​ಎಸೆಸೆಲ್ಸಿ ಪರೀಕ್ಷೆ: ದ.ಕ. ಜಿಲ್ಲೆಯಲ್ಲಿ ಮೊದಲ ದಿನವೇ 392 ವಿದ್ಯಾರ್ಥಿಗಳು ಗೈರು – Vishwanews24

Featured, ದಕ್ಷಿಣ ಕನ್ನಡ

ಮಂಗಳೂರು, : ಎಸೆಸೆಲ್ಸಿ ಪರೀಕ್ಷೆ ಆರಂಭಗೊಂಡಿದ್ದು, ಇಂದು ನಡೆದ ಮೊದಲ ಪರೀಕ್ಷೆಯಲ್ಲಿ ದ.ಕ. ಜಿಲ್ಲೆಯಿಂದ ಹೆಸರು ನೋಂದಾಯಿಸಿಕೊಂಡಿದ್ದವರ ಪೈಕಿ 392 ಮಂದಿ ಗೈರು ಹಾಜರಾಗಿದ್ದರು.

ಇಂದು ನಡೆದ ಕನ್ನಡ ಮತ್ತು ಇಂಗ್ಲಿಷ್ ಭಾಷಾ ಪರೀಕ್ಷೆಗೆ ದ.ಕ. ಜಿಲ್ಲೆಯಲ್ಲಿ 29,097 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದರು. ಈ ಪೈಕಿ 28,705 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಒಟ್ಟು 392 ಮಂದಿ ಗೈರು ಹಾಜರಾಗಿದ್ದರು.

ಗುರುವಾರ ಪ್ರಥಮ ಭಾಷೆ ವಿಷಯಗಳಾದ ಕನ್ನಡ, ತೆಲುಗು, ಹಿಂದಿ , ಮರಾಠಿ , ತಮಿಳು, ತೆಲುಗು , ಉರ್ದು , ಇಂಗ್ಲೀಷ್ ಮತ್ತು ಸಂಸ್ಕೃತ ಪರೀಕ್ಷೆ ನಡೆದಿದೆ. ಬೆಳಗ್ಗೆ 9.30 ರಿಂದ ಪರೀಕ್ಷೆ ಆರಂಭಗೊಂಡಿದ್ದು, 12.30ಕ್ಕೆ ಪರೀಕ್ಷೆ ಕೊನೆಗೊಂಡಿದೆ.

ಇನ್ನು ಮೊದಲ ದಿನದ ಪರೀಕ್ಷೆ ನಿರಾಂತಕವಾಗಿ ಸಾಗಿದ್ದು, ಯಾವುದೇ ಅವ್ಯವಹಾರ ನಡೆದಿಲ್ಲ ಎಂದು ಜಿಲ್ಲಾ ಶಿಕ್ಷಣಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.