ಬೆಂಗಳೂರು: ಅಂಚೆ ಕಛೇರಿಗಳ ಮೂಲಕ ಗ್ರಾಹಕ ಸೇವೆಗಳನ್ನು ಪ್ರಾರಂಭಿಸಿದ ಎರಡು ತಿಂಗಳಲ್ಲಿ, ಕರ್ನಾಟಕವು ವಹಿವಾಟು ಮತ್ತು ಆದಾಯ ಸಂಗ್ರಹಣೆಯಲ್ಲಿ ದೇಶದಲ್ಲೇ ಎರಡನೇ ಸ್ಥಾನ ಪಡೆದ ಹೆಗ್ಗಳಿಕೆಗೆ ಪಾತ್ರವಾಗಿದೆ.
ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ವಿಶೇಷ ಉದ್ದೇಶದ ವಾಹನವಾದ ನಾಗರಿಕ ಸೇವಾ ಕೇಂದ್ರ(ಸಿಎಸ್ಸಿ) ಸಾಮಾನ್ಯ ಸೇವಾ ಕೇಂದ್ರದೊಂದಿಗಿನ ಒಪ್ಪಂದದ ಆಧಾರದ ಮೇಲೆ ಕಳೆದ ವರ್ಷ ಡಿಸೆಂಬರ್ 15 ರಿಂದ ರಾಜ್ಯದ ಒಟ್ಟು 1,701 ಅಂಚೆ ಕಚೇರಿಗಳ ಪೈಕಿ 851 ರಲ್ಲಿ ಶುರು ಮಾಡಲಾಯಿತು.
ಆರ್ಥಿಕ ಪರಿಸ್ಥಿತಿ ಹದಗೆಡಲು ಮೋದಿ ಸರ್ಕಾರದ ತಪ್ಪು ನಿರ್ವಹಣೆಯೇ ಕಾರಣ : ಕಾಂಗ್ರೆಸ್ ವಾಗ್ದಾಳಿ -Vishwanews24
ಈ ಸಿಎಸ್ಸಿಗಳ ಮೂಲಕ ನಾಗರಿಕರು ವ್ಯಾಪಾರಿಯಿಂದ ಗ್ರಾಹಕ ಸೇವೆ (ಬಿ 2 ಸಿ) ಮತ್ತು ಸರ್ಕಾರದಿಂದ ನಾಗರಿಕ ಸೇವೆಗಳನ್ನು (ಜಿ 2 ಸಿ) ಪಡೆಯಬಹುದು. ಬಿ 2 ಸಿ ಸೇವೆಗಳಲ್ಲಿ ಮೊಬೈಲ್ ರೀಚಾರ್ಜ್, ನೀರು, ಅನಿಲ ಮತ್ತು ವಿದ್ಯುತ್ ಬಿಲ್ಗಳ ಪಾವತಿ, ವಿಮಾ ನವೀಕರಣ, ಇಎಂಐ ಪಾವತಿ, ವಿಮಾನ, ರೈಲು ಮತ್ತು ಬಸ್ ಇತ್ಯಾದಿ ಸೇರಿವೆ. ಜಿ2ಸಿ ಸೇವೆಯಲ್ಲಿ ಪ್ಯಾನ್ ಕಾರ್ಡ್, ಇ-ಸ್ಟ್ಯಾಂಪಿಂಗ್ ಸೇವೆಗಳು ಮತ್ತು ಜೀವನ್ ಪ್ರಮಾಣ್ ಪತ್ರ (ಡಿಜಿಟಲ್ ಲೈಫ್ ಸರ್ಟಿಫಿಕೇಟ್), ಇತ್ಯಾದಿ ಸೇವೆ ಸಿಗುತ್ತವೆ.
ಕರ್ನಾಟಕ ಸರ್ಕಲ್ನ ಬಿಸಿನೆಸ್ ಡೆವಲಪ್ಮೆಂಟ್ನ ಸಹಾಯಕ ಪೋಸ್ಟ್ ಮಾಸ್ಟರ್ ಜನರಲ್ (ಎಪಿಎಂಜಿ) ವಿ ತಾರಾ, ‘ನಾವು ಸಿಎಸ್ಸಿಗಳ ಮೂಲಕ ಇಲ್ಲಿಯವರೆಗೆ ಸುಮಾರು 20,000 ವಹಿವಾಟುಗಳನ್ನು ನಡೆಸಿದ್ದೇವೆ. ನಮ್ಮ ಆದಾಯ ಸಂಗ್ರಹವು ಇಲ್ಲಿಯವರೆಗೆ 61,36,986 ರೂ.ಆಗಿದೆ. ನಾವು ಎರಡನೇ ಸ್ಥಾನದಲ್ಲಿದ್ದೇವೆ. ದೇಶದ ಗ್ರಾಮೀಣ ಮತ್ತು ದೂರದ ಪ್ರದೇಶಗಳಲ್ಲಿನ ನಾಗರಿಕರಿಗೆ ಜಿ 2 ಸಿ ಮತ್ತು ಬಿ 2 ಸಿ ಸೇವೆಗಳನ್ನು ಒದಗಿಸುವ ಮೂಲಕ, ಸಾಮಾಜಿಕವಾಗಿ ಆರ್ಥಿಕವಾಗಿ ಮತ್ತು ಡಿಜಿಟಲ್ನಲ್ಲಿ ಎಲ್ಲರನ್ನೂ ಒಳಗೊಂಡ ಸಮಾಜವನ್ನು ರಚಿಸಲಾಗುತ್ತಿದೆ’ ಎಂದು ಹೇಳಿದರು.
ಮಾರ್ಚ್ 2021 ರ ವೇಳೆಗೆ ರಾಜ್ಯದ ಉಳಿದ 850 ಅಂಚೆ ಕಚೇರಿಗಳು ಈ ಸೇವೆಗಳನ್ನು ನೀಡಲಿವೆ ಎಂದು ಬೆಂಗಳೂರಿನ ಅಂಚೆ ಸೇವೆಗಳ ನಿರ್ದೇಶಕ ಕೆ. ರವೀಂದ್ರನ್ ಹೇಳಿದ್ದಾರೆ.
ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ : ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…
ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…
ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಕೊನೆಗೂ ದಿನಾಂಕ…
ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್ಪಾಲ್ ಯಾದವ್ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…
ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…
ಸುರತ್ಕಲ್ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…