Featured

ಅಂಚೆ ಉಳಿತಾಯ ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ 500 ರೂ. ಇರುವುದು ಕಡ್ಡಾಯ -Vishwanews24

ಅಂಚೆ ಉಳಿತಾಯ ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ 500 ರೂ. ಇರುವುದು ಕಡ್ಡಾಯ -Vishwanews24

ಹೊಸದಿಲ್ಲಿ: ಪೋಸ್ಟ್ ಆಫೀಸ್ ಉಳಿತಾಯ ಖಾತೆಗಳಲ್ಲಿಯೂ ಕನಿಷ್ಠ ಬ್ಯಾಲೆನ್ಸ್ ಕಡ್ಡಾಯ ನಿಯಮ ಜಾರಿಗೆ ಬರಲಿದೆ. ಹೀಗೆಂದು ಸ್ವತಃ ಭಾರತೀಯ ಅಂಚೆ ಇಲಾಖೆಯೇ ಟ್ವೀಟ್ ಮಾಡಿದೆ.

ಅಂಚೆ ಕಚೇರಿ ಉಳಿತಾಯ ಖಾತೆಗಳಲ್ಲಿ 500 ರೂ. ಕನಿಷ್ಠ ಬ್ಯಾಲೆನ್ಸ್ ಕಾಯ್ದುಕೊಳ್ಳಬೇಕಿದೆ ಈ ಅಧಿಕೃತ ನಿಯಮ ಡಿ.11 ರಿಂದ ಜಾರಿಯಾಗಲಿದ್ದು ಅದರೊಳಗಾಗಿ 500 ರೂ ಮೆಂಟೇನ್ ಮಾಡಿ.

ಇಲ್ಲದಿದ್ದರೆ, ಖಾತೆಯಿಂದ ನಿರ್ವಹಣ ವೆಚ್ಚ ಕಡಿತ ಗೊಳ್ಳುತ್ತದೆ ಎಂದು ಟ್ವೀಟ್ ನಲ್ಲಿ ಹೇಳಲಾಗಿದೆ.ವಿತ್ತೀಯ ವರ್ಷದ ಅಂತ್ಯದಲ್ಲಿ ಖಾತೆಯಲ್ಲಿ ಕನಿಷ್ಠ ಮೊತ್ತ 500 ರೂ.ಗಳು ಇಲ್ಲವೆಂದಾದಲ್ಲಿ, ಖಾತೆ ನಿರ್ವಹಣ ವೆಚ್ಚದ ರೂಪದಲ್ಲಿ 100 ರೂ.ಗಳನ್ನು ಕಡಿತ ಮಾಡಲಾಗುತ್ತದೆ.

ಒಂದು ವೇಳೆ, ಉಳಿತಾಯ ಖಾತೆಯಲ್ಲಿ ಶೂನ್ಯ ಮೊತ್ತವಿದ್ದರೆ, ಆಗ ತನ್ನಿಂತಾನೇ ಆ ಖಾತೆ ರದ್ದಾಗಲಿದೆ. ಇದಲ್ಲದೇ, ತಿಂಗಳ 10ನೇ ದಿನಾಂಕ ದಿಂದ ಕೊನೆಯ ದಿನಾಂಕದವರೆಗಿನ ಅವಧಿಯಲ್ಲಿ ಖಾತೆಯಲ್ಲಿ 500 ರೂ.ಗಳಿಗಿಂತ ಕಡಿಮೆ ಮೊತ್ತವಿದ್ದರೆ, ಆ ತಿಂಗಳ ಬಡ್ಡಿಯೂ ಸಿಗುವುದಿಲ್ಲ ಎಂದೂ ಅಂಚೆ ಇಲಾಖೆ ಸ್ಪಷ್ಟಪಡಿಸಿದೆ.

