥವಾಗಿಲ್ಲ. ಮತ್ತೊಂದು ಕಡೆ ಇವರಿಗೆ ಮತ ಹಾಕಿ ಎನ್ನುವುದು ಸರಿಯಲ್ಲ ಎಂದರು.

ಹಾಗಾದರೇ ಸಿದ್ದರಾಮಯ್ಯ ಹೆಸರು ಘೋಷಣೆ ಮಾಡಿದ್ದು ತಪ್ಪು ಎನ್ನುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸದ ಸತೀಶ ಜಾರಕಿಹೊಳಿ, ನಾನು ತಪ್ಪು ಅನ್ನಬೇಕು, ನೀವು ಅಲ್ಲಿ ಮತ್ತೇನಾದರೂ ಟ್ವಿಸ್ಟ್ ಮಾಡಿ ಕೇಳಬೇಕು. ಇದೆಲ್ಲ ಸರಿ ಇರಲ್ಲ ಎಂದರು.

ಉಡುಪಿ : ಅನೈತಿಕ ದಂಧೆ ತಡೆಯಲು ಕಾರ್ಯಾಚರಣೆಗೆ ಇಳಿದ ಎಸ್ಪಿ: ಮಂಗಳಮುಖಿಯರೊಂದಿಗೆ ವಾಗ್ವಾದ ; ಇಬ್ಬರು ಪಿಂಪ್‌ಗಳ ಬಂಧನ – Vishwanews24

ಬೆಳಗಾವಿ ಗಡಿ ವಿವಾದ ವಿಚಾರವು ಒಂದು ರೀತಿ ವರ್ಷಕ್ಕೆ ಒಮ್ಮೆ ಮಳೆ ಬಂದ ಹಾಗೆ ಇರಲಿದೆ. ಚುನಾವಣೆ ಬಂದಾಗೆಲ್ಲ ಗಡಿ ವಿವಾದ ಹುಟ್ಟಿಕೊಳ್ಳುತ್ತದೆ ಎಂದು ಸತೀಶ ಜಾರಕಿಹೊಳಿ ಕಿಡಿಕಾರಿದರು.

Leave a Reply