ಕೊಪ್ಪಳ: ಮಕ್ಕಳಿಗೆ ಪೌಷ್ಟಿಕ ಆಹಾರ ಸಿಗಬೇಕು ಅನ್ನೋ ಕಾರಣಕ್ಕೆ ಸರ್ಕಾರ ಅಂಗನವಾಡಿ ಮಕ್ಕಳಿಗೆ ನಿತ್ಯ ಉಪಾಹಾರದೊಂದಿಗೆ ಮೊಟ್ಟೆಯನ್ನು ನೀಡುತ್ತಿದೆ. ಆದ್ರೆ ಅಂಗನವಾಡಿ ಮಕ್ಕಳಿಗೆ ಕೊಡುವ ಮೊಟ್ಟೆಯಲ್ಲೂ ವಂಚನೆ ಎಸಗಿರುವ ಆರೋಪ ಕೊಪ್ಪಳ ಜಿಲ್ಲೆಯಲ್ಲಿ ಕೇಳಿಬಂದಿದೆ.
ಅಂಗನವಾಡಿ ಮಕ್ಕಳಿಗೆ ಕೊಡುವ ಮೊಟ್ಟೆಯನ್ನು ವಾಪಸ್ ಕಸಿದುಕೊಂಡು ವಂಚನೆ ಎಸಗುತ್ತಿದ್ದ ಆರೋಪದ ಮೇಲೆ ಅಂಗನವಾಡಿ ಕಾರ್ಯಕರ್ತೆ ಲಕ್ಷ್ಮಿ, ಸಹಾಯಕಿ ಶೈನಜಾಬೇಗಂ ಅವರನ್ನ ಅಮಾನತು ಮಾಡಲಾಗಿದೆ. ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಗುಂಡೂರು ಗ್ರಾಮದ ಗ್ರಾಮದ 2ನೇ ಅಂಗನವಾಡಿ ಕೇಂದ್ರದಲ್ಲಿ ಘಟನೆ ನಡೆದಿದ್ದು, ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಇಬ್ಬರನ್ನೂ ಅಮಾನತುಗೊಳಿಸಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಆದೇಶ ಹೊರಡಿಸಿದ್ದಾರೆ.
ವಿಡಿಯೋ ವೈರಲ್:
ಕೊಪ್ಪಳ ಜಿಲ್ಲೆಯಲ್ಲಿ ಅಂಗನವಾಡಿ ಮಕ್ಕಳಿಗೆ ವಿತರಿಸುವ ಮೊಟ್ಟೆಯಲ್ಲಿ ಗೋಲ್ಮಾಲ್ ನಡೆದಿದೆ. ಕಾರ್ಯಕರ್ತೆಯರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ತಲೆತಗ್ಗಿಸುವಂತ ಕೆಲಸ ಮಾಡಿದ್ದಾರೆ. ಮಕ್ಕಳಿಗೆ ಮೊಟ್ಟೆ ಕೊಟ್ಟು ಫೋಟೋ ಕ್ಲಿಕ್ಕಿಸಿ, ಮಕ್ಕಳು ಬಾಯಿಗಿಡುವ ಮುನ್ನವೇ ಮೊಟ್ಟೆ ಕಸಿದುಕೊಂಡಿದ್ದಾರೆ. ಈ ಅಮಾನವೀಯ ಘಟನೆ ವೀಡಿಯೋದಲ್ಲಿ ಸೆರೆಯಾಗಿದೆ. ಈ ಕೃತ್ಯದ ವಿಡಿಯೋ ವೈರಲ್ ಆಗುತ್ತಿದ್ದಂತೆ ಕಾರ್ಯಕರ್ತೆ, ಸಹಾಯಕಿಯನ್ನು ಅಮಾನತು ಮಾಡಲಾಗಿದೆ. ಇನ್ನು ಸ್ಥಳೀಯರು ಇಬ್ಬರನ್ನೂ ತರಾಟೆಗೆ ತೆಗೆದುಕೊಂಡಿದ್ದಾರೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…