ಪಿಂಚಣಿದಾರರಿಗೆ ಶೂನ್ಯ ಬಾಕಿಯಿಲ್ಲ!
ಈವರೆಗೆ ಪಿಂಚಣಿದಾರರಿಗೆ ಶೂನ್ಯ ಬಾಕಿಯ ಖಾತೆಗಳನ್ನು ತೆರೆಯಲಾಗುತ್ತಿತ್ತು. ಈ ಮೊದಲು ಅಂಚೆ ಇಲಾಖೆಯಲ್ಲಿ ಎಸ್‌ಬಿ ಖಾತೆದಾರರಿಗೆ ಕನಿಷ್ಠ 50 ರೂ. ಮಿನಿಮಮ್‌ ಬ್ಯಾಲೆನ್ಸ್‌ ಕಡ್ಡಾಯವಾಗಿತ್ತು. ಈಗ 500 ರೂ. ಕಡ್ಡಾಯವಾಗಿ ಹೊಂದಿರಬೇಕು. ಅಂಚೆ ಕಚೇರಿಯ ಎಸ್‌.ಬಿ. ಖಾತೆಗಳಲ್ಲಿ ಕನಿಷ್ಠ ಶುಲ್ಕ 500 ರೂಪಾಯಿ ಬ್ಯಾಲೆನ್ಸ್‌ ಉಳಿಸುವಂತೆ ಗ್ರಾಹಕರಿಗೆ ಸೂಚನೆ ನೀಡಲಾಗಿದೆ. ಇಲ್ಲದಿದ್ದರೆ ಖಾತೆ ನಿರ್ವಹಣೆ ವೆಚ್ಚವೆಂದು 100 ರೂ. ಶುಲ್ಕ ಕಡಿತ ಮಾಡಲಾಗುವುದು.

ಖಾತೆಯಲ್ಲಿ ಹಣ ಇಲ್ಲದಿದ್ದರೆ ಅಂತಹ ಖಾತೆ ತನ್ನಿಂತಾನೇ ಅಂತ್ಯವಾಗುತ್ತದೆ. ಅಂಚೆ ಕಚೇರಿ ಉಳಿತಾಯ ಖಾತೆಗೆ ಶೇ. 4ರಷ್ಟು ಬಡ್ಡಿ ನೀಡುತ್ತಿದ್ದು, ವಿನಿಮಯ ಬ್ಯಾಲೆನ್ಸ್‌ ಕಾಯ್ದುಕೊಳ್ಳದವರು ನಿರ್ವಹಣೆ ಶುಲ್ಕ ಭರಿಸಬೇಕು ಎಂದು ಹೇಳಲಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬೆಂಗಳೂರಿನ ಜಿಪಿಒ ಚೀಫ್‌ ಪೋಸ್ಟ್‌ ಮಾಸ್ಟರ್‌ ಕೆ. ರಾಧಾಕೃಷ್ಣ, ”ಬ್ಯಾಂಕ್‌ನಲ್ಲಾದರೆ ಒಂದು ಸಾವಿರ ರೂ. ಇದೆ. ಆದರೆ ಅಂಚೆ ಇಲಾಖೆಯಲ್ಲಿ 500 ರೂ. ಮಾತ್ರ ಇದೆ. ಖಾತೆ ಜೀವಿತಾವಧಿಯಲ್ಲಿ ಒಂದು ಬಾರಿ ಪಾವತಿಸಿದರಾಯಿತು,” ಎಂದಿದ್ದಾರೆ.

Vishwa News 24

Recent Posts

ಸಿದ್ದರಾಮಯ್ಯ ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ ಗೊತ್ತಿಲ್ಲ : ಶೋಭಾ ಕರಂದ್ಲಾಜೆ – vishwanews24

ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೂ ಗ್ಯಾರಂಟಿಯಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು: ಸಿದ್ದರಾಮಯ್ಯ  ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ…

17 hours ago

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ – vishwanews24

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ…

17 hours ago

ಕಾಪು ಶ್ರೀ ಹಳೇ ಮಾರಿಯಮ್ಮ ದೇವಿಗೆ ವಿಶೇಷ ಲಕ್ಷಪುಷ್ಪಾರ್ಚನೆ – vishwanews24

ಕಾಪು ಹಳೇ ಮಾರಿಯಮ್ಮ ದೇವಿಗೆ ಲಕ್ಷಪುಷ್ಪಾರ್ಚನೆ 135 ಕೆಜಿ ಕೆಂಪು ಕೇಪುಳ ಹೂ, 1,200ಕ್ಕೂ ಅಧಿಕ ಚೆಂಡು ಮಲ್ಲಿಗೆ ಸಮರ್ಪಣೆ…

18 hours ago

ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ – vishwanews24

ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ ಮಂಗಳೂರು: ನಗರದ ಕುಲಶೇಖರದ ಕೊಂಗೂರು ನಿವಾಸಿಗಳಾದ…

19 hours ago

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು – vishwanews24

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು ಶಿರ್ವ: ಪತ್ನಿ, ಆಕೆಯ ಸಹೋದರಿ ಮತ್ತು ಪತ್ನಿಗೆ ಇನ್‌ಸ್ಟಾಗ್ರಾಮ್…

19 hours ago

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ – vishwanews24

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ ಹಳೆಯಂಗಡಿ: ಕಿನ್ನಿಗೋಳಿಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಸರ್ವಿಸ್ ಬಸ್ಸಿಗೆ…

20 hours ago